ಅಗ್ನಿವೀರ್‍ವಾಯು ಹುದ್ದೆ: ಅರ್ಜಿ ಆಹ್ವಾನ

by | 21/03/23 | ಜನಧ್ವನಿ

ಚಿತ್ರದುರ್ಗ ಮಾ.21:
ಭಾರತೀಯ ವಾಯುಪಡೆಯಲ್ಲಿ ಅವಿವಾಹಿತ ಯುವಕ ಯುವತಿಯರಿಗೆ ವಿಜ್ಞಾನ ಮತ್ತು ವಿಜ್ಞಾನೇತರ ಸ್ಟ್ರೀಮ್‍ಗಳಲ್ಲಿ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್‍ವಾಯು ಹುದ್ದೆಯಲ್ಲಿ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 31 ಅರ್ಜಿ ಸಲ್ಲಿಸಲು ಕೊನೆಯ ದಿನ.
ವಿಜ್ಞಾನ ಸ್ಟ್ರೀಮ್‍ನ ಅಭ್ಯರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಗಣಿತ, ಭೌತಶಾಸ್ತ್ರ ಹಾಗೂ ಇಂಗ್ಲಿಷ್ ವಿಷಯಗಳನ್ನೊಳಗೊಂಡಂತೆ ಶೇ.50 ಅಂಕ ಪಡೆದು ಪಾಸಾಗಿರಬೇಕು. ಇಂಗ್ಲಿಷ್ ವಿಷಯದಲ್ಲಿ ಕನಿಷ್ಟ ಶೇ.50 ಅಂಕ ಪಡೆದಿರಬೇಕು ಅಥವಾ 3 ವರ್ಷಗಳ ಡಿಪ್ಲೊಮಾ ಇನ್ ಇಂಜಿನಿಯರಿಂಗ್‍ನಲ್ಲಿ ಶೇ.50 ಅಂಕದೊಂದಿಗೆ ಮೆಕಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್, ಇನಫರ್ಮೇಷನ್ ಟೆಕ್ನಾಲಜಿ, ಆಟೋಮೊಬೈಲ್, ಇನ್‍ಸ್ಟ್ರೂಮೆಂಟ್ ಟೆಕ್ನಾಲಜಿ ವೃತ್ತಿಗಳಲ್ಲಿ ಪಾಸಾಗಿರಬೇಕು ಹಾಗೂ ವಿಷಯದಲ್ಲಿ ಕನಿಷ್ಟ ಶೇ.50 ಅಂಕ ಪಡೆದಿರಬೇಕು ಅಥವಾ ಎರಡು ವರ್ಷಗಳ ವೃತ್ತಿಪರ ಕೋರ್ಸ್‍ಗಳಲ್ಲಿ ವೃತ್ತಿಯೇತರ ವಿಷಯಗಳಾದ ಗಣಿತ ಹಾಗೂ ಭೌತಶಾಸ್ತ್ರ ವಿಷಯಗಳೊಂದಿಗೆ ಶೇ.50 ಅಂಕ ಪಡೆದು ಪಾಸಾಗಿರಬೇಕು.
ವಿಜ್ಞಾನೇತರ ಸ್ಟ್ರೀಮ್‍ನ ಅಭ್ಯರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಶೇ.50 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಮತ್ತು ಇಂಗ್ಲಿಷ್ ವಿಷಯದಲ್ಲಿ ಕನಿಷ್ಟ ಶೇ.50 ಅಂಕ ಪಡೆದಿರಬೇಕು. ಎರಡು ವರ್ಷಗಳ ವೃತ್ತಿಪರ ಕೋರ್ಸ್‍ಗಳಲ್ಲಿ ಶೇ.50 ಅಂಕಗಳನ್ನು ಪಡೆದು ಪಾಸಾಗಿರಬೇಕು.
ಅಭ್ಯರ್ಥಿಗಳು 2002ರ ಡಿಸೆಂಬರ್ 26 ರಿಂದ 2006ರ ಜೂನ್ 26 ರ ನಡುವೆ ಜನಿಸಿದವರಾಗಿರಬೇಕು. ಪುರುಷರು 152.5 ಸೆಂ.ಮೀ ಹಾಗೂ ಮಹಿಳೆಯರು 152 ಸೆಂ.ಮೀ ಎತ್ತರವಿರಬೇಕು ಮತ್ತು ಎತ್ತರಕ್ಕೆ ಅನುಗುಣವಾದ ತೂಕ ಹೊಂದಿರಬೇಕು.
ನೇಮಕಾತಿ ಪ್ರಕ್ರಿಯೆಯು ಎರಡು ಹಂತದ ಆನ್‍ಲೈನ್ ಪರೀಕ್ಷೆಗಳು, ದೈಹಿಕ ಸಾಮಥ್ರ್ಯ ಪರೀಕ್ಷೆ, ಅಡಾಪ್ಟೀವ್ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಗಳನ್ನು ಒಳಗೊಂಡಿರುತ್ತದೆ.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು http://agnipathvayu.cdc.in ಅಂತರ್ಜಾಲ ತಾಣ ಮೂಲಕ ಆನ್‍ಲೈನ್‍ನಲ್ಲಿ ಮಾರ್ಚ್ 31ರೊಳಗೆ ಅರ್ಜಿ ಸಲ್ಲಿಸುವುದು. ಅರ್ಜಿ ಶುಲ್ಕ ರೂ.250/-ಗಳನ್ನು ಆನ್‍ಲೈನ್ ಮೂಲಕ ಪಾವತಿಸಬೇಕು.
ಹೆಚ್ಚಿನ ವಿವರಗಳನ್ನು http://careerindianairforce.cdac.in ಅಂತರ್ಜಾಲ ತಾಣದಲ್ಲಿ ಪಡೆಯಬಹುದಾಗಿದೆ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಚಿತ್ರದುರ್ಗ ಇಲ್ಲಿ ಖುದ್ದಾಗಿ ಭೇಟಿ ನೀಡಿ ಪಡೆಯಬಹುದಾಗಿದೆ. ದೂರವಾಣಿ ಸಂಖ್ಯೆ 7022459064, 9945587060, 7899785165 ಗೆ ಸಂಪರ್ಕಿಸಬಹುದು ಎಂದು ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
========

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page