ಆರ್ಥಿಕ

ಪರಿಶಿಷ್ಟ ಜಾತಿಯ ಚರ್ಮ ಕುಶಲಕರ್ಮಿಗಳಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಚಿತ್ರದುರ್ಗ ಜುಲೈ.26:
ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದಿಂದ ರಾಜ್ಯದ ಪಾರಂಪರಿಕವಾಗಿ ಚರ್ಮಗಾರಿಕೆಯಲ್ಲಿ ತೊಡಗಿರುವ ಕುಟುಂಬಗಳ ಯುವ ಜನರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿಯಲ್ಲಿ ಬರುವ ಮಾದಿಗ, ಸಮಗಾರ, ಡೋರ, ಆದಿ ಜಾಂಬವ, ಮಚಗಾರ, ಮೋಚಿ ಹಾಗೂ ಇತರೆ ಚರ್ಮಗಾರಿಕೆಗೆ ಒಳಪಡುವ ಸಮುದಾಯಗಳಿಗೆ, ಪ್ರಸ್ತುತ ಚರ್ಮ ಉದ್ಯಮದಲ್ಲಿ ಚಾಲ್ತಿಯಲ್ಲಿರುವ ಹೊಸ ತಂತ್ರಜ್ಞಾನಗಳು, ವಿನ್ಯಾಸಗಳು ಹಾಗೂ ಮಾರುಕಟ್ಟೆಯ ಬೇಡಿಕೆಗಳನ್ನು ಪರಿಚಯಿಸಲು ಚರ್ಮ ಆಧಾರಿತ ಕೈಗಾರಿಕೆಗಳಲ್ಲಿ ಮುಂಚೂಣಿಯಲ್ಲಿರುವ ಆಗ್ರಾ, ಉತ್ತರ ಪ್ರದೇಶ ಹಾಗೂ ಕೋಲ್ಕತ್ತ, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿರುವ “ಮೆ. ಸೆಂಟ್ರಲ್ ಫುಟ್‌ವೇರ್ ಟ್ರೆöÊನಿಂಗ್ ಇನ್‌ಸ್ಟಿಟ್ಯೂಟ್” ಕೇಂದ್ರದಲ್ಲಿ 60 ದಿನಗಳ ವಸತಿ ಸಹಿತ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮವಾದ “ ಪುಟ್‌ವೇರ್ ಡಿಸೈನಿಂಗ್ ಅಂಡ್ ಪ್ರೊಡಕ್ಷನ್” ತರಬೇತಿ ಪಡೆಯಲು ಕಳುಹಿಸಲಾಗುವುದು. ಆಸಕ್ತ ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕನಿಷ್ಟ 10ನೇ ತರಗತಿ ತೇರ್ಗಡೆ ಹೊಂದಿರಬೇಕು. 18 ರಿಂದ 40 ವರ್ಷಗಳ ವಯೋಮಿತಿ ಹೊಂದಿರಬೇಕು. ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ವೈಯಕ್ತಿಕ ವಿವರ, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಆಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಪಾಸ್ ಪೋರ್ಟ್ ಅಳತೆಯ 5 ಫೋಟೊಗಳನ್ನು ಸಲ್ಲಿಸಲು ಸೂಚಿಸಿದೆ.
ಅರ್ಹ ಅಭ್ಯರ್ಥಿಗಳಿಗೆ ಪ್ರಯಾಣದ ವೆಚ್ಚಗಳನ್ನು ನಿಗಮದಿಂದ ಭರಿಸಲಾಗುವುದು. ತರಬೇತಿ ಸಂಸ್ಥೆಯಲ್ಲಿ ಉಪಹಾರ, ಬೋಜನಾ ಹಾಗೂ ವಸತಿ ಸೌಲಭ್ಯ ಕಲ್ಪಿಸಲಾಗುವುದು. ಅಭ್ಯರ್ಥಿಗಳಿಗೆ ತರಬೇತಿ ಅವಧಿಗೆ ಮಾತ್ರ ದಿನಕ್ಕೆ ರೂ.200/ ರಂತೆ 60 ದಿನಗಳಿಗೆ ರೂ.12,000/ ಗಳನ್ನು ವೇಜ್ ಲಾಸ್ ಅಲೊವೆನ್ಸ್ ಪಾವತಿಸಲಾಗುವುದು. ಮೊದಲನೇ ಹಂತದಲ್ಲಿ ಮೆ. ಸೆಂಟ್ರಲ್ ಪುಟ್‌ವೇರ್ ಟ್ರೆöÊನಿಂಗ್ ಸೆಂಟರ್ ಉತ್ತರ ಪ್ರದೇಶದ ಆಗ್ರಾದಲ್ಲಿ ಆಗಸ್ಟ್ 19 ರಿಂದ ಪ್ರಾರಂಭವಾಗಿ ಅಕ್ಟೋಬರ್ 18 ರಂದು ಮುಕ್ತಾಯಗೊಳ್ಳುವ ತರಬೇತಿಯನ್ನು 30 ಅಭ್ಯರ್ಥಿಗಳಿಗೆ ನಿಯೋಜಿಸಲಾಗುವುದು.
ಅಗತ್ಯ ದಾಖಲೆಗಳೊಂದಿಗೆ ಚಿತ್ರದುರ್ಗ ನಗರದ ಬಿ.ಡಿ.ರೋಡ್, ಸ್ತ್ರೀ ಶಕ್ತಿ ಶಾಪಿಂಗ್ ಕಾಂಪ್ಲೆಕ್ಸ್, ಲಿಡ್‌ಕರ್ ಲೆದರ್ ಎಂಪೋರಿಯAನ ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ಜಿಲ್ಲಾ ಕಚೇರಿಗೆ ಇದೇ ಜುಲೈ 29 ರೊಳಗೆ ಸಲ್ಲಿಸಬೇಕು ಎಂದು ಲಿಡ್ಕರ್ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಬ್ಯಾಂಕ್ ಗ್ರಾಹಕರಿಗೆ ವಿಮಾ ಸೇವೆ ನೀಡಲಾಗುತ್ತಿದೆ ಗ್ರಾಹಕರು ಬ್ಯಾಂಕ್ ಖಾತೆ ತೆರೆಯುವ ಮೂಲಕ ಸದುಪಯೋಗ ಪಡಿಸಿಕೊಳ್ಳುವಂತೆ ಬ್ಯಾಂಕ್ ವ್ಯವಸ್ಥಾಪಕ ಬಿ.ಎನ್.ಶಿವಪ್ರಸಾದ್


ಚಳ್ಳಕೆರೆ ಜನಧ್ವನಿ ವಾರ್ತೆ ಜು.11 ಕರ್ನಾಟಕ ಬ್ಯಾಂಕ್ ಗ್ರಾಹಕರಿಗೆ ಉತ್ತಮ ಸೇವೆ ನೀಡಲಾಗುತ್ತಿದೆ ಗ್ರಾಹಕರು ಬ್ಯಾಂಕ್ ಖಾತೆ ತೆರೆಯುವ ಮೂಲಕ ಸದುಪಯೋಗ ಪಡಿಸಿಕೊಳ್ಳುವಂತೆ ಬ್ಯಾಂಕ್ ವ್ಯವಸ್ಥಾಪಕ ಬಿ.ಎನ್.ಶಿವಪ್ರಸಾದ್ ಹೇಳಿದರು.
ನಗರದ ಬಳ್ಳಾರಿ ರಸ್ತೆಯಲ್ಲಿರುವ ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ ಶಿಕ್ಷಕ ಶಿವಕುಮಾರ್ ಪಿಎಂಜಿ ಮೆಟಲ್ ಲೈಪ್ ಮೇರಾ ಟರ್ನ್ ಪ್ಲಾನ್ ವಿಮೆ ಮಾಡಿಸಿಕೊಂಡಿದ್ದು ಹೃದಯಾಘತದಿಂದ ಮೃತಪಟ್ಟ ಕಾರಣ ಅವರ ಪತ್ನಿ ಮಹಾಲಕ್ಷ್ಮಿ ಹಾಗೂ ಪುತ್ರಿಯರಿಗೆ 50 ಲಕ್ಷರೂ ಚೆಕ್ ವಿತರಿಸಿ ಮಾತನಾಡಿದರು.
ಮನೆ ಖರೀದಿಲು 30 ಲಕ್ಷ ರೂ ಸಾಲ ಪಡೆದಿದ್ದು ವಿಮೆ ಕಟ್ಟಿದ್ದರಿಂದ ಮನೆಯ 30 ಲಕ್ಷರೂ ಸಾಲಕ್ಕೆ ಜಮೆ ಯಾಗಿದ್ದು ಒಟ್ಟು ಮೃತ ಶಿಕ್ಷಕನ ಕುಟುಂಬಕ್ಕೆ 80 ಲಕ್ಷರೂ ನಮ್ಮ ಶಾಖೆಯಿಂದ ಪಡೆದಿದ್ದಾರೆ.
ಒಂದು ವೇಳೆ ಮೃತ ಶಿಕ್ಷಕರು ಮನೆ ಖರೀದಿ ಸಾಲ ಪಡೆದು ವಿಮೆ ಮಾಡಿಸಸಿದೆ ಇದ್ದು ಮೃತ ಪಟ್ಟಿದ್ದರೆ ಅವರ ಕುಟುಂಬಸ್ಥರು ಸಾಲ ಕಟ್ಟಬೇಕಿತ್ತು ವಿಮೆ ಮಾಡಿಸಿದ್ದರಿಂದ ಸಾಲದ ಹೊರೆಯಿಂದ ಮುಕ್ತರಾಗಿದ್ದಾರೆ.
ಇದೇ ರೀತಿ ನಮ್ಮ ಬ್ಯಾಂಕ್ ಪ್ರತಿಯೊಬ್ಬ ಗ್ರಾಹಕರಿಗೂ ವಿಮಾ ಸೌಲಭ್ಯ ಮಾಡಿಸಲಾಗುವುದು ನಮ್ಮ ಶಾಖೆಯಲ್ಲಿ ಇನ್ನು ಅನೇಕ ಯೋಜನೆಗಳಿದ್ದು ಹೆಚ್ಚಿನ ಮಾಹಿತಿಗೆ ಬ್ಯಾಂಕ್ ಶಾಖೆಯಲ್ಲಿ ವಿಚಾರಿಸಬಹುದಾಗಿದೆ ಎಂದು ತಿಳಿಸಿದರು.
ಸಹಾಯಕ ವ್ಯವಸ್ಥಾಪಕ ಸುಧೀರಪಂಚಮುಖಿ ಮಾತನಾಡಿ ಮನುಷ್ಯ ಹುಟ್ಟಿದ ಮೇಲೆ ಸಾವು ಖಚಿತ ಸಾವು ಮನುಷ್ಯನಿಗೆ ಯಾವಾಗ ಯಾವರೀತಿ ಬರುತ್ತದೆ ಎಂಬುದು ಗೊತ್ತಾಗುವುದಿಲ್ಲ ಪ್ರತಿಯೊಬ್ಬರು ವಿಮೆ ಮಾಡಿಸಿಕೊಂಡರೆ ಸತ್ತವರ ಕುಟುಂಬಗಳಿಗೆ ಆಸರೆಯಾಗುತ್ತದೆ., ಮೃತ ಶಿಕ್ಷಕ 10 ಲಕ್ಷರೂ ವಿಮೆ ಮಾಡಿಸಿದ್ದರು ನಾಲ್ಕು ಕಂತು ಒಂದು ಲಕ್ಷ ವಿಮೆ ಪಾವತಿಸಿದ್ದರು ಈಗ 50 ಲಕ್ಷ ರೂ ಬಂದಿದೆ. ಸಾಲ ಪಡೆದ ಪ್ರತಿಯೊಬ್ಬ ಗ್ರಾಹಕರಿಗೂ ವಿಮೆ ಸೌಲಭ್ಯವಿದ್ದು ಇದನ್ನು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.
ಮೃತಶಿಕ್ಷಕನ ಪತ್ನಿ ಮಹಾಲಕ್ಷ್ಮಿ, ನಿವೃತ್ತ ದೈಹಿಕ ಉಪನ್ಯಾಸಕ ಹೆಚ್.ಟಿ.ತಿಪ್ಪೇಸ್ವಾಮಿ ಮಾತನಾಡಿದರು. ಈ ಸಂದರ್ಭದಲ್ಲಿ ಬ್ಯಾಂಕ್ ಗ್ರಾಹಕರು ಉಪಸ್ಥಿತರಿದ್ದರು.

ಶಕ್ತಿ ಯೋಜನೆ”ಗೆ ವರ್ಷದ ಸಂಭ್ರಮ, ಕೆಎಸ್‍ಆರ್‍ಟಿಸಿಗೆ ರೂ.85.71 ಕೋಟಿ ಆದಾಯ ಚಿತ್ರದುರ್ಗ ಜಿಲ್ಲಾ ಘಟಕ : 2.21 ಕೋಟಿ ನಾರಿಯರು ಉಚಿತ ಪ್ರಯಾಣ


ಚಿತ್ರದುರ್ಗ ಜೂನ್14:
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಜಾರಿಯಾಗಿ ವರ್ಷ ತುಂಬಿದೆ. ಈ ಯೋಜನೆಯಡಿ ಕಳೆದ ಒಂದು ವರ್ಷದಲ್ಲಿ ಜಿಲ್ಲೆಯ ಸಾರಿಗೆ ಸಂಸ್ಥೆಯ ಬಸ್‍ಗಳಲ್ಲಿ 2.21 ಕೋಟಿ ನಾರಿಯರು ಉಚಿತ ಪ್ರಯಾಣ ಬೆಳೆಸಿರುವುದು ಗಮನಾರ್ಹ.
ಮಹಿಳಾ ಸಬಲೀಕರಣ ಉದ್ದೇಶದಿಂದ ಜಾರಿಗೊಳಿಸಿದ ಮಹಿಳೆಯರಿಗೆ ಉಚಿತ ಸಾರಿಗೆ ಸೇವೆ ನೀಡುವ ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗಕ್ಕೆ ಮಹಿಳೆಯರಿಗೆ ನೀಡಿರುವ ಶೂನ್ಯ ದರದ ಟಿಕೆಟ್ ನೀಡಿಕೆ ಮೂಲಕ ರೂ.85.71 ಕೋಟಿ ಆದಾಯ ಲಭಿಸಿದೆ.
ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ಸಮಸ್ತ ನಾರಿಯರ ಸಂಚಾರಕ್ಕೆ ಶಕ್ತಿಯನ್ನು ನೀಡಿದೆ ರಾಜ್ಯ ಸರ್ಕಾರದ ಶಕ್ತಿ ಯೋಜನೆ. ಇದರ ಮೂಲಕ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಗರ ಸಾರಿಗೆ, ಸಾಮಾನ್ಯ ಮತ್ತು ವೇಗದೂತ ಬಸ್ಸುಗಳಲ್ಲಿ ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸಲು ನಾರಿಯರಿಗೆ ಅವಕಾಶ ಲಭಿಸಿದ್ದು, ಜಿಲ್ಲೆಯಲ್ಲಿ ವಾರ್ಷಿಕ ರೂ.85.71 ಕೋಟಿ ವಹಿವಾಟುನೊಂದಿಗೆ ಶಕ್ತಿ ಯೋಜನೆಯು ಮುಂದುವರೆದಿದ್ದು, ಶಕ್ತಿ ಯೋಜನೆಗೆ ಚಾಲನೆ ನೀಡಿದ 2023 ರ ಜೂನ್ 11 ಮೊದಲ ದಿನದಿಂದಲೂ ಇಂದಿನವರೆಗೂ ಮಹಿಳಾ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಯೋಜನೆಯನ್ನು ಬಳಸಿಕೊಳ್ಳುತ್ತಿದ್ದಾರೆ.
ಸಕಾರದ ಶಕ್ತಿ ಯೋಜನೆಯು ಸಾಮಾಜಿಕ ಕ್ಷೇತ್ರದಲ್ಲಿ ಹಲವು ರೀತಿಯ ಬದಲಾವಣೆಗೆ ಸಾಕ್ಷಿಯಾಗಿದೆ. ಮುಖ್ಯವಾಗಿ ಗ್ರಾಮೀಣ ಭಾಗದಿಂದ ನಗರ ಪಟ್ಟಣಗಳಿಗೆ ತೆರಳಿ ದುಡಿಯುವ ಮಹಿಳೆಯರಿಗೆ ವರದಾನವಾಗಿದೆ. ಖಾಸಗಿ ಹಾಗೂ ಅಸಂಘಟಿತ ವಲಯಗಳಲ್ಲಿ ಕೆಲಸ ನಿರ್ವಹಿಸುವ ಮಹಿಳೆಯರು ಸಂಚಾರಿ ವೆಚ್ಚದಿಂದ ಮುಕ್ತರಾಗಿದ್ದಾರೆ. ಮಹಿಳೆಯರು ಸಾಮಾನ್ಯವಾಗಿ ದುಡಿಯಲೆಂದೆ ತಮ್ಮ ತಿಂಗಳ ಆದಾಯದ ಶೇ.10ರಷ್ಟು ಹಣವವನ್ನು ಸಂಚಾರಕ್ಕಾಗಿ ವ್ಯಯಿಸಬೇಕಿತ್ತು. ಇನ್ನು ಶಾಲಾ-ಕಾಲೇಜು ವಿದ್ಯಾರ್ಥಿನಿಯರು ವಾರ್ಷಿಕ ಪಾಸ್ ಪಡೆಯಲು ನೀಡಬೇಕಿದ್ದ ಹಣದಲ್ಲಿಯೂ ಉಳಿತಾಯವಾಗಿದೆ. ಉದ್ಯೋಗ, ಶಿಕ್ಷಣ ಹಾಗೂ ಪ್ರವಾಸ ಸೇರಿದಂತೆ ಹಲವು ಚಟುವಟಿಕೆಗಳಿಗೆ ಶಕ್ತಿ ಯೋಜನೆಯಿಂದ ಶಕ್ತಿ ಲಭಿಸಿದೆ. ಕೆಎಸ್‍ಆರ್‍ಟಿಸಿ ಬಸ್‍ಗಳ ಭರ್ತಿಯ ಜೊತೆಗೆ ನಾರಿಯರು ಆದಾಯ ಹೆಚ್ಚಿಸಿದ್ದಾರೆ. ಧಾರ್ಮಿಕ ಕೇಂದ್ರ ಹಾಗೂ ಪ್ರವಾಸಿ ತಾಣಗಳಿಗೂ ಭೇಟಿ ನೀಡುವವರ ಸಂಖ್ಯೆಯೂ ಹೆಚ್ಚಳಕ್ಕೆ ಕಾರಣವಾಗಿದೆ. ಇದರಿಂದ ಧಾರ್ಮಿಕ ಕೇಂದ್ರಗಳಲ್ಲೂ ದೇಣಿಗೆ ಸಂಗ್ರಹವೂ ಸಹ ದುಪ್ಪಾಟ್ಟಾಗಿದೆ.
20 ಹೆಚ್ಚುವರಿ ಮಾರ್ಗ: ಶಕ್ತಿ ಯೋಜನೆ ಜಾರಿಯಾದ ನಂತರ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಜಿಲ್ಲೆಯಾದ್ಯಂತ 20 ಕ್ಕೂ ಹೆಚ್ಚು ಹೆಚ್ಚುವರಿ ಮಾರ್ಗಗಳನ್ನು ಹೆಚ್ಚಿಸಲಾಗಿದ್ದು, ಪ್ರಯಾಣ ಜನಸಂದಣಿಗೆ ಅನುಗುಣವಾಗಿ ಬೇಡಿಕೆಗೆ ಅನುಸಾರವಾಗಿ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.
30 ಹೊಸ ವಾಹನ ಸೇರ್ಪಡೆ: ಕೆಎಸ್‍ಆರ್‍ಟಿಸಿ ಚಿತ್ರದುರ್ಗ ವಿಭಾಗಕ್ಕೆ ಅಶ್ವಮೇಧ, ವೇಗದೂತ ಸೇರಿದಂತೆ 30 ಹೊಸ ವಾಹನಗಳು ಸೇರ್ಪಡೆಯಾಗಿವೆ.
ಬೇಡಿಕೆ ಅನುಸಾರ ವಾಹನ ಕಾರ್ಯಾಚರಣೆಗೆ ಕ್ರಮ: ಶಕ್ತಿ ಯೋಜನೆ ಜಾರಿಯಾದಾಗಿನಿಂದ ಪ್ರತಿದಿನ ಸರಾಸರಿ 60 ಸಾವಿರಕ್ಕೂ ಹೆಚ್ಚು ಮಹಿಳೆಯರು ಚಿತ್ರದುರ್ಗ ಜಿಲ್ಲೆಯಿಂದ ವಿವಿಧ ಮಾರ್ಗಗಳ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಕಳೆದ ಒಂದು ವರ್ಷದಲ್ಲಿ ಜಿಲ್ಲೆಯ ಸಾರಿಗೆ ಸಂಸ್ಥೆಯ ಬಸ್‍ಗಳಲ್ಲಿ 2.21 ಕೋಟಿ ನಾರಿಯರು ಉಚಿತ ಪ್ರಯಾಣ ಮಾಡಿದ್ದು, ರೂ.85.71 ಕೋಟಿ ಆದಾಯ ಲಭಿಸಿದೆ. ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗೆ ವಾರ್ಷಿಕ ಆದಾಯ ಹೆಚ್ಚಾಗಿದೆ. ಮಾರ್ಗಸೂಚಿ ಹಾಗೂ ಬಸ್ ಬೇಡಿಕೆಗಳನ್ನು ಪರಿಗಣಿಸಿ ಹೆಚ್ಚುವರಿ ಮಾರ್ಗಗಳಿಗೆ ಪ್ರಯಾಣ ಜನಸಂದಣಿಗೆ ಅನುಗುಣವಾಗಿ ವಾಹನ ಕಾರ್ಯಾಚರಣೆ ಮಾಡಲು ತಕ್ಷಣ ಕ್ರಮಕೈಗೊಳ್ಳಲಾಗುವುದು ಎನ್ನುತ್ತಾರೆ ಕೆಎಸ್‍ಆರ್‍ಟಿಸಿ ಚಿತ್ರದುರ್ಗ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ ಹೆಬ್ಬಾಳ್.
ಶಕ್ತಿ ಯೋಜನೆಯಿಂದ ಬಹಳಷ್ಟು ಅನುಕೂಲ: ಕೆಎಸ್‍ಆರ್‍ಟಿಸಿ ಬಸ್‍ಗಳಲ್ಲಿ ಉಚಿತ ಪ್ರಯಾಣ ಇರುವುದರಿಂದ ಬಹಳ ಅನುಕೂಲವಾಗಿದೆ. ಆಧಾರ್ ಕಾರ್ಡ್ ತೋರಿಸಿದರೆ ಸಾಕು ನಯಾಪೈಸೆ ಇಲ್ಲದಿದ್ದರೂ ಬಸ್‍ನಲ್ಲಿ ಪ್ರಯಾಣ ಬೆಳೆಸಬಹುದಾಗಿದೆ. ರಾಜ್ಯ ಸರ್ಕಾರದ ಈ ಯೋಜನೆಯಿಂದ ಮಹಿಳೆಯರಿಗೆ ಬಹಳಷ್ಟು ಅನುಕೂಲವಾಗುತ್ತಿದೆ ಎನ್ನುತ್ತಾರೆ ಚಳ್ಳಕೆರೆ ತಾಲ್ಲೂಕಿನ ಕುರುಡಿಹಳ್ಳಿಯ ಗೌರಮ್ಮ

ಆಡಳಿತ ನ್ಯಾಯಾಧೀಕರಣ ತರಬೇತಿ: ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜೂನ್13:
2024-25ನೇ ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ನೀಡಲು ಪರಿಶಿಷ್ಟ ವರ್ಗದ ಕಾನೂನು ಪದವೀಧರರನ್ನು ಆಯ್ಕೆಮಾಡಬೇಕಾಗಿರುವುದರಿಂದ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಜೂನ್ 18 ರಿಂದ ಜುಲೈ 31 ರವರೆಗೆ ವೆಬ್‍ಸೈಟ್ tw.kar.nic.in ನಲ್ಲಿ ಅರ್ಜಿ ಸಲ್ಲಿಸಿ, ಸಲ್ಲಿಸಿರುವ ಅರ್ಜಿಗಳನ್ನು ಚಿತ್ರದುರ್ಗ ಜಿಲ್ಲಾ ಪರಿಶಿಷ್ಟ ವರ್ಗಗಳ ಕಚೇರಿಗೆ ಜುಲೈ 31ರ ಸಂಜೆ 5.30ರೊಳಗೆ ಸಲ್ಲಿಸಬೇಕು.
ಷರತ್ತುಗಳು: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪರಿಶಿಷ್ಟ ವರ್ಗಕ್ಕೆ ಸೇರಿರಬೇಕು. ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ದಿನಾಂಕಕ್ಕೆ ಕಾನೂನು ಪದವಿಯನ್ನು ಪಡೆದು 02 ವರ್ಷ ಮೀರಿರಬಾರದು. ಬಾರ್ ಕೌನ್ಸಿಲಿಂಗ್‍ನ ಖಾಯಂ ಸದಸ್ಯತ್ವ ಪ್ರಮಾಣ ಪತ್ರ ಸಲ್ಲಿಸಬೇಕು ಹಾಗೂ ತರಬೇತಿಯನ್ನು ಜಿಲ್ಲೆಯಲ್ಲಿಯೇ ಪಡೆಯಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದಂದು ಅಭ್ಯರ್ಥಿಯ ವಯಸ್ಸು 40 ವರ್ಷ ಮೀರಿರಬಾರದು. ಆಯ್ಕೆ ಮಾಡಲಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಸರ್ಕಾರದ ಆದೇಶದಂತೆ ಶಿಷ್ಯ ವೇತನವನ್ನು ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್, ಸರ್ಕಾರಿ ವಕೀಲರು ಅಥವಾ 20 ವರ್ಷಗಳ ಕಾಲ ಕಡಿಮೆ ಇಲ್ಲದ ವಕೀಲ ವೃತ್ತಿಯಲ್ಲಿ ಸೇವೆ ಸಲ್ಲಿಸಿರುವ ನ್ಯಾಯವಾದಿಗಳ ಬಳಿ ತರಬೇತಿ ಪಡೆಯುತ್ತೀರಿ ಎಂಬ ಬಗ್ಗೆ ಲಿಖಿತ ರೂಪದಲ್ಲಿ ತಿಳಿಸಿರಬೇಕು. ತರಬೇತಿಯ ಅವಧಿ 02 ವರ್ಷವಿದ್ದು, ಆಯ್ಕೆಯಾದ ಅಭ್ಯರ್ಥಿಗಳು ಮಧ್ಯದಲ್ಲಿ ಬಿಡುವುದಿಲ್ಲ ಎಂದು, ಒಂದು ವೇಳೆ ಬಿಟ್ಟರೆ ತರಬೇತಿ ಅವಧಿಯಲ್ಲಿ ಪಡೆದಿರುವ ಶಿಷ್ಯ ವೇತನವನ್ನು ಶೇ.10ರಷ್ಟು ರೂಗಳ ಬಡ್ಡಿಯೊಂದಿಗೆ ಸರ್ಕಾರಕ್ಕೆ ಹಿಂತಿರುಗಿಸಿ ಮರುಪಾವತಿ ಮಾಡುವುದಾಗಿ ಮುಚ್ಚಳಿಕೆ ಬರೆದು ಕೊಡಬೇಕು. ಈ ನಿಯಮ ರಾಜ್ಯ ಮತ್ತು ಕೇಂದ್ರ ಸರ್ಕಾರದಲ್ಲಿ ನೌಕರಿ ಪಡೆದರೆ ಅನ್ವಯಿಸುವುದಿಲ್ಲ. ಆಯ್ಕೆಯಾದ ಅಭ್ಯರ್ಥಿಗಳು ಸುಳ್ಳು ಮಾಹಿತಿ ಹಾಗೂ ಸುಳ್ಳು ದಾಖಲೆಗಳನ್ನು ನೀಡಿ ಆಯ್ಕೆಯಾಗಿ ಶಿಷ್ಯ ವೇತನ ಪಡೆದರೆ ಅಂತಹ ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ಪಡೆದ ಶಿಷ್ಯ ವೇತನವನ್ನು ಒಟ್ಟಿಗೆ ಶೇ.10%ರೂಗಳ ಬಡ್ಡಿಯಲ್ಲಿ ಸರ್ಕಾರಕ್ಕೆ ಹಿಂತಿರುಗಿಸಿ ಕಟ್ಟಬೇಕು ತಪ್ಪಿದರೆ ಭೂ ಕಂದಾಯ ಬಾಕಿ ವಸೂಲಿಯಂತೆ ವಸೂಲಿ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ನಿಗಧಿತ ದಿನಾಂಕದೊಳಗೆ ಹಾಜರಾಗದಿದ್ದರೆ ಅಂತಹವರ ಆಯ್ಕೆಯನ್ನು ರದ್ದು ಪಡಿಸಲಾಗುವುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪರಿಶಿಷ್ಟ ವರ್ಗಕ್ಕೆ ಸೇರಿರಬೇಕು. ಪರಿಶಿಷ್ಠ ವರ್ಗದ ಕಾನೂನು ಪದವಿಧರರ ವಾರ್ಷಿಕ ವರಮಾನದ ಮೊತ್ತ 2,50,000/- ಒಳಗಡೆ ಇರಬೇಕು. ಅರ್ಜಿಯೊಂದಿಗೆ ಸಲ್ಲಿಸುವ ಎಲ್ಲಾ ದಾಖಲಾತಿಗಳನ್ನು ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿರಬೇಕು, ತಪ್ಪಿದ್ದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಜಿಲ್ಲಾ ಪರಿಶಿಷ್ಠ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ಚಳ್ಳಕೆರೆ ಶಾಖೆಯ ಇಂಡೆಲ್ ಮನಿ ಕಂಪನಿಗೆ 2023-24ನೇ ಸಾಲಿನ ರಾಜ್ಯಪ್ರಶಸ್ತಿಗೆ ಭಾಜನ.

ಚಳ್ಳಕೆರೆ-05 ನಗರದ ಇಂಡೆಲ್‌ಮನಿ ಶಾಖೆ 2023-24ನೇ ಸಾಲಿನ ವಾರ್ಷಿಕ ಹಣಕಾಸು ವ್ಯವಹಾರಿ ರಾಜ್ಯ ಪ್ರಶಸ್ತಿಯನ್ನು ಲಭಿಸಿದೆ ಎಂದು ಹಿರಿಯ ವಲಯ ವ್ಯವಸ್ಥಾಪಕ ಎಂ.ಶೇಖರ್ ತಿಳಿಸಿದರು.
ಅವರು ನಗರದ ಇಂಡೆಲ್ ಮನಿ ಕಂಪನಿ ಶಾಖೆಯಲ್ಲಿ ಆಯೋಜಿಸಿದ್ದ ವಿಶ್ವಪರಿಸರ‌‌‌ ದಿನಾಚರಣೆ ಮತ್ತು 2023-24ನೇ‌ ಸಾಲಿನ ವಾರ್ಷಿಕ ಹಣಕಾಸು ವ್ಯವಹಾರಿಕ ಕ್ಷೇತ್ರದಲ್ಲಿ ಚಳ್ಳಕೆರೆ ಶಾಖೆ ರಾಜ್ಯಪ್ರಶಸ್ತಿ ಪಡೆದ ಹಿನ್ನೆಲೆಯಲ್ಲಿ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಕಳೆದ 2023ರಲ್ಲಿ ಶಾಖೆಗೆ ವ್ಯವಸ್ಥಾಪಕರಾಗಿ ಬಂದ ವಿ.ಶ್ಯಾಮ್ ಕುಮಾರ್ ಮತ್ತು ಸಿಬ್ಬಂದಿ ವರ್ಗದ ಉತ್ತಮ ಕಾರ್ಯದಿಂದ 2023-24ನೇ‌ ಸಾಲಿನ ವಾರ್ಷಿಕ ಹಣಕಾಸು ವ್ಯವಹಾರಿಕ ಕ್ಷೇತ್ರದಲ್ಲಿ ಶಾಖೆಗೆ ರಾಜ್ಯಪ್ರಶಸ್ತಿ ಪಡೆಯುವಂತಾಗಿದೆ ಎಂದರು.
ಶಾಖೆಯ ವ್ಯವಸ್ಥಾಪಕ ವಿ.ಶ್ಯಾಮ್ ಕುಮಾರ್ ಮಾತನಾಡಿ, ಚಳ್ಳಕೆರೆಯಲ್ಲಿ ಶಾಖೆ ಪ್ರಾರಂಭಗೊಂಡು ಸುಮಾರು ಹತ್ತು ತಿಂಗಳಲ್ಲಿ ಈ ಭಾಗದ ಸಣ್ಣ ಉದ್ದಿಮೆ ಬೆಳವಣಿಗೆಗೆ ಸಾಲ ಸೌಲಭ್ಯ ಕಲ್ಪಿಸಿ ವ್ಯಾಪಾರಿಗಳ ಅಭಿವೃದ್ಧಿ ಸಹಕರಿಸಿದ ಎಂದರು.ಕಾರ್ಯಕ್ರಮದಲ್ಲಿ ಜೆ.ಮಂಜುನಾಥ, ಎನ್.ಟಿ.ತಿಪ್ಪೇಸ್ವಾಮಿ, ದಿನೀಲ್, ಸೌಮ್ಯ ಮುಂತಾದವರು ಇದ್ದರು.

ರೈತರ ಖಾತೆ ಬಂತು ಬೆಳೆವಿಮೆ ಪರಿಹಾರ- ಯುಗಾಧಿ ಮುನ್ನವೇ ರೈತರಿಗೆ ಬೇವು ಬೆಲ್ಲ..

ಚಳ್ಳಕೆರೆ ಜನಧ್ವನಿ ಮಾ.8 ಬಯಲು ಸೀಮೆಯ ರೈತರಿಗೆ ಬಂತು ಫಸಲ್ ಬಿಮಾ ವಿಮಾ ಯೋಜನೆಯ ಮಧ್ಯಂತರ ಪರಿಹಾರ: ಸಂಕಟದಲ್ಲಿರುವ ಅನ್ನದಾತರ ಖಾತೆ ಜಮೆಯಾತ್ತು ಬೆಳೆವಿಮೆ.
2023-24ನೇ ಸಾಲಿನಲ್ಲಿ ಜಿಲ್ಲೆಯ 2,59,486 ಎಕರೆ ಕೃಷಿ ಭೂಮಿಯ ಪೈಕಿ, 1,05,000 ಎಕೆರೆ ಪ್ರದೇಶಕ್ಕೆ 80,633 ರೈತರು ಬೆಳೆ ವಿಮೆ ನೊಂದಾವಣಿ ಮಾಡಿಸಿದ್ದಾರೆ.ಮಳೆಯಿಲ್ಲದೆ ಬರದಿಂದ ಕಂಗೆಟ್ಟಿದ್ದ ಚಿತ್ರದುರ್ಗ ಜಿಲ್ಲೆಯ 6 ತಾಲೂಕುಗಳನ್ನು ರಾಜ್ಯ ಸರ್ಕಾರ ಬರಪೀಡಿತ ಎಂದು ಘೋಷಿಸಿತ್ತು. ಸರ್ಕಾರದಿಂದ ಬರ ಪರಿಹಾರ ಶೀಘ್ರ ಬಿಡಿಗಡೆ ಮಾಡುವಂತೆ ರೈತ ಮುಖಂಡರ ಹೋರಾಟ, ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ವರದಿ ನೀಡಿದರೂ ಬೆಳೆ ವಿಮೆ ಬಿಡುಗಡೆ ಮಾಡಲು ಬೆಳೆ ವಿಮೆಕಂಪನಿಗಳ ವಿಳಂಭ ದೋರಣೆಯನ್ನು ಖಂಡಿಸಿ ರೈತ ಸಂಘಟನೆಗಳ ಹೋರಾಟದ ಫಲವಾಗಿ ಗುರುವಾರ ರೈತರ ಖಾತೆಗೆ ಬೆಳೆ ವಿಮೆ ಪರಿಹಾರದ ಮೊತ್ತ ರೈತರ ಖಾತೆಗೆ ಜಮೆಯಾಗಿದ್ದು ಯುಗಾಧಿ ಮುನ್ನವೇ ಬೇವು ಬೆಲ್ಲ ಸವಿದಷ್ಟು ಖುಷಿಯಾಗಿದೆ..ನಿರೀಕ್ಷೆಯ ನಡುವೆಯೇ, ವಿಮೆ ತುಂಬಿತ ರೈತರಿಗೆ ಮಧ್ಯಂತರ ಪರಿಹಾರ ಹಣ ಬಿಡುಗಡೆಯಾಗಿರುವುದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ಚಳ್ಳಕೆರೆ ತಾಲೂಕಿನ ಸೋಮಗುದ್ದ ಗ್ರಾಮಪಂಚಾಯಿತಿ ಮಾತ್ರ ಫಸಲ್ ಭೀಮ ಯೋಜನೆಯ ಬೆಳೆ ವಿಮೆಯಿಂದ ವಂಚಿತವಾಗಿದ್ದು ಬೆಳೆ ಕಾಟಾವ್ ಪ್ರಯೋಗದಲ್ಲಿ ಬೆಳೆವಿಮೆ ನಿಗಧಿ ಪಡಿಸಿದ ಕ್ಕಿಂತ ಹೆಚ್ಚಿನ ತೂಕ ಬಂದಿರುವುದರಿಂದ ಬೆಳೆ ವಿಮೆಯಿಂದ ಈ ಪಂಚಾಯಿತಿ ರೈತರಲ್ಲಿ ಯುಗಾಧಿ ಹಬ್ಬಕ್ಕೆ ಬೇವು ಮಾತ್ರ ಸಿಕ್ಕಿದ್ದು ಬೆಲ್ಲ ಇಲ್ಲದೆ ಕಹಿಯಾಗಿದೆ.

ಶ್ರೀ ಗುರು ತಿಪ್ಪೇರುದ್ರಸ್ವಾಮಿ ಹುಂಡಿಯಲ್ಲಿ 38.67660 ರೂ ಲಕ್ಷ ಸಂಗ್ರಹ

ನಾಯಕನಹಟ್ಟಿ:: ಐತಿಹಾಸಿಕ ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಾಲಯಗಳಲ್ಲಿ ಕಾಣಿಕೆ ಹುಂಡಿ ಹಣದ ಎಣಿಕೆ ಕಾರ್ಯವನ್ನು ಮಂಗಳವಾರ ದೇವಾಲಯದ ಆವರಣದಲ್ಲಿ ಕಂದಾಯ ಇಲಾಖೆ ಮತ್ತು ಬ್ಯಾಂಕ್ ಅಧಿಕಾರಿಗಳ ಸಹಯೋಗದಲ್ಲಿ ನಡೆಸಲಾಯಿತು.
ಮೊದಲು ಹೊರಮಠ ದೇವಾಲಯದಲ್ಲಿ ಮುಜರಾಯಿ ಹಾಗೂ ಕಂದಾಯ ಇಲಾಖೆಯ ಶಿರಸ್ತೇದಾರ್ ಹಾಗೂ ದೇವಾಲಯದ ಕಾರ್ಯನಿರ್ವಹಣಾಧಿಕಾರಿ ನೇತೃತ್ವದಲ್ಲಿ ಬೆಳಗ್ಗೆ 10ಕ್ಕೆ ಆರಂಭವಾದ ಎಣಿಕೆ ಕಾರ್ಯ 12 ಗಂಟೆಗೆ ಮುಕ್ತಾಯವಾಯಿತು.
ನಂತರ ಒಳಮಠದಲ್ಲಿ ಆರಂಭವಾದ ಎಣಿಕೆ ಕಾರ್ಯ 4:30ಕ್ಕೆ ಗಂಟೆಗೆ ಮುಕ್ತಾಯವಾಯಿತು.

ಹೊರಮಠದಲ್ಲಿ₹600595. ಒಳಮಠ ₹3267065. ಹುಂಡಿಯಲ್ಲಿ ₹ ಲಕ್ಷ ಸಂಗ್ರಹವಾಗಿದೆ ಒಟ್ಟಾರೆಯಾಗಿ. 5 ತಿಂಗಳ ಅವಧಿಯಲ್ಲಿ₹ 38.67660 ಲಕ್ಷ ಹಣ ಸಂಗ್ರಹವಾಗಿದೆ ಹಣವನ್ನು ದೇವಾಲಯದ ಕೆನರಾ ಬ್ಯಾಂಕ್ ಖಾತೆಗೆ ಜಮಾ ಮಾಡಲಾಯಿತು.


ಇನ್ನೂ ಇದೇ ವೇಳೆ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಣಾಧಿಕಾರಿ ಎಚ್. ಗಂಗಾಧರಪ್ಪ ಮಾತನಾಡಿ ಮಾನ್ಯ ಜಿಲ್ಲಾಧಿಕಾರಿ ಹಾಗೂ ಚಳ್ಳಕೆರೆ ತಾಶಿಲ್ದಾರ್ ಅವರ ಆದೇಶದ ಮೇರೆಗೆ ಮಾರ್ಚ್ 26ರಂದು ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಪ್ರಯುಕ್ತ ಪ್ರತಿವರ್ಷದಂತೆ ಈ ವರ್ಷವೂ ಸಹ ಹುಂಡಿ ಎಣಿಕೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಉಂಡಿ ಇಣಿಕೆ ಕಾರ್ಯದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಗ್ರಾಮ ಸಹಾಯಕರು ಕೆನರಾ ಬ್ಯಾಂಕ್ ಸಿಬ್ಬಂದಿಗಳು ಭಾಗವಹಿಸಿದ್ದಾರೆ. ಹೊರಮಠ ಮತ್ತು ಒಳಮಠ ಹುಂಡಿಯಲ್ಲಿ ಇದ್ದ ಹಣವನ್ನು ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಶ್ರೀ ಗುರು ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಹುಂಡಿ ಹಣವನ್ನು ದೇವಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಮತ್ತು ಜಾತ್ರೆಗೆ ಬಳಸಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಶಿರಸ್ತೇದಾರ್ ಎಂ.ಎಂ. ಸದಾಶಿವಪ್ಪ, ನಾಡಕಚೇರಿ ಉಪತಾಶಿಲ್ದಾರ್ ಬಿ ಶಕುಂತಲಾ, ರಾಜಸ್ವ ನಿರೀಕ್ಷಕ ಚೇತನ್ ಕುಮಾರ್, ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಸಿಬ್ಬಂದಿಗಳಾದ ಎಸ್ ಸತೀಶ್, ಮನು, ಗ್ರಾಮ ಲೆಕ್ಕಾಧಿಕಾರಿಗಳಾದ ಜಗದೀಶ್, ಶಂಕರ್, ಜಯರಾಮ್, ಶರಣಬಸಪ್ಪ, ರವಿಕುಮಾರ್, ಪ್ರದೀಪ, ಪುಷ್ಪಲತಾ ,ಎಲ್ ಉಮಾ, ಶಶಿಕಲಾ, ಕೆನರಾ ಬ್ಯಾಂಕ್ ಸಿಬ್ಬಂದಿಗಳಾದ ಸತ್ಯನಾರಾಯಣ, ವಿರೂಪಾಕ್ಷಿ, ಚೇತನ, ರಘು,ನಲಗೇತನಹಟ್ಟಿ ಎಂ ಬಿ.ಮಹಾಸ್ವಾಮಿ,ಕೆ .ಬಿ. ಪುರಂದರ, ಗ್ರಾಮ ಸಹಾಯಕರಾದ ಚನ್ನಬಸಪ್ಪ, ಓಬಣ್ಣ, ಹರೀಶ್, ಕುಮಾರ್, ತಿಪ್ಪೇಸ್ವಾಮಿ, ಹೇಮಂತ್, ಸೇರಿದಂತೆ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಸಿಬ್ಬಂದಿಗಳು ಇದ್ದರು

ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾದ್ಯಮ ಉದ್ಯಮ ಸ್ಥಾಪನೆಗೆ ಅರ್ಜಿ

ಚಿತ್ರದುರ್ಗ ಮಾ.05:
ಕರ್ನಾಟಕ ಮಹರ್ಷಿ ವಾಲ್ಮೀಕಿ ಪಂಗಡಗಳ ಅಭಿವೃದ್ಧಿ ನಿಗಮವು 2023-24ನೇ ಸಾಲಿನ ಪರಿಶಿಷ್ಟ ಪಂಗಡದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಕ್ರಿಯಾ ಯೋಜನೆಯಡಿ ಪತ್ರಕರ್ತರಿಗೆ ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮ ಉದ್ಯಮ ಸ್ಥಾಪನೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಿದೆ.
ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ-ಯುವತಿಯರಿಗೆ ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ (ಯೂಟ್ಯುಬ್ ಚಾನೆಲ್, ಸೋಷಿಯಲ್ ಮೀಡಿಯಾ ನ್ಯೂಸ್ ಪೇಜಸ್, ನ್ಯೂಸ್ ಆನ್ಲೈನ್ ಬ್ಲಾಗ್, ನ್ಯೂಸ್ ಕಂಟೆಂಟ್, ವೆಬ್ ಪೇಜಸ್, ಆನ್ಲೈನ್ ಜರ್ನಲಿಸಂ, ಮಾಧ್ಯಮ ಸಂಬಂಧಿತದ ತರಬೇತಿ) ಉದ್ಯಮ ಸ್ಥಾಪನೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಉದ್ದಿಮೆಯನ್ನು ಸ್ಥಾಪಿಸಲು ಘಟಕದ ವೆಚ್ಚ ಶೇ.70 ರಷ್ಟು ಅಥವಾ ರೂ. 5 ಲಕ್ಷ ಸಹಾಯಧನವನ್ನು ಪಡೆಯಲು ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಉಳಿದ ಘಟಕದ ವೆಚ್ಚ ಬ್ಯಾಂಕ್‍ನಿಂದ ಪಡೆಯಬೇಕು ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮೀಕ್ಷೆ ಪ್ರಾರಂಭ

ಚಿತ್ರದುರ್ಗ ಫೆ.28:
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಸಂಬಂಧಿಸಿದಂತೆ ಸರ್ಕಾರದ ನಿರ್ದೇಶನದನ್ವಯ ಸಮೀಕ್ಷೆ ನಡೆಸುವ ಕಾರ್ಯ ಜಿಲ್ಲೆಯಲ್ಲಿ ಪ್ರಾರಂಭಗೊಂಡಿದೆ.
ಸರ್ಕಾರ ಜಾರಿಗೊಳಿಸಿರುವ ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ ಹಾಗೂ ಯುವನಿಧಿ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಸ್ಪಷ್ಟ ಚಿತ್ರಣ ಪಡೆಯುವ ಸಲುವಾಗಿ ಫಲಾನುಭವಿಗಳ ಸಮೀಕ್ಷೆ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ.
ಸರ್ಕಾರದ ಸೂಚನೆಯಂತೆ ಚಿತ್ರದುರ್ಗ ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮೀಕ್ಷೆ ಕಾರ್ಯವನ್ನು ಪ್ರಾರಂಭಿಸಲಾಗಿದ್ದು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಸರ್ವೆ ಕಾರ್ಯ ನಡೆಸಲಿದ್ದಾರೆ. ಮೊಬೈಲ್/ವೆಬ್ ತಂತ್ರಾಂಶದ ಮೂಲಕ ಸಮೀಕ್ಷೆ ನಡೆಸಲಾಗುತ್ತಿದ್ದು, ಯೋಜನೆಗಳು ತಲುಪಿರುವ ಮತ್ತು ತಲುಪದಿರುವ ಕುಟುಂಬಗಳ ಸರ್ವೆ ಈ ಸಂದರ್ಭದಲ್ಲಿ ಆಗಲಿದೆ. ಸರ್ಕಾರದ ಯೋಜನೆಗಳು ತಲುಪದ ಕುಟುಂಬಗಳ ಸಂಖ್ಯೆ ಮತ್ತು ಕಾರಣ ತಿಳಿದುಕೊಳ್ಳಲು ಕೂಡ ಈ ಸಮೀಕ್ಷೆ ನೆರವಾಗಲಿದೆ.
ಸೋಮವಾರದಂದು ಜಿಲ್ಲೆಯ ಜಾನುಕೊಂಡ, ಮೆದೆಹಳ್ಳಿ, ಕಣಿವೆಮಾರಮ್ಮ ನಗರ ಮುಂತಾದೆಡೆ ಗ್ಯಾರಂಟಿ ಯೋಜನೆಗಳ ಸಮೀಕ್ಷೆ ಪ್ರಾರಂಭಗೊಂಡಿದ್ದು, ಸರ್ವೆ ಕಾರ್ಯಕ್ಕೆ ಸಂಬಂಧಿಸಿದಂತೆ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಲಾಗಿನ್ ಕ್ರಿಯೇಟ್ ಮಾಡಿಕೊಡಲಾಗುತ್ತಿದೆ. ಸಮೀಕ್ಷೆ ಕಾರ್ಯವನ್ನು ಜಿಲ್ಲೆಯಲ್ಲಿ ಉತ್ತಮವಾಗಿ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ತಿಳಿಸಿದ್ದಾರೆ.

ಯುವನಿಧಿ” ಯೋಜನೆ ಪ್ರತಿ ತಿಂಗಳು ಸ್ವಯಂ ಕಡ್ಡಾಯ ಫೆ.29 ರೊಳಗೆ ಸ್ವಯಂ ಘೋಷಣೆ ಅಪ್‍ಲೋಡ್ ಮಾಡಲು ಸೂಚನೆ.


ಚಿತ್ರದುರ್ಗ ಫೆ.26:
ಕರ್ನಾಟಕ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯ ಸೌಲಭ್ಯವನ್ನು ಪಡೆಯಲು ಫಲಾನುಭವಿಗಳು ಪ್ರತಿ ತಿಂಗಳು ಸ್ವಯಂ ಘೋಷಣೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ.
ಯುವನಿಧಿ” ಯೋಜನೆಯಲ್ಲಿ ಪದವಿ, ಸ್ನಾತಕೊತ್ತರ ಪದವಿ ಮತ್ತು ಡಿಪೆÇ್ಲಮಾಗಳನ್ನು 2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೆÇೀರ್ಟಲ್‍ನಲ್ಲಿ ನೋಂದಣಿಯಾಗಿದ್ದು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೂರೈಸಿದ ಅಭ್ಯರ್ಥಿಗಳಿಗೆ ಜನವರಿ 2024 ರಂದು ನೇರ ನಗದು ವರ್ಗಾವಣೆ ಮಾಡಲಾಗಿರುತ್ತದೆ.
ಅಭ್ಯರ್ಥಿಗಳು ಈ ಪ್ರಯೋಜನವನ್ನು ಪ್ರತಿ ತಿಂಗಳು ಪಡೆಯಬೇಕಿದ್ದರೆ, ಪ್ರತಿ ತಿಂಗಳು 25ನೇ ತಾರೀಖಿನೊಳಗೆ ತಾನು ನಿರುದ್ಯೋಗಿಯೆಂದು, ವ್ಯಾಸಂಗ ಮುಂದುವರೆಸುತ್ತಿಲ್ಲವೆಂದು ಹಾಗೂ ಸ್ವಯಂ ಉದ್ಯೋಗಿಯಲ್ಲವೆಂದು ಸ್ವಯಂ ಘೋಷಣೆಯನ್ನು ಮಾಡಬೇಕಾಗಿರುತ್ತದೆ.
ಪ್ರಸ್ತಕ ಫೆಬ್ರವರಿ ಮಾಹೆಯಲ್ಲಿ ದಿನಾಂಕ: 29-02-2024 ರವರೆಗೆ ಸೇವಾ ಸಿಂಧು ಪೆÇೀರ್ಟಲ್‍ನಲ್ಲಿ ಸ್ವಯಂ ಘೋಷಣೆ ಪ್ರಮಾಣ ಪತ್ರವನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಪ್ರಯೋಜನೆ ಪಡೆಯುತ್ತಿರುವ ಅರ್ಹ ಅಭ್ಯರ್ಥಿಗಳು ಪ್ರತಿ ತಿಂಗಳು ಸ್ವಯಂ ಘೋಷಣೆ ಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆಯನ್ನು ಮಾಡಲಾಗುವುದಿಲ್ಲ ಎಂಬುದಾಗಿ ತಿಳಿಯಪಡಿಸಲಾಗಿದೆ.
ಈಗಾಗಲೇ ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ಜನವರಿ 2024ರಲ್ಲಿ ನೇರ ನಗದು ವರ್ಗಾವಣೆ ಮಾಡಲಾಗಿದ್ದು, ಮುಂದಿನ ತಿಂಗಳು ಪ್ರಯೋಜನ ಪಡೆದುಕೊಳ್ಳಲು ಸ್ವಯಂ ಘೋಷಣೆ ಮಾಡಬೇಕಾಗಿರುವ ಕುರಿತು ಎಸ್‍ಎಂಎಸ್ ಸಂದೇಶವನ್ನು ಅಭ್ಯರ್ಥಿಗಳಿಗೆ ರವಾನಿಸಲಾಗಿರುತ್ತದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆಯನ್ನು ಹೊಂದಿರತಕ್ಕದ್ದು. ಅಭ್ಯರ್ಥಿಗಳು ಸ್ವಯಂ ಘೋಷಣೆ ಮಾಡಿಕೊಳ್ಳಲು https://sevasindhugs.karnataka.gov.in ವೆಬ್‍ಸೈಟ್ ವೀಕ್ಷಿಸಬಹುದು ಎಂದು ಚಿತ್ರದುರ್ಗ ಉದ್ಯೋಗ ವಿನಿಮಯ ಕಚೇರಿ ಉದ್ಯೋಗಾಧಿಕಾರಿ ಕಿಶೋರ್ ಕುಮಾರ್ ತಿಳಿಸಿದ್ದಾರೆ.

You cannot copy content of this page