ಅಧಿಕಾರಿಗಳ ವಿರುದ್ಧ ದೂರು ಕೇಳಿಬಂದರೆ ಶಿಸ್ತು ಕ್ರಮ: ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ

by | 02/12/23 | ಸುದ್ದಿ


ಬಳ್ಳಾರಿ,ಡಿ.02
‘ನನ್ನ ಉಸ್ತುವಾರಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ, ಸಾರ್ವಜನಿಕರಿಂದ ದೂರು ಬಂದರೆ ಸುಮ್ಮನಿರುವುದಿಲ್ಲ, ಅಂತಹ ಇಲಾಖೆಯ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು’ ಎಂದು ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಎಚ್ಚರಿಸಿದರು.
ಶನಿವಾರ, ನಗರದ ಜಿಲ್ಲಾ ಪಂಚಾಯತ್ ನಜೀರ್ ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಕರ್ನಾಟಕ ಅಭಿವೃದ್ಧಿ ಎರಡನೇ (ವಾರ್ಷಿಕ) ತ್ರೈಮಾಸಿಕ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾ ಆಯುಷ್ ಇಲಾಖೆಯಲ್ಲಿ ಔಷಧಿ ವಿತರಣೆ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ, ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿ ಬರುತ್ತಿವೆ. ಇಲಾಖೆಯ ಪ್ರಗತಿಯ ಬಗ್ಗೆ ಸಮರ್ಪಕ ಮಾಹಿತಿ ನೀಡುತ್ತಿಲ್ಲ, ಏಕೆ? ಎಂದು ಸಚಿವ ಬಿ.ನಾಗೇಂದ್ರ ಅವರು, ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿಯನ್ನು ಪ್ರಶ್ನಿಸಿದರು.
ಜಿಲ್ಲೆಯಲ್ಲಿ ಶಿಶು ಮರಣ ಪ್ರಮಾಣ ತಗ್ಗಿಸಲು ಕ್ರಮ ವಹಿಸಬೇಕು. ಭ್ರೂಣ ಹತ್ಯೆ ಪತ್ತೆಹಚ್ಚುವುದು ತಡೆಗಟ್ಟಬೇಕು ಹಾಗೂ ಕೆಲವು ಆಸ್ಪತ್ರೆಗಳಲ್ಲಿ ಹಣ ಪಡೆದುಕೊಂಡು ಸೇವೆ ನೀಡುತ್ತಿರುವುದು ಕಂಡುಬರುತ್ತಿದ್ದು, ಈ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ನಿಗಾ ವಹಿಸಬೇಕು ಎಂದು ಸಚಿವ ಬಿ.ನಾಗೇಂದ್ರ ಅವರು ಸೂಚಿಸಿದರು.
ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರು ಮಾತನಾಡಿ, ರಾತ್ರಿ ಸಮಯದಲ್ಲಿ ತುರ್ತು ಸೌಲಭ್ಯಕ್ಕಾಗಿ ಆಸ್ಪತ್ರೆಗಳ ಶುಶೂಷ್ರಕರಿಗೆ ಕರೆ ಮಾಡಿದಾಗ, ಶಾಸಕರ ಕರೆ ಎಂಬುದು ಲೆಕ್ಕಿಸದೇ, ಕರೆ ಸ್ವೀಕರಿಸುವುದಿಲ್ಲ ಎಂದು ಹೇಳಿದರು. ಇದಕ್ಕೆ ಸಚಿವ ಬಿ.ನಾಗೇಂದ್ರ ಮಾತನಾಡಿ, ಯಾರಿಗಾದರೂ ಅಪಘಾತವಾದರೆ, ಅವರನ್ನು ಸಂಪರ್ಕಿಸಿದರೆ, ಕರೆ ಸ್ವೀಕರಿಸುವುದಿಲ್ಲ ಎಂದರೆ ಏನು ಅರ್ಥ? ವೈದ್ಯಾಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದುಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಬ್ಯಾಚ್‍ಗಳ ಕುಡಿಯುವ ನೀರಿನ ಯೋಜನೆಗಳು ಸಮರ್ಪಕವಾಗಿ ಕಾರ್ಯರೂಪಕ್ಕೆ ಬರುತ್ತಿಲ್ಲ ಎಂದು ಸಚಿವ ಬಿ.ನಾಗೇಂದ್ರ ಅವರು ಕಳವಳ ವ್ಯಕ್ತಪಡಿಸಿದರು. ಈ ಕುರಿತು ಮಧ್ಯಪ್ರವೇಶಿಸಿದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಸರ್ಕಾರ ಕುಡಿಯುವ ನೀರಿನ ಯೋಜನೆಗೆ ಸಾಕಷ್ಟು ಹಣ ವ್ಯಯ ಮಾಡುತ್ತಿದೆ, ಆದರೆ ಹಣ ದುರುಪಯೋಗವಾಗುವುದು ತಪ್ಪುತ್ತಿಲ್ಲ, ಮತ್ತು ರಸ್ತೆಗಳು ದುರಸ್ಥಿಗೊಳ್ಳುತ್ತಿರುವುದು ತಪ್ಪುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಬಳ್ಳಾರಿ ತಾಲ್ಲೂಕಿನ ಹರಗಿನಡೋಣಿ, ಜಾನಕುಂಟೆ ಹಾಗೂ ಬೆಳಗಲ್ಲು ಗ್ರಾಮಗಳಿಗೆ ಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಲಿದ್ದು, ಅಲ್ಲಿಪುರ ಕೆರೆಯಿಂದ ಪೈಪ್‍ಲೈನ್ ವ್ಯವಸ್ಥೆ ಕೈಗೊಂಡು ಹರಗಿನಡೋಣಿಯ ಕೆರೆಯಲ್ಲಿ ನೀರು ಸಂಗ್ರಹಿಸುವ ಕೆಲಸ ಮಾಡಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಪ್ರತಿ ತಾಲ್ಲೂಕಿನಲ್ಲಿ ಕೆಟ್ಟು ಹೋಗಿರುವ ಆರ್‍ಓ ಘಟಕಗಳನ್ನು ಗುರುತಿಸಿ, ಅವುಗಳ ದುರಸ್ಥಿಗೆ ಕ್ರಮ ವಹಿಸಬೇಕು. ಅರ್ಹ ಗುತ್ತಿಗೆದಾರರರಿಗೆ ಕಾಮಗಾರಿ ನೀಡಬೇಕು. ಜನರಿಗೆ ಕುಡಿಯುವ ನೀರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು ಎಂದು ಸಚಿವ ಬಿ.ನಾಗೇಂದ್ರ, ತಾಪಂ ಇಓಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಇಂಜಿಯರ್‍ಗಳಿಗೆ ಸೂಚಿಸಿದರು.
ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಪೂರ್ಣ ಮಾಹಿತಿ ನೀಡುವುದು ಸರಿಯಲ್ಲ. ಅಧಿಕಾರಿಗಳು ಮುಂದಿನ ಸಭೆಯಲ್ಲಿ ಸಂಪೂರ್ಣ ಮಾಹಿತಿಯನ್ನು ನೀಡಬೇಕು. ಇಲ್ಲದಿದ್ದಲ್ಲಿ ಶಿಸ್ತಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಸಭೆಯಲ್ಲಿ ಗೈರು ಹಾಜರಾದವರಿಗೆ ನೋಟಿಸ್ ಜಾರಿ ಮಾಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಇಎಸ್‍ಐ ಆಸ್ಪತೆ ನಿರ್ಮಾಣಕ್ಕೆ ಸ್ಥಳ ಮಂಜೂರಾತಿ ಕುರಿತು, ಕಾರ್ಮಿಕ ಇಲಾಖೆಯ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದುಕೊಂಡರು.
ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸುಧೀರ್ಘ ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಸೂರ್ಯವಂಶಿ, ಸಹಾಯಕ ಆಯುಕ್ತ ಹೇಮಂತ್ ಕುಮಾರ್ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Latest News >>

ಕರ್ನಾಟಕ ಭೀಮಸೇನೆಯ ರಾಜ್ಯಾಧ್ಯಕ್ಷ ಶಂಕರ್ ರಾಮ ಲಿಂಗಯ್ಯನವರ ಆದೇಶದ ಮೇರೆಗೆ ಜಿಲ್ಲಾಪದಾಧಿಕಾರಿಗಳ ಹಾಗೂ ಕಾರ್ಯಕಾರಣಿ ಸಭೆಯ ಉದ್ಘಾಟನೆ ಕಾರ್ಯಕ್ರಮ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಕರ್ನಾಟಕ ಭೀಮ ಸೇನೆ ಸಂಘಟನೆಯನ್ನು ಬಲಪಡಿಸುವ ಮೂಲಕ ಬಡವರಿಗೆ, ನೊಂದವರಿಗೆ, ಶೋಷಿತರಿಗೆ, ಸಮಾಜದ...

ಚಿತ್ರದುರ್ಗ ನಗರದ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಜಿಲ್ಲಾ ನ್ಯಾಯಾಧೀಶರ ಅನಿರೀಕ್ಷಿತ ಭೇಟಿ ಅಂಗನವಾಡಿ ಕೇಂದ್ರದ ಕಟ್ಟಡ, ನಿರ್ವಹಣೆ ಬಗ್ಗೆ ತೀವ್ರ ಅಸಮಾಧಾನ

ಚಿತ್ರದುರ್ಗ ಜುಲೈ24: ಚಿತ್ರದುರ್ಗ ನಗರ ವ್ಯಾಪ್ತಿಯ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೊಣ...

ಕೆಎಂಆರ್‌ಸಿ ನಿಧಿಯಡಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಗಣಿ ಪ್ರದೇಶದಲ್ಲಿ ಕ್ಷಯರೋಗ ಪತ್ತೆ ಆಂದೋಲನಕ್ಕೆ ಸೂಚನೆ -ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ ಜುಲೈ23: ಕೆಎಂಇಆರ್‌ಸಿ(ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ) ನಿಧಿಯಡಿ ಜಿಲ್ಲೆಯ ಗಣಿ ಬಾಧಿತ ಪ್ರದೇಶದಲ್ಲಿನ ಆರೋಗ್ಯ...

ರೈತರು ಕೃಷಿಯನ್ನ ವ್ಯವಹಾರಿಕವಾಗಿ ಮಾಡಿ ಹೆಚ್ಚಿನ ಆದಾಯ,ಲಾಭಗಳಿಸುವ ನಿಟ್ಟಿನಲ್ಲಿ ಮುನ್ನಡೆಯಬೇಕು ಆಡಳಿತ ಮಂಡಳಿ ಸದಸ್ಯರಾದ ಡಾಪಿ.ಕೆ.ಬಸವರಾಜ್

ಹಿರಿಯೂರು: ರೈತರು ಕೃಷಿಯನ್ನು ವ್ಯವಹಾರಿಕವಾಗಿ ಮಾಡಿ ಹೆಚ್ಚಿನ ಆದಾಯ ಹಾಗೂ ಲಾಭಗಳಿಸುವ ನಿಟ್ಟಿನಲ್ಲಿ ಮುನ್ನಡೆಯಬೇಕು ಎಂಬುದಾಗಿ ಕೆಳದಿ...

ದಕ್ಷಿಣಕಾಶಿ ಖ್ಯಾತಿಯ ಹಿರಿಯೂರಿನ ಮೂಲಸೌಕರ್ಯ ಅಭಿವೃದ್ಧಿಗೆ ವೇಗವನ್ನು ನೀಡಲು ಸ್ಮಾರ್ಟ್ ಸಿಟಿ ಸ್ಪರ್ಷ ನೀಡಲಾಗುವುದು:ಉಸ್ತುವಾರಿಸಚಿವರಾದ ಡಿ.ಸುಧಾಕರ್

ಹಿರಿಯೂರು: ದಕ್ಷಿಣಕಾಶಿ ಖ್ಯಾತಿಯ ಹಿರಿಯೂರಿನ ಮೂಲ ಸೌಕರ್ಯ ಅಭಿವೃದ್ಧಿಗೆ ವೇಗವನ್ನು ನೀಡುವ ಉದ್ದೇಶದಿಂದ ಸ್ಮಾರ್ಟ್ ಸಿಟಿ ಸ್ಪರ್ಷ...

ಜಿಲ್ಲಾ ಮಟ್ಟದ ಸಮನ್ವಯ ಮತ್ತು ಮೇಲ್ವಿಚಾರಣೆ ಸಮಿತಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ರೈತ ಉತ್ಪಾದಕ ಸಂಸ್ಥೆಗಳ ಪ್ರಮಾಣ ಹೆಚ್ಚಿಸಿ

ಚಿತ್ರದುರ್ಗ ಜುಲೈ.23: ಜಿಲ್ಲೆಯಲ್ಲಿ ರೈತ ಉತ್ಪಾದಕ ಸಂಸ್ಥೆಗಳ ಪ್ರಮಾಣ ಹೆಚ್ಚಳಕ್ಕೆ ವಿವಿಧ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು...

ಜುಲೈ 27 ಕ್ಕೆ ಬಯಲುಸೀಮೆ ಮಲೆನಾಡು ಕರಾವಳಿ ಕುಂಚಿಟಿಗರ ಏಕೀಕರಣ ಪ್ರವಾಸ

ಹಿರಿಯೂರಯ ಜು.22 ದಕ್ಷಿಣ ಭಾರತದಲ್ಲಿ ಕುಂಚಿಟಿಗರ ಏಕೀಕರಣ ಮತ್ತು ಧೃವೀಕರಣ ಹೋರಾಟದ ಮುಂದುವರಿದ ಭಾಗವಾಗಿ ಬಯಲುಸೀಮೆ ಮಲೆನಾಡು ಕರಾವಳಿ...

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ಬಾಲ ಗರ್ಭಿಣಿ ಪ್ರಕರಣ : ಎಂ.ಎಲ್.ಸಿ ಹಾಗೂ ಎಫ್.ಐ.ಆರ್ ಕೈಗೊಳ್ಳಲು ಸೂಚನೆ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ

ಚಿತ್ರದುರ್ಗ ಜು 22: ಆಸ್ಪತ್ರೆಗಳಲ್ಲಿ ಬಾಲ ಗರ್ಭಿಣಿ ಪ್ರಕರಣ ಪತ್ರೆಯಾದ ತಕ್ಷಣವೇ ಎಂ.ಎಲ್.ಸಿ (ಮೆಡಿಕೋ ಲೀಗಲ್ ಕೇಸ್) ಮಾಡಿ ಎಫ್.ಐ.ಆರ್....

ತಾಲ್ಲೂಕಿನ ಹಾಲಮಾದೇನಹಳ್ಳಿಯಲ್ಲಿ ವಿದ್ಯುತ್ಅವಗಡ ದುರಸ್ತಿವೇಳೆ ಲೈನ್ ಮ್ಯಾನ್ ಶ್ರೀಶೈಲಾ ಸ್ಥಿತಿಗಂಭೀರ

ಹಿರಿಯೂರು: ತಾಲ್ಲೂಕಿನ ಹಾಲಮಾದೇನಹಳ್ಳಿಯಲ್ಲಿ ವಿದ್ಯುತ್ ದುರಸ್ತಿವೇಳೆ ವಿದ್ಯುತ್ ಪ್ರವಹಿಸಿ ಬೆಸ್ಕಾಂ ಇಲಾಖೆಯ ಶ್ರೀಶೈಲ ಎನ್ನುವ ಲೈನ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page