ಅಯೋಧ್ಯೆಯಲ್ಲಿ ಶ್ರೀ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಗೆಳೆಯರ ಬಳಗದ ವತಿಯಿಂದ ಸಾರ್ವಜನಿಕರಿಗೆ ಲಾಡು ಪ್ರಸಾದ ಹಂಚಲು ಸಿದ್ದತೆ.

by | 21/01/24 | ಸುದ್ದಿ

ಚಳ್ಳಕೆರೆ: ನಗರದ ಗೆಳೆಯರ ಬಳಗದ ವತಿಯಿಂದ ಅಯೋಧ್ಯೆಯಲ್ಲಿ ಸೋಮವಾರ ನಡೆಯುತ್ತಿರುವ ರಾಮಮಂದಿರದ ಶ್ರೀ ಬಾಲರಾಮನ ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮದ ಅಂಗವಾಗಿ ಸ್ನೇಹ ಬಳಗದ ವತಿಯಿಂದ ಸುಮಾರು 555 ಕೆಜಿಯಷ್ಟು ಲಾಡು ತಯಾರಿಸಲಾಗುತ್ತಿದ್ಧು ಸುಮಾರು 16000 ನಾಗರಿಕರಿಗೆ ಹಂಚಲಾಗುವುದು ಎಂದು ಗೆಳೆಯರ ಬಳಗದ ಡಾ. ಕುಬೇರ ತಿಳಿಸಿದರು.

ಈ ವೇಳೆ ಮಾತನಾಡಿದ ಅವರು ನಗರದ ಹಿಂದೂ ಮುಸ್ಲಿಂ ಕ್ರೈಸ್ತ ಎಲ್ಲಾ ಸಮುದಾಯದ ಜನರು ಜಾತಿ ಮತ ಧರ್ಮದ ಭೇದ ತೊರೆದು ಬಾಲ್ಯ ಸ್ನೇಹಿತರು ವಾಣಿಜ್ಯೋದ್ಯಮಿಗಳು ನಾಗರಿಕರು ಈ ಕಾರ್ಯದಲ್ಲಿ ಕೈಜೋಡಿಸಿದ್ದಾರೆ ಸೋಮವಾರ ಮಧ್ಯಾಹ್ನ 12:30ಕ್ಕೆ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯ ಆರಂಭವಾದ ಕೂಡಲೇ ನಗರದ ಶ್ರೀರಾಮ ಮಂದಿರದ ಬಳಿ  ನೈವೇದ್ಯ ಅರ್ಪಿಸಿ ಪೂಜೆ ಸಲ್ಲಿಸಿ ನಂತರ ನಗರದ ಪಾವಗಡ ರಸ್ತೆ ಮಹದೇವಿ ರಸ್ತೆ ಬೆಂಗಳೂರು ರಸ್ತೆ ಚಿತ್ರದುರ್ಗ ರಸ್ತೆ ಖಾಸಗಿ ಬಸ್ ನಿಲ್ದಾಣ ಬಳ್ಳಾರಿ ರಸ್ತೆ ಸೇರಿದಂತೆ ರಾಜ ಬೀದಿಗಳಲ್ಲಿ ರಾಮನ ಭಾವಚಿತ್ರದೊಂದಿಗೆ ತೆರೆದ ವಾಹನದಲ್ಲಿ ತೆರಳಿ, ಲಾಡು ಪ್ರಸಾದ ಪ್ಯಾಕೆಟ್ ಅನ್ನು ಸಾರ್ವಜನಿಕರಿಗೆ ವಿತರಿಸಿ ಅಯೋಧ್ಯೆಯ ಶ್ರೀರಾಮನಿಗೆ ಭಕ್ತಿ ಸಮರ್ಪಿಸಲಾಗುವುದು ಎಂದು ತಿಳಿಸಿದರು.

ಗೆಳೆಯರ ಬಳಗದ ಮಂಜುನಾಥ್ ಮಾತನಾಡಿ ಸುಮಾರು 500 ವರ್ಷಗಳ ಕನಸಾಗಿದ್ದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿರುವುದು ಸಂತಸ ತಂದಿದೆ ದೇಶದಲ್ಲಿ ತ್ರೇತಾಯುಗದ ವಾತಾವರಣ ಸೃಷ್ಟಿಯಾದಂತೆ ಕಂಡುಬರುತ್ತಿದ್ದು ಸೋಮವಾರ ಯಾವುದೇ ಜಾತಿ ಭೇದ ಭಾವ ಮಾಡದೆ ಈ ಕಾರ್ಯದಲ್ಲಿ ಎಲ್ಲಾ ಸಾರ್ವಜನಿಕರು ಬಂದು ಪ್ರಸಾದ ಸ್ವೀಕರಿಸಬಹುದಾಗಿದೆ ದೇಶದ ಇತಿಹಾಸದಲ್ಲಿ ಅಯೋಧ್ಯೆಯ ಶ್ರೀರಾಮ ಮಂದಿರ ಸೌಹಾರ್ದತೆಯ ಸಂಕೇತವಾಗಿ ಉಳಿಯಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗೆಳೆಯರ ಬಳಗದ ವಂದನ ಮಂಜು ಬಿಸಿನೀರು ಸಂತೋಷ್ ಪ್ರಶಾಂತ್ ಕುಮಾರ್ ಎಂ ಬಾಲಾಜಿ. ಜೈ ಕುಮಾರ್ ಮಾದೇಶ್ ಬಸವರಾಜ್ ಉಮೇಶ್ ರಾಜು ಜೈರಾಮ್ ಬಾಲಾಜಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page