ಇಂದಿರಾ ಕ್ಯಾಂಟೀನ್‍ಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ : ಗುಣಮಟ್ಟ ಕಾಯ್ದುಕೊಳ್ಳಲು ತಾಕೀತು.

by | 16/12/23 | ಸುದ್ದಿ


ಚಿತ್ರದುರ್ಗ ಡಿ. 16:
ನಗರದ ಪ್ರವಾಸಿ ಮಂದಿರ ಬಳಿ ಇರುವ ಇಂದಿರಾ ಕ್ಯಾಂಟೀನ್‍ಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಶನಿವಾರ ಬೆಳ್ಳಂ ಬೆಳಿಗ್ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಕ್ಯಾಂಟೀನ್‍ನಲ್ಲಿ ಸಾರ್ವಜನಿಕರಿಗೆ ಒದಗಿಸುವ ಆಹಾರದ ಗುಣಮಟ್ಟ, ಶುಚಿ-ರುಚಿ ಕಾಯ್ದುಕೊಳ್ಳುವಂತೆ ಕ್ಯಾಂಟೀನ್ ಸಿಬ್ಬಂದಿಗೆ ತಾಕೀತು ಮಾಡಿದರು.
ಪ್ರವಾಸಿ ಮಂದಿರದ ಬಳಿ ಇರುವ ಇಂದಿರಾ ಕ್ಯಾಂಟೀನ್‍ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು, ಅಡುಗೆ ತಯಾರಿಕೆ ಕೊಠಡಿಗೆ ಭೇಟಿ ನೀಡಿ, ಆಹಾರದ ಗುಣಮಟ್ಟ, ಶುಚಿ-ರುಚಿ ಕೊರತೆ, ದಾಖಲೆಗಳ ಅಸಮರ್ಪಕ ನಿರ್ವಹಣೆ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿವೆ. ಕ್ಯಾಂಟೀನ್‍ನಲ್ಲಿ ಉಪಹಾರ ಹಾಗೂ ಊಟದ ತಯಾರಿಕೆ ಉತ್ತಮವಾಗಿಲ್ಲ, ಉಪಹಾರ ರುಚಿಕಟ್ಟಾಗಲು ಅಗತ್ಯವಿರುವ ಸಾಮಗ್ರಿಗಳ ಸಮರ್ಪಕ ಬಳಕೆಯಾಗುತ್ತಿಲ್ಲ, ಹೀಗಾಗಿ ಸಾರ್ವಜನಿಕರು ಇಂದಿರಾ ಕ್ಯಾಂಟೀನ್‍ಗೆ ಹೆಚ್ಚು ಬರುತ್ತಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಡಿಮೆ ದರದಲ್ಲಿ ಬಡವರಿಗೆ ಉತ್ತಮ ಗುಣಮಟ್ಟದ ಹಾಗೂ ರುಚಿಯಾದ ಊಟೋಪಹಾರ ಒದಗಿಸಬೇಕು ಎಂಬ ಸದುದ್ದೇಶದಿಂದ ಸರ್ಕಾರ ವಿವಿಧೆಡೆ ಇಂದಿರಾ ಕ್ಯಾಂಟೀನ್ ಗಳನ್ನು ಪ್ರಾರಂಭಿಸಿ, ನಡೆಸಲಾಗುತ್ತಿದೆ. ಆದರೆ ಸಿಬ್ಬಂದಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕ್ಯಾಂಟೀನ್ ನಿರ್ವಹಣೆ ಸರಿಯಾಗಿ ಆಗುತ್ತಿಲ್ಲ. ಕ್ಯಾಂಟೀನ್‍ಗೆ ಎಷ್ಟು ಆಹಾರ ಧಾನ್ಯ ಹಾಗೂ ಅಡುಗೆ ಸಾಮಗ್ರಿ ಸ್ವೀಕರಿಸಲಾಗಿದೆ, ಎಷ್ಟು ಪ್ರಮಾಣದಲ್ಲಿ ಎಷ್ಟು ಜನರಿಗೆ ಊಟೋಪಹಾರ ವಿತರಿಸಲಾಗಿದೆ ಎಂಬುದರ ಬಗ್ಗೆ ಸಮರ್ಪಕವಾಗಿ ದಾಖಲೆಗಳನ್ನು ನಿರ್ವಹಿಸಿಲ್ಲ ಎಂದು ತೀವ್ರ ಅಸಮಧಾನ ವ್ಯಕ್ತಪಡಿಸಿದರು.
ಇಂದಿರಾ ಕ್ಯಾಂಟೀನ್‍ಗೆ ಆಹಾರದ ಗುಣಮಟ್ಟ ಪರಿಶೀಲನೆಗೆ ಸಂಬಂಧಪಟ್ಟ ಅಧಿಕಾರಿ ಪ್ರತಿ ನಿತ್ಯ ಭೇಟಿ ಮಾಡಿ ಪರಿಶೀಲಿಸಬೇಕು, ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಯ ಪೌರಾಯುಕ್ತರು, ಮುಖ್ಯಾಧಿಕಾರಿಗಳು ವಾರಕ್ಕೊಮ್ಮೆ ಕ್ಯಾಂಟೀನ್‍ಗೆ ಭೇಟಿ ನೀಡಿ, ಅಲ್ಲಿಯೇ ಉಪಹಾರ ಮತ್ತು ಊಟ ಸೇವಿಸಿ ಪರಿಶೀಲಿಸಬೇಕು. ಅಲ್ಲದೆ ಅಡುಗೆ ಸಾಮಗ್ರಿಗಳ ದಾಸ್ತಾನು, ಬಳಕೆ, ಊಟೋಪಹಾರ ವಿತರಣೆ ಪ್ರಮಾಣ ಕುರಿತಂತೆ ನಿತ್ಯ ರಜಿಸ್ಟರ್‍ನಲ್ಲಿ ಮಾಹಿತಿ ದಾಖಲಾಗಬೇಕು, ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಬೇಕು, ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಆರೋಗ್ಯ ನಿರೀಕ್ಷಕರು ಸ್ವಚ್ಛತೆ ಹಾಗೂ ಶುಚಿತ್ವ ನಿರ್ವಹಣೆಗೆ ಸಂಬಂಧಿಸಿದ ಅಧಿಕಾರಿಗಳು ನಿತ್ಯ ಕ್ಯಾಂಟೀನ್‍ನಲ್ಲಿನ ಸ್ವಚ್ಛತೆ ಬಗ್ಗೆ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿಗಳು ತಾಕೀತು ಮಾಡಿದರು.
ಬರುವ ದಿನಗಳಲ್ಲಿ ಜಿಲ್ಲೆಯಲ್ಲಿನ ಇಂದಿರಾ ಕ್ಯಾಂಟೀನ್‍ಗಳಿಗೆ ಆಕಸ್ಮಿಕ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು, ಲೋಪದೋಷಗಳು ಕಂಡುಬಂದಲ್ಲಿ ಸಂಬಂಧಪಟ್ಟ ಸಿಬ್ಬಂದಿ, ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಹೇಳಿದರು.
ಕಸ ವಿಲೇವಾರಿ ಸಮರ್ಪಕವಾಗಿಸಿ :
*ನಗರದ ವಿವಿಧೆಡೆ ತೆರಳಿ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಮನೆ ಮನೆಯಿಂದ ಕಸ ಸಂಗ್ರಹಿಸಿ, ವಿಲೇವಾರಿ ಮಾಡುವ ಕಾರ್ಯ ಸಮರ್ಪಕವಾಗಿ ಆಗಬೇಕು, ಹಸಿ ಕಸ ಮತ್ತು ಒಣ ಕಸವನ್ನು ವಿಂಗಡಿಸಿಯೇ ಪಡೆಯಬೇಕು, ನಗರದ ಚರಂಡಿಗಳನ್ನು ಸ್ವಚ್ಛವಾಗಿರಿಸಬೇಕು ಎಂದು ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ನಗರಸಭೆ ಪೌರಾಯುಕ್ತೆ ರೇಣುಕಾ, ಪರಿಸರ ಅಭಿಯಂತರ ಜಾಫರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page