ಅಡ್ಡಾದಿಡ್ಡಿ ವಾಹನ ನಿಲುಗಡೆ, ಪಾದಚಾರಿಗಳ ರಸ್ತೆ ಒತ್ತುವರಿ ಅಧಿಕಾರಿಗಳ ನಿರ್ಲಕ್ಷಕ್ಕೆ ಇನ್ನೆಷ್ಟು ವಾಹನ ಸವಾರರಲು ಬಲಿಯಾಗ ಬೇಕು…?

by | 27/03/23 | ಜನಧ್ವನಿ


ಬೆಂಗಳೂರು ಮುಖ್ಯ ರಸ್ತೆಯ ಜೈನ್ ಕಲ್ಯಾಣ ಮಂಟದ ಮುಂಭಾಗದಲ್ಲಿ ಬೈಕ್ ಸವಾರನೊಬ್ಬ ಲಾರಿ ಚಕ್ರಕ್ಕೆ ಸಿಲುಕಿ ಮೃತ ಪಟ್ಟಿರುವುದು.
ಚಳ್ಳಕೆರೆ ಜನಧ್ವನಿ ವಾರ್ತೆ ಮಾ.27
ನಗರದಲ್ಲಿ ದಿನೇದಿನೇ ವಾಹನಗಳ ಸಂಖ್ಯೆ ಹೆಚ್ಚುತ್ತಿದೆ. ಪ್ರಮುಖ ರಸ್ತೆಗಳಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದ್ದು, ದಟ್ಟಣೆ ಹೆಚ್ಚಾಗಿದ್ದು ಅಮಾಯಕ ಯುವಕರು ಬಲಿಯಾಗುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.


ಮುಖ್ಯ ರಸ್ತೆಗೊಂದಿಕೊಂಡು ವಾಹನಗಳನ್ನು ನಿಲುಗಡೆ ಮಾಡಿರುವುದು.
ನಗರದ ಬೆಂಗಳೂರು, ಬಳ್ಳಾರಿ, ಪಾವಗಡ ಹಾಗೂ ಚಿತ್ರದುರ್ಗ ರಸ್ತೆಗಳಲ್ಲಿ ಎಲ್ಲಿಯೂವ ವಾಹನ ನಿಲುಗಡೆಗೆ ಸರಿಯಾದ ಜಾಗವಿಲ್ಲದೆ ರಸ್ತೆಗಳಲ್ಲಿ ಅಕ್ಕ ಪಕ್ಕ, ಪಾದಚಾರಿ ರಸ್ತೆಗಳಲ್ಲಿ ವಾಹನ ಗಳ ನಿಲುಗಡೆ ಹಾಗೂ ವ್ಯಾಪಾರಿಗಳು ರಸ್ತೆಗಳನ್ನು ಅಕ್ರಮಿಕೊಂಡು ವ್ಯಾಪಾರ ವಹಿವಾಟು ನಡೆಸುತ್ತಿರುವುದರಿಂದ ವಾಹನಗಳ ದಟ್ಟಣೆಯ್ನು ನಿಯಂತ್ರಣ ಮಾಡಲು ಪೊಲೀಸರು ಹರಸಹಾಸ ಪಡಬೇಕಾಗಿದೆ.
ಸಾರ್ವಜನಿಕ ತೆರಿಗೆ ಹಣದಲ್ಲಿ ಮಖ್ಯ ರಸ್ತೆಗಳ ಅಗಲೀಕರಣ, ಹಾಗೂ ಪಾದಚಾರಿಗಳ ರಸ್ತೆಗಳನ್ನು ನಿರ್ಮಿಸಿದ್ದು ಇವರುಗಳನ್ನು ವರ್ತಕರು ಅಕ್ರಮಸಿಕೊಂಡು ಶೆಡ್ ನಿರ್ಮಿಸಿಕೊಂಡಿದ್ದಾರೆ ಇದರಿಂದ ವಾಹನಗಳ ಸಂಚಾರಕ್ಕೆ ಕಿರಿಕಿರಿ ಯಾಗುತ್ತಿದೆ.


ಸಾರ್ವಜನಿಕ ಪಾದಚಾರಿಗಳ ರಸ್ತೆಗಳನ್ನು ಒತ್ತುವರಿ ಮಾಡಿಕೊಂಡ ವರ್ತಕರು.
ನಗರದ ಹೃದಯ ಭಾಗದಲ್ಲೇ ರಾಷ್ಟಿçÃಯ ಹೆದ್ದಾರಿ ಹಾದು ಹೋಗಿರುವುದರಿಂದ ಬಳ್ಳಾರಿ, ಬೆಂಗಳೂರು, ಮೈಸೂರು, ಪಾವಗಡ, ಹೊಸಪೇಟೆ. ಕೊಪ್ಪಳ, ಸೇರರಿದಂತೆ ವಿವಿಧ ನಗರಗಳಿಗೆ ಹೋಗುವ ವಾಹನಳ ದಟ್ಟಣೆ ಸಂಚಾರ ಹೆಚ್ಚಾಗಿದೆ. ಮುಖ್ಯ ರಸ್ತೆಗೆ ಹೊಂದಿಕೊAಡು ಕಲ್ಯಾಣ ಮಂಟಪಗಳಿದ್ದು ವಾಹನ ನಿಲುಗಡೆ ಸ್ಥಳವನ್ನು ನಿಗಧಿ ಮಾಡದೆ ಇರುವುದರಿಂದ ಕಲ್ಯಾಣ ಮಂಟಪಗಳಿಗೆ ಬರುವ ವಾಹನಗಳನ್ನು ರಸ್ತೆಯ ಮೇಲೆ ನಿಲ್ಲಿಸಿ ಹೋಗುವುದರಿಂದ ಇರುವ ರಸ್ತೆಯನ್ನು ಅಕ್ರಮಿಸಿಕೊಂಡು ವಾಹನ ದಟ್ಟಣೆ ಉಂಟಾಗುತ್ತಿದೆ ಇದರಿಂದ ಅಪಘಾಗಳ ಸಂಖ್ಯೆ ಹೆಚ್ಚುತ್ತಿದೆ.


ನಗರದ ನೆಹರು ವೃತ್ತದಲ್ಲಿ ರಾಷ್ಟಿçÃಯ ಹೆದ್ದಾರಿ ಹಾದು ಹೋಗಿರುವುರದರಿಂದ ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತವೆ. ಅಲ್ಲದೆ, ಈ ವೃತ್ತಗಳಲ್ಲಿ ವಾಹನ ಸವಾರರು ಮನಬಂದAತೆ ಚಲಾಯಿಸುತ್ತಾರೆ. ಇದರಿಂದ ಅಪಘಾತಗಳು ಸಂಭವಿಸುತ್ತಿವೆ. ಪಾದಚಾರಿಗಳು ಹಾಗೂ ಶಾಲಾ ವಿದ್ಯಾರ್ಥಿಗಳು ಪ್ರಾಣವನ್ನು ಕೈಯಲ್ಲಿಡಿದು ಸಂಚರಿಸುವ ಸ್ಥಿತಿ ಇದೆ. ರಾಷ್ಟಿçÃಯ ಹೆದ್ದಾರಿಯಲ್ಲಿ ಈ ಹಿಂದೆ ಟ್ರಾಫಿಕ್ ಸಿಗ್ನಲ್ ಹಾಗೂ ಸಿಸಿ ಕ್ಯಾಮರಗಳನ್ನು ಅಳವಡಿಸಲಾಗಿತ್ತು ಅವುಗಳು ಕೆಟ್ಟ ನಂತರ ಅಳವಡಿಸದೆ ಇರುವುರಿಂದ ಪ್ರಮುಖ ವೃತ್ತಗಳಲ್ಲಿ ಓಡಾಡಲು ಸಾಧ್ಯವಾಗುತ್ತಿಲ್ಲ.
ಕೂಡಲೆ ಪೊಲೀಸ್ ಇಲಾಖೆ, ನಗರಸಭೆ ಅಧಿಕಾರಿಗಳು ಜಂಟಿಯಾಗಿ ರಸ್ತೆ ಬದಿಯಲ್ಲಿ ಪಾದ ಚಾರಿಗಳ ರಸ್ತೆ ಅಕ್ರಮಸಿಕೊಂಡಿರುವುದನ್ನು ತೆರವುಗೊಳಿಸ ಬೇಕು ಹಾಗೂ ವಾಹನ ನಿಲುಗಡೆಗೆ ಸೂಕ್ತ ಸ್ಥಳವನ್ನು ನಿಗಧಿ ಪಡಿಸಿ ಅಪಘಾತಗಳನ್ನು ತಪ್ಪಿಸ ಬೇಕೆಂದು ಸಾರ್ವಜನಿಕು ಒತ್ತಾಯಿಸಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page