ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿ ವಶ ಇಂಡಿ ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ದಾಳಿ ತೋಟದ ಶೆಡ್‌ನಲ್ಲಿ ಬಚ್ಚಿಟ್ಟಿದ ಖದೀಮರು ಸುಮಾರು ವರ್ಷಗಳಿಂದ ಪಡಿತರ ಅಕ್ಕಿ ಅಕ್ರಮ ಸಾಗಾಟ

by | 13/12/23 | ಕ್ರೈಂ


ಇಂಡಿ
ಆಲಮೇಲ: ಬಡವರಿಗೆ ಹಂಚಿಕೆ ಮಾಡಬೇಕಾದ ಪಡಿತರ

ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಟ್ಟಣದ ಸಿಂದಗಿ ರಸ್ತೆಯ ಕಾಂತಪ್ಪ ಭೂಸನೂರ ಇವರಿಗೆ ಸೇರಿದ ತೋಟದ ಶೆಡ್ ಮೇಲೆ ದಾಳಿ ನಡೆಸಿದ ಅಧಿಕಾರಿಗಳು 125 ಕ್ವಿಂಟಾಲ್ ತೂಕದ 250 ಚೀಲ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ನೇತೃತ್ವದಲ್ಲಿ ತಹಸೀಲ್ದಾರ್ ಸುರೇಶ ಚಾವಲರ್, ಗ್ರಾಮ ಲೆಕ್ಕಾಧಿಕಾರಿ ಪ್ರದೀಪ ದೊಡಮನಿ, ಗ್ರಾಮ ಸಹಾಯಕ ಸೈಪನ ವಾಲಿಕರ ಅವರ ತಂಡ ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 250 ಚೀಲದಷ್ಟು ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದರು.


ಪ್ರಮುಖ ಆರೋಪಿ ಅಶೋಕ ಭೂಸನೂರ ಹಾಗೂ ಇತರರು ಸ್ಥಳದಲ್ಲಿಯೇ ಎರಡು ಗೂಡ್ಸ್ ವಾಹನಗಳನ್ನು ಬಿಟ್ಟು ಪರಾರಿಯಾಗಿದ್ದಾರೆ.

ಆಲಮೇಲ ಪಟ್ಟಣದ ಸಿಂದಗಿ ರಸ್ತೆಯ ಕಾಂತಪ್ಪ ಭೂಸನೂರ ಇವರ ತೋಟದ ಶೆಡ್‌ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದಿರುವುದು. ಎಸಿ ಅಬೀದ್ ಗದ್ಯಾಳ, ತಹಸೀಲ್ದಾ‌ರ್ ಸುರೇಶ ಚಾವಲರ್, ಪ್ರದೀಪ ದೊಡಮನಿ, ಸೈಪನ ವಾಲಿಕಾರ ಇತರರಿದ್ದರು.

ದಾಳಿ ಕುರಿತು ಗದ್ಯಾಳ ವಿಜಯವಾಣಿಯೊಂದಿಗೆ ಮಾತನಾಡಿ, ಈ ಭಾಗದಲ್ಲಿ

ಬಹಳ ಅವ್ಯಾಹತವಾಗಿ ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ತಾಲೂಕಿನಾದ್ಯಂತ ಅಕ್ಕಿ ಸಂಗ್ರಹದ ಕುರಿತು ಈ ಮಾಹಿತಿಗಳನ್ನು ಕಲೆ ಹಾಕಲಾಗುತ್ತಿದೆ. ಈ ದಂಧೆಯಲ್ಲಿ – ಯಾರಾರು ಶಾಮೀಲಾಗಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಜರುಗಿಸಲಾಗುವುದು. ಇಂದು ವಶಪಡಿಸಿಕೊಂಡಿರುವ ಅಕ್ಕಿಯ ಮೊತ್ತ ಎಷ್ಟು ಎಂದು ಇನ್ನು ತಿಳಿದು ಬಂದಿಲ್ಲ ಎಂದರು. ಸ್ಥಳಕ್ಕೆ ಸಿಂದಗಿ ಸಿಪಿಐ ಡಿ. ಹುಲುಗಪ್ಪ, ಪಿಎಸ್‌ಐ, ಕುಮಾರ ಹಾಡಕಾರ, ಆಹಾರ ನಿರೀಕ್ಷಕ ರಮೇಶ ತಳವಾರ ಭೇಟಿ ನೀಡಿ 250 ಚೀಲ ಅಕ್ಕಿ ಹಾಗೂ ಆರೋಪಿತರು ಅಕ್ರಮ ದಂಧೆಗೆ ಬಳಸುತ್ತಿದ್ದ ಎರಡು ಕೈ ವಾಹನಗಳು ಜಪ್ತಿ ಮಾಡಿದ್ದಾರೆ. ಈ ಕುರಿತು ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ. ಪೊಲೀಸ್ ಸಿಬ್ಬಂದಿ ಎಸ್.ಕೆ. ವಾಗಮೋರೆ, ಆರ್.ಎಸ್. ಪಾಟೀಲ ಇತರರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page