ಕೂಡ್ಲಿಗಿ : ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ರವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಗೆ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ. ಶ್ರೀನಿವಾಸ ಎನ್.ಟಿ ರವರು ಭಾಗವಹಿಸಿ ಮಾತನಾಡಿ, ತಾಲೂಕಿನ ಹಳ್ಳಿಗಳಲ್ಲಿ ಅಡೆತಡೆ ಇಲ್ಲದೆ ಸಣ್ಣಪುಟ್ಟ ಅಂಗಡಿಗಳಲ್ಲಿ , ಚಿಲ್ಲರೆ ಚಹಾದ ಅಂಗಡಿ ಸೇರಿದಂತೆ ಹಲವಾರು ಮನೆಗಳಲ್ಲಿ ಅಕ್ರಮ ಮಧ್ಯ ಮಾರಾಟ ನಡೆಯುತ್ತಿರುವುದರಿಂದ ಪ್ರೌಢಾವಸ್ಥೆಯ ಮಕ್ಕಳು ಕುಡಿತ ಚಟಕ್ಕೆ ಬಿದ್ದಿದ್ದಾರೆ. ಆದ್ದರಿಂದ ಗ್ರಾಮೀಣ ಭಾಗದ ಸಾರ್ವಜನಿಕರ ದೂರಿನ ಅನ್ವಯ ಪತ್ರಿಕಾ ಮಾಧ್ಯಮಗಳಲ್ಲಿ ವರದಿಯಾಗಿದೆ ಎಂದು ಪತ್ರಿಕೆ ಶಾಸಕರು ತೋರಿಸುತ್ತಿದ್ದಂತೆ ಸಚಿವರು ವಿಚಲಿತರಾದರು. ಮಧ್ಯ ಸೇವನೆಗೆ ಸಣ್ಣ ವಯಸ್ಸಿನ ಯುವಕರು ಚಟಕ್ಕೆ ಬಿದ್ದಿದ್ದಾರೆ ಎಂದರೆ ಏನು ಅರ್ಥ? ನೀವು ಏನು ಮಾಡುತ್ತಿದ್ದೀರಿ? ಎಂದು ಅಬಕಾರಿ ಅಧಿಕಾರಿಗಳ ಮೇಲೆ ಸಿಡಿಮಿಡಿಕೊಂಡರು. ಪಕ್ಕದಲ್ಲಿದ್ದ ಜಿಲ್ಲಾಧಿಕಾರಿಗಳಿಗೆ ಹಾಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಈ ಬಗ್ಗೆ ಗ್ರಾಮೀಣ ಭಾಗದಲ್ಲಿ ಕಠಿಣ ಕ್ರಮ ವಹಿಸುವಂತೆ ಹಾಗೂ ಅಕ್ರಮ ಮದ್ಯದಲ್ಲಿ ಭಾಗಿಯಾಗಿರುವ ಅಂಗಡಿಗಳ ಲೈಸನ್ಸ್ ರದ್ದು ಮಾಡಲು ಖಡಕ್ ಸೂಚನೆ ನೀಡಿದರು & ದಿನಾಲು ನನಗೆ ಮಾಹಿತಿ ನೀಡುವಂತೆ ಸೂಚಿಸಿದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments