ಚಳ್ಳಕೆರೆ ಜನಧ್ವನಿ ವಾರ್ತೆ ಮಾ.14
ಅಕ್ರಮವಾಗಿ ಗಾಂಜ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ನ್ಯಾಯಂಗ ಬಂದನಕ್ಕೆ ಕಳಿಸಿರುವುದು ವರದಿಯಾಗಿದೆ.
ಚಳ್ಳಕೆರೆ ನಗರದ ಸೋಮಗುದ್ದು ರಸ್ತೆಯಲ್ಲಿ ಇಬ್ಬರು ಯುವಕು ಗಾಂಜಾ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ರಕ್ಷಣಾಧಿಕಾರಿ ಪರಶ್ರಾಂ,ಡಿವೈಎಸ್ಪಿ ರಮೇಶ್ಕುಮಾರ್ ಹಾಗೂ ಠಾಣೆಯ ಪಿಐ ಆರ್ ಎಫ್ ದೇಶಾಯಿ ಮಾರ್ಗದರ್ಶನದಲ್ಲಿ ಪಿಎಸ್ಐ ಸತೀಶ್ ನಾಯ್ಕ ಹಾಗೂ ಸಿಬ್ಬಂದಿ ಸೋಮಗುದ್ದು ರಸ್ತೆ ಅರಣ್ಯ ಪ್ರದೇಶದಲ್ಲಿ ತಳಕು ಗ್ರಾಮದ ಮೆಹಬೂಬ್(33), ಚಳ್ಳಕೆರೆ ಶಾಂತಿನಗರದ ಆಪ್ರೀದಿ(19) ಇಬ್ಬರು ಗಾಂಜ ಮಾರಾಟ ಮಾರುತ್ತಿರುವುದನ್ನು ಖಚಿತ ಪಡಿಸಿಕೊಂಡು ವಶಕ್ಕೆ ಪಡೆದು ಇವರ ಬಳಿ ಇದ್ದ 514 ಗ್ರಾಂ ಗಾಂಜ ವಶಪಡಿಸಿಕೊಂಡು ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments