ಹೊಸದುರ್ಗ: ಜೀವನದಲ್ಲಿ ಜಿಗುಪ್ಪೆಗೊಂಡಿದ್ದ
ಮಹಿಳೆಯೋರ್ವಳು ನದಿಯಲ್ಲಿ ಬಿದ್ದು ಸಾವನ್ನಪ್ಪಿದ
ಘಟನೆ ತಾಲೂಕಿನ ಅತ್ತಿಮಗ್ಗೆ ಗ್ರಾಮದ ಹೊರವಲಯದಲ್ಲಿ ಸಂಭವಸಿದೆ.
ಹೊಸದುರ್ಗ ತಾಲೂಕಿನ ಅತ್ತಿಮಗ್ಗೆ ಗ್ರಾಮದ ಮಡಿವಾಳರ ಲೇ.ನಾಗೇಂದ್ರಪ್ಪ ಎಂಬುವವರ ಪತ್ನಿ ಮಂಜಮ್ಮ (50) ಎಂದು ತಿಳಿದು ಬಂದಿದ್ದು, ಇವರು ಸುಮಾರು ವರ್ಷಗಳಿಂದ ಪಿಟ್ಸ್ ಖಾಯಿಲೆಯಿಂದ ಬಳಲುತ್ತಿದ್ದು, ಸಾಕಷ್ಟು ಬಾರಿ ಆಸ್ಪತ್ರೆಗೆ ತೋರಿಸಿದರೂ ಗುಣಮುಖವಾಗಿರಲಿಲ್ಲ. ಇದರಿಂದ
ಜಿಗುಪ್ಪೆಗೊಂಡು, ಬುಧವಾರ ರಾತ್ರಿ ಸಮೀಪವಿರುವ
ವೇದಾವತಿ ನದಿಯ ಹಿನ್ನೀರು ಪ್ರದೇಶದಲ್ಲಿ ಬಿದ್ದು
ಸಾವನ್ನಪ್ಪಿದ್ದು, ಇವರ ಮೃತದೇಹ ಗುರುವಾರ ಪತ್ತೆಯಾಗಿದೆ.
ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments