ಇಂದಿನ ಯುವಕರು ದುಷ್ಚಟಗಳಿಂದ ದೂಉಳಿಯಬೇಕು ವಾಣಿ ಕಾಲೇಜಿನ ಉಪನ್ಯಾಸಕರಾದ ಡಾ. ಧರಣೇಂದ್ರಯ್ಯ.

by | 14/12/23 | ಆರೋಗ್ಯ


ಹಿರಿಯೂರು :
ಸಮಾಜದಲ್ಲಿ ಗಂಡಸರ ಕುಡಿತದಿಂದ ಹಲವಾರು ಕುಟುಂಬಗಳು ಬೀದಿಗೆ ಬಂದಿದ್ದು, ಮಹಿಳೆಯರು ತಮ್ಮ ಮಕ್ಕಳನ್ನು ಸಾಕಲು ಸಾಧ್ಯವಾಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ, ಯುವಕರು ಇಂತಹ ದುಷ್ಚಟಗಳಿಂದ ದೂರ ಉಳಿಯಬೇಕೆಂಬ ಉದ್ದೇಶದಿಂದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮದ್ಯವರ್ಜನ ಶಿಬಿರ ಹಮ್ಮಿಕೊಂಡಿರುವುದು ನಿಜಕ್ಕೂ ಶ್ಲಾಘನೀಯ ಎಂಬುದಾಗಿ ವಾಣಿ ಕಾಲೇಜಿನ ಉಪನ್ಯಾಸಕರಾದ ಡಾ.ಡಿ.ಧರಣೇಂದ್ರಯ್ಯ ಹೇಳಿದರು.
ನಗರದ ವಾಲ್ಮೀಕಿ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಧ್ಯವರ್ಜನೆ ಶಿಬಿರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಇಂದಿನ ಯುವಜನತೆ ಮಧ್ಯ ಕುಡಿತಕ್ಕೆ ದಾಸರಾಗಿ, ದೈಹಿಕ ಮತ್ತು ಮಾನಸಿಕ ಆರೋಗ್ಯ ಹಾಳುಮಾಡಿಕೊಳ್ಳುವುದರ ಜೊತೆಗೆ ಕುಟುಂಬ ಸದಸ್ಯರಿಗೆ ತೊಂದರೆ ನೀಡುತ್ತಾರೆ, ಇದರಿಂದ ಕುಟುಂಬದ ಆರ್ಥಿಕ ಸ್ಥಿತಿ ಹದಗೆಡುವುದರೊಂದಿಗೆ ಸಂಸಾರದ ನೆಮ್ಮದಿಯು ಸಹ ಹಾಳಾಗುತ್ತದೆ ಈ ನಿಟ್ಟಿನಲ್ಲಿ ಇಂದಿನ ಯುವ ಪೀಳಿಗೆ ಮಧ್ಯ ಮಧ್ಯ ಚಟದಿಂದ ದೂರ ಉಳಿಯುವ ಮೂಲಕ ನಿಮ್ಮ ಆರೋಗ್ಯ ಸುರಕ್ಷತೆ ಮತ್ತು ಕುಟುಂಬ ಸುರಕ್ಷತೆಗಾಗಿ ಮಧ್ಯ ಕುಡಿತದಿಂದ ದೂರವಿರಬೇಕು ಎಂಬುದಾಗಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯಸ್ಥರಾದ ಶಿವಕುಮಾರ್, ಜನ ಜಾಗೃತಿ ವೇದಿಕೆಯ ಪದಾಧಿಕಾರಿಗಳಾದ ನವೀನ್, ಮಧ್ಯವರ್ಜನ ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳು ಸೇರಿದಂತೆ ಸಾರ್ವಜನಿಕರು ಭಾಗವಹಿಸಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page