ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ: ಸಾಲಸೌಲಭ್ಯಕ್ಕೆ ಅರ್ಜಿ

by | 17/02/24 | ಆರ್ಥಿಕ

ಚಿತ್ರದುರ್ಗ ಫೆ.17:
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ವತಿಯಿಂದ ಅಲ್ಪಸಂಖ್ಯಾತ ಜನಾಂಗದವರ ಏಳಿಗೆಗಾಗಿ ಸ್ವಯಂ ಉದ್ಯೋಗ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಫೆ.29 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅರ್ಜಿಯನ್ನು https://kmdconline.karnataka.gov.in ಜಾಲತಾಣದ ಮೂಲಕ ಸಲ್ಲಿಸಬಹುದಾಗಿದೆ.
ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್, ಪಾರ್ಸಿಗಳು ಹಾಗೂ ಆಂಗ್ಲೋ ಇಂಡಿಯನ್ ಜನಾಂಗದ ಏಳಿಗೆಗಾಗಿ ಈ ಯೋಜನೆಯಡಿ ಅಲ್ಪಸಂಖ್ಯಾತ ಸಮುದಾಯ ಜನರಿಗೆ ವ್ಯಾಪಾರ, ಸಣ್ಣ ಪ್ರಮಾಣದ ಗುಡಿ ಕೈಗಾರಿಕೆ, ಕೃಷಿ ಆಧಾರಿತ ಚಟುವಟಿಕೆ ಮುಂತಾದವುಗಳನ್ನು ಪ್ರಾರಂಭಿಸಲು ಸಾಲ ಮತ್ತು ಸಹಾಯಧನವಾಗಿ ಘಟಕದ ವೆಚ್ಚ ಶೇ.33% ಅಥವಾ ಗರಿಷ್ಠ ರೂ.1ಲಕ್ಷದವರೆಗೆ ಸಹಾಯಧನ ನೀಡಲಾಗುವುದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿರಬೇಕು. ಕರ್ನಾಟಕದ ನಿವಾಸಿಯಾಗಿರಬೇಕು. ಕನಿಷ್ಟ 18 ವರ್ಷ ಮೇಲ್ಪಟ್ಟು 55 ವರ್ಷದೊಳಗಿರಬೇಕು. ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದವರಿಗೆ ರೂ.81,000/- ಹಾಗೂ ನಗರ ಪ್ರದೇಶದಲ್ಲಿ ರೂ.1,03,000 ಮೀರಿರಬಾರದು. ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೆಂದ್ರ, ರಾಜ್ಯ ಸರ್ಕಾರಿ, ಪಿಎಸ್‍ಯು ಉದ್ಯೋಗಿಯಾಗಿರಬಾರದು. ಕೆ.ಎಂ.ಡಿ.ಸಿಯಲ್ಲಿ ಸುಸ್ಥಿರರಾಗಿರಬಾರದು.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು ಅಥವಾ ದೂರವಾಣಿ ಸಂಖ್ಯೆ 08194-226412, 8277944213 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
==========

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page