ಜನಧ್ವನಿ ವಾರ್ತೆ ಜೂ 17
ಅನ್ನಭಾಗ್ಯ ಭಾಗ್ಯ ಯೋಜನೆಯಡಿ ಉಚಿತ ಪಡಿತರ ವಿತರಣೆಗೆ ಪಡಿತರ ಫಲಾನುಭವಿಗಳಿಂದ ಹಣ ವಸೂಲಿ ಮಾಡುತ್ತಿರುವ ವೀಡಿಯೋ ಸಾಮಾಜಿ ಜಾಲತಾಣದಲ್ಲಿ ಸಕತ್ ವೈರಲ್ ಆಗುತ್ತಿದೆ.
ಹೌದು ಇದು ಚಳ್ಳಕೆರೆ ತಾಲೂಕಿನ ದೇವರಮರಿಕುಂಟೆ ಗ್ರಾಪಂ ವ್ಯಾಪ್ತಿಯ ವಡೇರಹಳ್ಳಿ ಗ್ರಾಮದಲ್ಲಿನ ನ್ಯಾಯಬೆಲೆ ಅಂಗಡಿ ಮಾಲಿಕ ಉಚಿತ ಪಡಿತರ ಅಕ್ಕಿ ನೀಡಲು ಪ್ರತಿಯೊಬ್ಬರಿಂದ 10 ರಿಂದ 20 ರೂ ವಸೂಲಿ ಮಾಡುತ್ತಿರುವ ಬಗ್ಗೆ ವೀಡಿಯೋ ಸಾಮಾಜಿಕ ಜಾಲತಣಾದಲ್ಲಿ ಹರಿದಾಡುತ್ತಿದೆ ಬಡವರಿಗೆಂದು ಉಚಿತವಾಗಿ ನೀಡುತ್ತಿರುವ ಅನ್ನ ಭಾಗ್ಯ ಯೋಜನೆಯಡಿ ಸರಕಾರ ಉಚಿತ ಅಕ್ಕಿ ನೀಡಿದರೆ ನ್ಯಾಯಬೆಲೆ ಅಂಗಡಿಯವರು ಪ್ರತಿ ಪಡಿತರ ಫಲಾನುಭವಿಗಳಿಂದ ಹಣ ವಸೂಲಿ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಕೆಆರ್ಎಸ್ಪಕ್ಷದ ಸಿ.ಮಹೇಶ್ ನಗರಂಗೆರೆ ಮಾತನಾಡಿ ಕೇಂದ್ರ ಹಾಗೂ ರಾಜ್ಯಸರಕಾರ ಬಡವರಿಗೆಂದು ಉಚತವಾಗಿ ಪಡಿತ ವಿತರಣೆ ಮಾಡುತ್ತಿದ್ದು ಇತ್ತ ಪಡಿತರ ವಿತರಣೆ ಮಾಡುವ ನ್ಯಾಯಬೆಲೆ ಅಂಗಡಿ ಮಾಲಿಕರು ಹಣ ಪಡೆಯುವ ಜತೆಗೆ ತೂಕದಲ್ಲಿ ಮೋಸ ಮಾಡುತ್ತಿರುವ ಆರೋಪಗಳು ಕೇಳಿ ಬರುತ್ತಿವೆ. ನ್ಯಾಯಬೆಲೆ ಅಂಗಡಿಗಳ ಮಾಲೀಕರಿಂದಲೇ ಆಹಾರ ಇಲಾಖೆ ಅಧಿಕಾರಿಗಳು ಹಫ್ತಾ ವಸೂಲಿ ಮಾಡುತ್ತಿರುವ ಆರೋಪಗಳು ಕೇಳಿಬಂದಿದೆ. ಇದು ಯಾವುದೋ ಒಂದು ಅಂಗಡಿ ಕಥೆಯಲ್ಲಿ ಎಲ್ಲಾ ನ್ಯಾಯಬೆಲೆ ಅಂಗಡಿಗಲ್ಲಿ ನಡೆಯುತ್ತಿರುವ ತೂಕದಲ್ಲಿ ಮೋಸ ಹಾಗೂ ಹಣ ಪಡೆಯುತ್ತಿರುವುದು ಕೇಳಿ ಬರುತ್ತಿದೆ ಕೂಡಲೇ ಸಂಬAಧಪಟ್ಟ ಅಧಿಕಾರಿಗಳು ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ರಮಗಳಿಗೆ ಕಡಿವಾಣ ಹಾಕದಿದ್ದರೆ ಪ್ರತಿಭಟೆನೆ ಮಾಡುವುದಾಗಿ ಕೆಆರ್ಪಕ್ಷ ಎಚ್ಚರಿಕೆ ನೀಡಿದೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments