ಚಳ್ಳಕೆರೆ ಜನಧ್ವನಿ ವಾರ್ತೆ ಮಾ.4.ನಗರ ಸೇರಿದಂತೆ ಗ್ರಾಮೀಣ ಅಕ್ರಮವಾಗಿ ಇಸ್ಪೀಟ್ ಆಟ ನಡೆಯುತ್ತಿದ್ದು,ಇದರ ಜತೆ ಅಕ್ರಮ ಮದ್ಯಮಾರಾಟ ಜೋರಾಗಿ ನಡೆಯುತ್ತಿದ್ದರೂ ಕಡಿವಾಣ ಹಾಬೇಕಾದ ಅಧಿಕಾರಿಗಳು ಮೌನವಹಿಸಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಅಕ್ರಮ ಇಸ್ಪೀಟ್ ಹಾಗೂ ಮದ್ಯಮಾರಾಟದಿಂದಿ ಅಪ್ರಪ್ತರೂ ಸಹ ಬಲಿಯಾಗುತ್ತಿದ್ದಾರೆ ಇದರಿಂದಾಗಿ ಹಲವಾರು ಕುಟುಂಬಗಳು ಬೀದಿಗೆ ಬೀಳುವಂತಾಗಿವೆ ಪೊಲೀಸು ಇಲಾಖೆಗೆ ಮಾಹಿತಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಹೆಸರೇಳದ ಮಾಜಿ ಜನಪ್ರತಿನಿಧಿಯೊಬ್ಬರು ಜನಧ್ವನಿಯೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.
ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಮಟ್ಕ.ಇಸ್ಪೀಟ್ ಆಟಕ್ಕೆ ಕಡಿವಾಣ ಹಾಕುವಂತೆ ಈಗಾಗಲೆ ಸಂಘಟನೆಗಳು ಪೋಲಿಸ್ ಇಲಾಖೆಗೆ ಮನವಿ ನೀಡಿದರೂ ಯಾಚುದೇ ಪ್ರಯೋಜವಾಗಿಲ್ಲ ಅಕ್ರಮವಾಗಿ ಇಸ್ಪೀಟ್ ಆಟ ನಡೆಯುತ್ತಿರುವ ಬಗ್ಗೆ ಇಲಾಖೆಗೆ ಮಾಹಿತಿ ನೀಡಿದರೂ ಸಹ ಅಕ್ರಮ ಜೂಜಾಟ.ಮದ್ಯ ಮಾರಾಟಕ್ಕೆ ಕಡಿವಾಣ ಹಾಕದೆ ಇರುವುದು ಸಾರ್ವಜನಿಕರಲ್ಲಿ ಅನುಮಾನಕ್ಕೆ ಎಡೆಮಾಡಿದೆ ಈಗಲಾದರೂ ಸಂಬಂಧಪಟ್ಟ ಇಲಾಖೆ ಅಕ್ರಮ ಇಸ್ಪೀಟ್. ಮದ್ಯಮಾರಾಟಕ್ಕೆ ಕಡಿವಾಣ ಹಾಕುವರೇ ಕಾದು ನೋಡ ಬೇಕಿದೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments