ಚಿತ್ರದುರ್ಗ:
ಆಗ್ನೇಯ ಶಿಕ್ಷಕರ ಮತ ಎಣಿಕೆ ಕಾರ್ಯ ಬೆಂಗಳೂರಿನಲ್ಲಿ ಮುಂದುವರೆದಿದ್ದು ನಾಲ್ಕನೇ ಸುತ್ತಿನಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಅವರು ಎಲ್ಲರಿಗಿಂತ ಮುನ್ನಡೆ ಸಾಧಿಸಿದ್ದಾರೆ.
ಈಗಾಗಲೇ ಮೊದಲ ಪ್ರಾಶಸ್ತ್ಯ ಮತ ಎಣಿಕೆ ಕಾರ್ಯದಲ್ಲಿ 24094 ಮತಗಳ ಎಣಿಕೆ ಪೂರ್ಣವಾಗಿದೆ. ಡಿ.ಟಿ. ಶ್ರೀನಿವಾಸ್ ಅವರು 8871 ಮತಗಳನ್ನು ಪಡೆದು ಎಲ್ಲರಿಗಿಂತ ಮುನ್ನಡೆ ಸಾಧಿಸಿದ್ದಾರೆ.
ಹಾಲಿ ಬಿಜೆಪಿ ಸದಸ್ಯ ವೈ.ಎ.ನಾರಾಯಣಸ್ವಾಮಿ ಅವರು 7113 ಮತಗಳನ್ನು ಪಡೆದು 2 ನೇ ಸ್ಥಾನಕ್ಕೆ ಕುಸಿದಿದ್ದರೆ, ಇನ್ನು ಪಕ್ಷೇತರ ಅಭ್ಯರ್ಥಿ ವಿನೋದ್ ಶಿವರಾಜ್ ಅವರು 6863 ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.
2ನೇ ಪ್ರಾಶಸ್ತ್ಯದ ಮತಗಳ ಎಣಿಕೆ ಕಾರ್ಯ ಮುಗಿದಿದ್ದು ಡಿ.ಟಿ.ಶ್ರೀನಿವಾಸ್ ಅಪೂರ್ವ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ಪಕ್ಷವು ಆಗ್ನೆಯ ಶಿಕ್ಷಕರ ಕ್ಷೇತ್ರದಲ್ಲಿ ದಾಖಲೆ ನಿರ್ಮಿಸಿದೆ.
ಭಗವಂತನಲ್ಲಿ ಪ್ರೇಮಭಕ್ತಿ ಅವಶ್ಯವಾದದ್ದು:- ಸ್ವಾಮಿ ಪ್ರಕಾಶಾನಂದಜೀ ಮಹಾರಾಜ್ ಅಭಿಪ್ರಾಯ.
ಚಳ್ಳಕೆರೆ:-ನಗರದ ಬೆಂಗಳೂರು ರಸ್ತೆಯಲ್ಲಿರುವ ವಾಸವಿ ಕಾಲೋನಿಯ ಶ್ರೀ ಶಾರದಾಶ್ರಮದಲ್ಲಿ ಆಯೋಜಿಸಿದ್ದ ಎರಡನೇ ದಿನದ ಶ್ರೀಮದ್ ಭಾಗವತ ಸಪ್ತಾಹ...
0 Comments