ಅವೈಜ್ಞಾನಿಕ ಬೆಳೆವಿಮೆ ಕಂಪನಿಗಳಿಗೆ ವರದಾನ ರೈತರ ಜೇಬಿಗೆ ಕತ್ತರಿ ಸರಕಾರಗಳ ವಿರುದ್ದ ರೈತರ ಅಕ್ರೋಶ

by | 21/02/23 | ಜನಧ್ವನಿ


ಚಳ್ಳಕೆರೆ ಜನಧ್ವನಿ ವಾರ್ತೆ ಫೆ 21.
ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ಬೆಳೆಗಳಿಗೆ ವಿಮೆ ಮಾಡಿಸಿದ ರೈತರು ವಿಮಾ ಮೊತ್ತ ಬರುತ್ತದೆ ಅಂದುಕೊAಡು ರೈತರು ಕಂತು ಕಟ್ಟಿದ್ದಾರೆ. ಆದರೆ, ಒಂದು ವರ್ಷವಾದರೂ ಬೆಳೆ ವಿಮೆ ಬಾರದೆ ಇರುವುದು ರೈತನ್ನು ಮತ್ತಷ್ಟು ಆತಂಕಕ್ಕೆ ದೂಡುವಂತೆ ಮಾಡಿ ಬೆಳೆವಿಮೆ ಕಂಪನಿಗಳ ಮೇಲಿನ ನಂಬಿಕೆ ಕಳೆದುಕದೊಳ್ಳುವಂತೆ ಮಾಡಿದೆ.
ಹೌದು ಚಳ್ಳಕೆರೆ ತಾಲೂಕಿನ ರೈತರು ಸತತ ಕಳೆದ 15 ವರ್ಷಗಳಿಂದಲೂ ಸಕಾಲಕ್ಕೆ ಮಳೆ ಬಳೆ ಸಿಗದೆ ಅತಿ ವೃಷ್ಠಿ-ಅನಾವೃಷ್ಠಿಗೆ ಸಿಲುಕಿ ಬಿತ್ತನೆ ಮಾಡಿದ ಬೆಳೆಗಳು ಕೈಗೆ ಸಿಗದೆ ಸಾಲದ ಸುಳಿಗೆ ಸಿಲುಕಿ ಅನ್ನೆದಾತರು ಸಾವಿನ ಮನೆ ಕದ ತಟ್ಟುವಂತಾಗಿದೆ. ಸಾಂದರ್ಭಿಕ ಚಿತ್ರ
ತಾಲೂಕಿನ ರೈತರು 2022-23 ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಪ್ರಮುಖ ವಾಣೀಜ್ಯ ಬೆಳೆ ಶೇಂಗಾ, ತೊಗರಿ, ಜೋಳ, ಸೇರಿದಂತೆ ವಿವಿಧ ಬೆಳೆಗಳಿಗೆ 45691 ರೈತರು 67780557 ರೂಗಳನ್ನು ಬೆಳೆವಿಮೆ ಕಂಪನಿಗೆ ಕಟ್ಟಿದ್ದು ಶೇ ೭೫ ರಷ್ಟು ಬೆಳೆ ನಷ್ಟವಾಗಿದೆ ಎಂಬ ವರದಿಯನ್ನು ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆ ಸಮೀಕ್ಷೆ ಮಾಡಿ ಸರಕಾರಕ್ಕೆ ವರದಿ ನೀಡಿದ್ದರೂ ಸಹ ರೈತರಿಗೆ ಬೆಳೆ ವಿಮೆ ಪಾವತಿ ಮಾಡದೆ ಇರುವುದು ಅನ್ನದಾತರು ಹಣ ಕಟ್ಟಿ ವಿಮೆಗಾಗಿ ಅಲೆಡುವಂತೆ ಮಾಡಿ ರೈತರನ್ನು ಸಂಕಷ್ಟಕ್ಕೆ ದೂಡುವಂತೆ ಮಾಡಿದೆ.
ಮುಂಗಾರು ಹಂಗಾಮಿನಲ್ಲಿ ಮಳೆ ಕೈಕೊಟ್ಟ ಪರಿಣಾಮ, ಫಸಲ್ ಬಿಮಾ ಯೋಜನೆಯಡಿ ಅರ್ಜಿ ತುಂಬಿ ಕಂತು ಪಾವತಿಸಿರುವ ರೈತರು, ಯೋಜನೆಯ ಅವೈಜ್ಞಾನಿಕ ಮಾನದಂಡಗಳು ಬೇಸರ ತರಿಸಿವೆ

ಸರಕಾರದ ವಿರುದ್ದ ರೈತರ ಅಕ್ರೋಶ.

ಸಾಂದರ್ಭಿಕ ಚಿತ್ರ
ಮತ್ತೊಂದೆಡೆ ಬೆಳೆ ವಿಮೆ ಕುರಿತು ರೈತ ಸಮುದಾಯ ಕೇಂದ್ರ ಸರಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದೆ. ಫಸಲ್ ಬಿಮಾ ಯೋಜನೆ ಜಾರಿಗೊಳಿಸಿ ದೊಡ್ಡ ಆಂದೋಲವನ್ನೇ ಸೃಷ್ಟಿಸಿ ಅಧಿಕಾರಿಗಳು ರೈತರ ಮನೆ ಬಾಗಿಲಿಗೆ ತೆರಳಿ ಯೋಜನೆಯಲ್ಲಿ ರೈತರನ್ನು ತೊಡಗಿಸಿತ್ತು. ತಾಲೂಕಿನಾದ್ಯಂತ ಸುಮಾರು ೪೫೬೯೧ ಸಾವಿರ ರೈತರು ವಿಮೆ ಕಟ್ಟಿದ್ದಾರೆ ಅಕಾಲಿಕ ಮಳೆಗೆ ಬೆಳೆ ಹಾನಿಯಾದರೂ ಸಹ ಬೆಳೆವಿಮೆ ರೈತರಿಗೆ ವಿತರಣೆ ಮಾಡಲು ಕೇಂದ್ರ ಹಾಗೂ ರಾಜ್ಯ ಸರಕಾರದ ಮುಂದಾಗದೆ ಇರುವುದು ರೈತರು ಸರಕಾರ ಹಾಗೂ ಬೆಳೆ ವಿಮೆ ಕಂಪನಿಗಳಿಗೆ ಇಡಿ ಶಾಪ ಹಾಕುತ್ತಿದ್ದಾರೆ.
ಕಂಪನಿಗಳಿಗೆ ವರದಾನ ರೈತರಿಗೆ ಜೇಬಿಗೆ ಕತ್ತರಿ.
ಬೆಳೆ ಹಾನಿ ಕುರಿತು ಕಂದಾಯ, ಕೃಷಿ ಮತ್ತು ವಿಮಾ ಕಂಪನಿ ಅಧಿಕಾರಿಗಳು ಸಮೀಕ್ಷೆ ನಡೆಸುತ್ತಿರುವ ಪದ್ಧತಿ ಅವೈಜ್ಞಾನಿಕವಾಗಿದೆ ಎಂಬುದು ರೈತ ಸಂಘದ ಆರೋಪ. ತಾಲೂಕಿನ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಾವುದೋ ಒಂದು ಮೂಲೆಯಲ್ಲಿ ಉತ್ತಮ ಫಸಲು ಇರುವ ಭೂಮಿಯನ್ನು ಆಯ್ಕೆ ಮಾಡಿಕೊಂಡು ವಿಮೆ ಮಂಜೂರಾತಿಗಾಗಿ ಕಳಿಸಲಾಗುತ್ತಿದೆ.
ಸಾಂದರ್ಭಿಕ ಚಿತ್ರ.
ಇದು ಇಡಿಯಾಗಿ ಆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಭೂಮಿಗಳಿಗೂ ಅನ್ವಯಿಸುತ್ತದೆ. ಇದು ಕಂಪನಿ ಮತ್ತು ಇಲಾಖೆ ಅಧಿಕಾರಿಗಳು ನಡೆಸುತ್ತಿರುವ ರೈತ ವಿರೋಧಿ, ಅವೈಜ್ಞಾನಿಕ ಪದ್ಧತಿಯಾಗಿದೆ. ಕೂಡಲೇ ಈ ಪದ್ಧತಿ ಕೈಬಿಟ್ಟು ಮಳೆ ಕೈಕೊಟ್ಟಿರುವ ಪೂರ್ಣ ಪ್ರದೇಶವನ್ನು ವಿಮೆಗೊಳಪಡಿಸಬೇಕೆಂಬುದು ರೈತ ಮುಖಂಡರ ಹಾಗೂ ರೈತರ ಆಗ್ರಹವಾಗಿದೆ.
ಕೂಡಲೆ ರೈತರು ಕಟ್ಟಿದ ಬೆಳೆ ವಿಮೆ ಪಾವತಿ ಮಾಡದಿದ್ದರೆ ವಿಧಾನಸಾಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವುದಾಗಿ ಸರಕಾರಗಳಿಗೆ ರೈತ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page