ಅಧಿಕಾರಿಗಳ ವಿರುದ್ಧ ದೂರು ಕೇಳಿಬಂದರೆ ಶಿಸ್ತು ಕ್ರಮ: ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ

by | 02/12/23 | ಸುದ್ದಿ


ಬಳ್ಳಾರಿ,ಡಿ.02
‘ನನ್ನ ಉಸ್ತುವಾರಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ, ಸಾರ್ವಜನಿಕರಿಂದ ದೂರು ಬಂದರೆ ಸುಮ್ಮನಿರುವುದಿಲ್ಲ, ಅಂತಹ ಇಲಾಖೆಯ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು’ ಎಂದು ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಎಚ್ಚರಿಸಿದರು.
ಶನಿವಾರ, ನಗರದ ಜಿಲ್ಲಾ ಪಂಚಾಯತ್ ನಜೀರ್ ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಕರ್ನಾಟಕ ಅಭಿವೃದ್ಧಿ ಎರಡನೇ (ವಾರ್ಷಿಕ) ತ್ರೈಮಾಸಿಕ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾ ಆಯುಷ್ ಇಲಾಖೆಯಲ್ಲಿ ಔಷಧಿ ವಿತರಣೆ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ, ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿ ಬರುತ್ತಿವೆ. ಇಲಾಖೆಯ ಪ್ರಗತಿಯ ಬಗ್ಗೆ ಸಮರ್ಪಕ ಮಾಹಿತಿ ನೀಡುತ್ತಿಲ್ಲ, ಏಕೆ? ಎಂದು ಸಚಿವ ಬಿ.ನಾಗೇಂದ್ರ ಅವರು, ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿಯನ್ನು ಪ್ರಶ್ನಿಸಿದರು.
ಜಿಲ್ಲೆಯಲ್ಲಿ ಶಿಶು ಮರಣ ಪ್ರಮಾಣ ತಗ್ಗಿಸಲು ಕ್ರಮ ವಹಿಸಬೇಕು. ಭ್ರೂಣ ಹತ್ಯೆ ಪತ್ತೆಹಚ್ಚುವುದು ತಡೆಗಟ್ಟಬೇಕು ಹಾಗೂ ಕೆಲವು ಆಸ್ಪತ್ರೆಗಳಲ್ಲಿ ಹಣ ಪಡೆದುಕೊಂಡು ಸೇವೆ ನೀಡುತ್ತಿರುವುದು ಕಂಡುಬರುತ್ತಿದ್ದು, ಈ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ನಿಗಾ ವಹಿಸಬೇಕು ಎಂದು ಸಚಿವ ಬಿ.ನಾಗೇಂದ್ರ ಅವರು ಸೂಚಿಸಿದರು.
ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರು ಮಾತನಾಡಿ, ರಾತ್ರಿ ಸಮಯದಲ್ಲಿ ತುರ್ತು ಸೌಲಭ್ಯಕ್ಕಾಗಿ ಆಸ್ಪತ್ರೆಗಳ ಶುಶೂಷ್ರಕರಿಗೆ ಕರೆ ಮಾಡಿದಾಗ, ಶಾಸಕರ ಕರೆ ಎಂಬುದು ಲೆಕ್ಕಿಸದೇ, ಕರೆ ಸ್ವೀಕರಿಸುವುದಿಲ್ಲ ಎಂದು ಹೇಳಿದರು. ಇದಕ್ಕೆ ಸಚಿವ ಬಿ.ನಾಗೇಂದ್ರ ಮಾತನಾಡಿ, ಯಾರಿಗಾದರೂ ಅಪಘಾತವಾದರೆ, ಅವರನ್ನು ಸಂಪರ್ಕಿಸಿದರೆ, ಕರೆ ಸ್ವೀಕರಿಸುವುದಿಲ್ಲ ಎಂದರೆ ಏನು ಅರ್ಥ? ವೈದ್ಯಾಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದುಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಬ್ಯಾಚ್‍ಗಳ ಕುಡಿಯುವ ನೀರಿನ ಯೋಜನೆಗಳು ಸಮರ್ಪಕವಾಗಿ ಕಾರ್ಯರೂಪಕ್ಕೆ ಬರುತ್ತಿಲ್ಲ ಎಂದು ಸಚಿವ ಬಿ.ನಾಗೇಂದ್ರ ಅವರು ಕಳವಳ ವ್ಯಕ್ತಪಡಿಸಿದರು. ಈ ಕುರಿತು ಮಧ್ಯಪ್ರವೇಶಿಸಿದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಸರ್ಕಾರ ಕುಡಿಯುವ ನೀರಿನ ಯೋಜನೆಗೆ ಸಾಕಷ್ಟು ಹಣ ವ್ಯಯ ಮಾಡುತ್ತಿದೆ, ಆದರೆ ಹಣ ದುರುಪಯೋಗವಾಗುವುದು ತಪ್ಪುತ್ತಿಲ್ಲ, ಮತ್ತು ರಸ್ತೆಗಳು ದುರಸ್ಥಿಗೊಳ್ಳುತ್ತಿರುವುದು ತಪ್ಪುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಬಳ್ಳಾರಿ ತಾಲ್ಲೂಕಿನ ಹರಗಿನಡೋಣಿ, ಜಾನಕುಂಟೆ ಹಾಗೂ ಬೆಳಗಲ್ಲು ಗ್ರಾಮಗಳಿಗೆ ಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಲಿದ್ದು, ಅಲ್ಲಿಪುರ ಕೆರೆಯಿಂದ ಪೈಪ್‍ಲೈನ್ ವ್ಯವಸ್ಥೆ ಕೈಗೊಂಡು ಹರಗಿನಡೋಣಿಯ ಕೆರೆಯಲ್ಲಿ ನೀರು ಸಂಗ್ರಹಿಸುವ ಕೆಲಸ ಮಾಡಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಪ್ರತಿ ತಾಲ್ಲೂಕಿನಲ್ಲಿ ಕೆಟ್ಟು ಹೋಗಿರುವ ಆರ್‍ಓ ಘಟಕಗಳನ್ನು ಗುರುತಿಸಿ, ಅವುಗಳ ದುರಸ್ಥಿಗೆ ಕ್ರಮ ವಹಿಸಬೇಕು. ಅರ್ಹ ಗುತ್ತಿಗೆದಾರರರಿಗೆ ಕಾಮಗಾರಿ ನೀಡಬೇಕು. ಜನರಿಗೆ ಕುಡಿಯುವ ನೀರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು ಎಂದು ಸಚಿವ ಬಿ.ನಾಗೇಂದ್ರ, ತಾಪಂ ಇಓಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಇಂಜಿಯರ್‍ಗಳಿಗೆ ಸೂಚಿಸಿದರು.
ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಪೂರ್ಣ ಮಾಹಿತಿ ನೀಡುವುದು ಸರಿಯಲ್ಲ. ಅಧಿಕಾರಿಗಳು ಮುಂದಿನ ಸಭೆಯಲ್ಲಿ ಸಂಪೂರ್ಣ ಮಾಹಿತಿಯನ್ನು ನೀಡಬೇಕು. ಇಲ್ಲದಿದ್ದಲ್ಲಿ ಶಿಸ್ತಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಸಭೆಯಲ್ಲಿ ಗೈರು ಹಾಜರಾದವರಿಗೆ ನೋಟಿಸ್ ಜಾರಿ ಮಾಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಇಎಸ್‍ಐ ಆಸ್ಪತೆ ನಿರ್ಮಾಣಕ್ಕೆ ಸ್ಥಳ ಮಂಜೂರಾತಿ ಕುರಿತು, ಕಾರ್ಮಿಕ ಇಲಾಖೆಯ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದುಕೊಂಡರು.
ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸುಧೀರ್ಘ ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಸೂರ್ಯವಂಶಿ, ಸಹಾಯಕ ಆಯುಕ್ತ ಹೇಮಂತ್ ಕುಮಾರ್ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page