ಚಿತ್ರದುರ್ಗ ಅ.30
ಆಯುಷ್ಮಾನ್ ಭವ ಕಾರ್ಯಕ್ರಮದ ಅಡಿಯಲ್ಲಿ ಜಿಲ್ಲೆಯ ಎಲ್ಲಾ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಅಕ್ಟೋಬರ್ 31ರಂದು ವಿಶೇಷ ಆರೋಗ್ಯ ಮೇಳಗಳು ನಡೆಯಲಿವೆ.
ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರಗಳಾದ ಭರಮಸಾಗರ, ಸಿರಿಗೆರೆ, ಬಿ. ದುರ್ಗ, ಬೆಲಗೂರು, ಕಿಟ್ಟದಾಳ್ ಕಂಚಿಪುರ ಶ್ರೀರಾಂಪುರ, ಧರ್ಮಪುರ, ಮರಡಿಹಳ್ಳಿ, ನಾಯಕನಹಟ್ಟಿ, ಪರಶುರಾಮಪುರ ಮತ್ತು ರಾಂಪುರ ಆಸ್ಪತ್ರೆಗಳಲ್ಲಿ ಕಣ್ಣಿನ ಪರೀಕ್ಷೆ ಮತ್ತು ದಂತ ಪರೀಕ್ಷಾ ಸೇವೆಗಳ ಬಗ್ಗೆ ವಿಶೇಷ ಆರೋಗ್ಯ ಮೇಳಗಳು ನಡೆಯಲಿವೆ.
ಹೆಚ್ಚುವರಿಯಾಗಿ ಸಮುದಾಯ ಆರೋಗ್ಯ ಕೇಂದ್ರ ಬಿ ದುರ್ಗ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮತ್ತು ಮಾನಸಿಕ ಆರೋಗ್ಯಕ್ಕೆ ಸಂಬಂಧಪಟ್ಟಂತೆ ತಜ್ಞರಿಂದ ತಪಾಸಣೆ ನಡೆಯಲಿದೆ. ಸಾರ್ವಜನಿಕರು ಆರೋಗ್ಯ ಶಿಬಿರಗಳ ಪ್ರಯೋಜನವನ್ನು ಪಡೆದು ಆರೋಗ್ಯ ಮೇಳ ಕಾರ್ಯಕ್ರಮಗಳನ್ನು ಯಶಸ್ವಿ ಮಾಡಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಕೋರಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments