ಅಕ್ರಮ‌ ಮದ್ಯ ಮಾರಾಟ ಮಾಡುತ್ತಿದ್ದ ಅಂಗಡಿ ಹಾಗೂ ಮನೆಗಳ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಪ್ರಕರಣ ದಾಖಲು.

by | 26/10/23 | ಕ್ರೈಂ

ಚಳ್ಳಕೆರೆ ಜನಧ್ವನಿ ವಾರ್ತೆ ಅ.26 ವಿವಿಧ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಅಂಗಡಿ ಮನೆಗಳ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ವಿವಿಧೆಡೆ ದಾಳಿ ನಡೆಸಿ, ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮದ್ಯ ಹಾಗೂ ಸಾಗಾಟ ಮಾಡುತ್ತಿದ್ದ ದ್ವಿಚಕ್ರವಾಹನ ವಶಕ್ಕೆ ಪಡೆದು ಒಬ್ಬರನ್ನು ಬಂದಿಸಲಾಗಿದೆ.

ಚಳ್ಳಕೆರೆ ತಾಲೂಕಿನ ಯಾದಲಗಟ್ಟೆ. ಗೋಪನಹಳ್ಳಿ ಸೇರಿದಂತೆ ವಿವಿಧೆಡೆ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ರೈತ ಸಂಘಟನೆ ಹಾಗೂ ಸಾರ್ವಜನಿಕರು ದೂರೂ ಹಾಗೂ ಖಚಿತ ಮಾಹಿತಿ ಮೇರೆಗೆ ಹಾಗೂ ಜಿಲ್ಲಾಧಿಕಾರಿಗಳಿಗೆ, ಯಾದಲಗಟ್ಟೆ ಗ್ರಾಮಸ್ಥರು, ಹಾಗೂ ರೈತ ಸಂಘದ ಮುಖಂಡರು ಸಾಮೂಹಿಕವಾಗಿ ನೀಡಿದ್ದ ಅಕ್ರಮ ಮಧ್ಯ ಮಾರಾಟದ ದೂರು ನೀಡಿದ್ದರಿಂದ ಗುರುವಾರ ಅಬಕಾರಿ ಉಪ ಆಯುಕ್ತರು ಚಿತ್ರದುರ್ಗ ಇವರ ನಿರ್ದೇಶನದ ಮೇರೆಗೆ, ಚಳ್ಳಕೆರೆ ವಲಯ ವ್ಯಾಪ್ತಿಯಲ್ಲಿ ಕೆ.ಟಿ ಧರ್ಮಪ್ಪ ಅಬಕಾರಿ ಉಪ ಅಧೀಕ್ಷಕರು, ಹಿರಿಯೂರು ಉಪ ವಿಭಾಗ ಇವರ ನೇತೃತ್ವದಲ್ಲಿ, ಚಳ್ಳಕೆರೆ ವಲಯದ ಅಬಕಾರಿ ನಿರೀಕ್ಷಕ ಸಿ .ನಾಗರಾಜು, ಹಾಗೂ ವಲಯದ ಸಿಬ್ಬಂದಿಯೊಂದಿಗೆ, ಜಿಲ್ಲಾ ವಿಚಕ್ಷಣ ದಳದ ಅಬಕಾರಿ ನಿರೀಕ್ಷಕಿ ಎ.ವನಿತಾ, ಹಿರಿಯೂರು ವಲಯದ ಅಬಕಾರಿ ನಿರೀಕ್ಷಕಿ ಭಾರತಮ್ಮ, ಮೊಳಕಾಲ್ಮೂರು ವಲಯದ ಅಬಕಾರಿ ನಿರೀಕ್ಷಕ ಸಾಧತ್ ಉಲ್ಲಾ , ಹಾಗೂ ಅಬಕಾರಿ ಉಪ ನಿರೀಕ್ಷಕರುಗಳಾದ ಟಿ.ರಂಗಸ್ವಾಮಿ, ಡಿ.ಟಿ.ತಿಪ್ಪಯ್ಯ, ಬಿ.ವೀರಣ್ಣ, ಸಿದ್ದೇಶ್ ನಾಯ್ಕ್ , ಎನ್.ನಾಗರಾಜ್ ಹಾಗೂ ಸಿಬ್ಬಂದಿಯವರು ಸಾಮೂಹಿಕ ಅಬಕಾರಿ ದಾಳಿಯಲ್ಲಿ ಭಾಗವಹಿಸಿ, ಯಾದಲಗಟ್ಟ ರೆಡ್ಡಿಹಳ್ಳಿ,ಯಲಗಟ್ಟೆ, ಗೋಪನಹಳ್ಳಿ. ಗ್ರಾಮಗಳಲ್ಲಿ ಸಾಮೂಹಿಕ ದಾಳಿ ನಡೆಸಿ , ಒಂದು ದ್ವಿಚಕ್ರವಾಹನ, ಐದು ಆರೋಪಿಗಳನ್ನು ಇಲಾಖಾ ವಶಕ್ಕೆ ಪಡೆದು, ಒಟ್ಟು 23.040 ಲೀಟರ್ ಮಧ್ಯವನ್ನು ವಶಪಡಿಸಿಕೊಂಡು, ಎರಡು ಘೋರ ಪ್ರಕರಣಗಳನ್ನು ಹಾಗೂ ಮೂರು ಪ್ರಕರಣಗಳನ್ನು ದಾಖಲಿಸಿದ್ದು, ಇಬ್ಬರು ಆರೋಪಿಗಳಿಗೆ ನೋಟಿಸ್ ನೀಡಿದ್ದು, ಮೂರು ಆರೋಪಿಗಳಿಗೆ ಇಲಾಖಾ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ, ವಶಪಡಿಸಿಕೊಂಡ ವಾಹನ ಮತ್ತು ಮದ್ಯದ ಅಂದಾಜು ಮೌಲ್ಯ ರೂ 35 ಸಾವಿರ ರೂಪಾಯಿಗಳು ಆಗಿರುತ್ತದೆ. ಚಳ್ಳಕೆರೆ ಅಬಕಾರಿ ಇಲಾಖೆ ಪ್ರಕರಣ ದಾಖಲಿಸಿ ಕೊಂಡಿದೆ. ಮತ್ತೆ ಅಕ್ರಮ ಮದ್ಯ ಮಾರಾಟ ಮಾಡಿದರೆ ಜಾನೂನು ಕ್ರಮ ಕೈಕೊಳ್ಳಲಾಗುವುದು ಎಂದು ಅಬಕಾರಿ ಇಕಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page