ಹಿರಿಯೂರು :
ಹಿಂದಿನ ಕಾಲದಲ್ಲಿ ಕೇವಲ ಅಡುಗೆ ಮನೆಗೆ ಸೀಮಿತವಾಗಿದ್ದ ಮಹಿಳೆಯನ್ನು ಸ್ವತಂತ್ರ ಪೂರ್ವದಿಂದಲೂ ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಹಲವಾರು ಹೋರಾಟಗಾರರು ಹೋರಾಟ ಮಾಡಿದ್ದು, ಈ ಹೋರಾಟದ ಫಲವಾಗಿ ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಮೇಲುಗೈ ಸಾಧಿಸುವಂತಾಗಿದೆ ಎಂಬುದಾಗಿ ಕ್ಷೇತ್ರದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹೇಳಿದರು.
ನಗರದ ವಾಣಿ ಸಕ್ಕರೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಆದರೆ ಇಂದಿಗೂ ಸಮಾಜದಲ್ಲಿ ಮಹಿಳೆಯರಿಗೆ ನಿರ್ಭಂಧಗಳಿದ್ದು, ಅದರಿಂದ ಹೊರಬಂದು ಸಮಾಜದಲ್ಲಿ ಗೌರವವನ್ನು ಪಡೆಯುವಂತಾಗಬೇಕು, ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಮಹಾತ್ಮ ಗಾಂಧೀಜಿಯವರ ಮಾತಿನಂತೆ ಹೆಣ್ಣು ಮಕ್ಕಳು ಶಿಕ್ಷಣವಂತರಾದರೆ ಇಡೀ ಕುಟುಂಬವನ್ನು ಉತ್ತಮ ದಾರಿಯಲ್ಲಿ ನಡೆಸುತ್ತಾರೆ, ಆದ್ದರಿಂದ ಸಮಾಜ ಮಹಿಳೆಯರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು ಎಂಬುದಾಗಿ ಹೇಳಿದರು.
ಉದ್ಯಮಿ ಆನಂದಶೆಟ್ಟಿ ಮಾತನಾಡಿ. ಒಬ್ಬ ಮಹಿಳೆ ಮನಸ್ಸು ಮಾಡಿದರೆ ಏನನ್ನು ಬೇಕಾದರೂ ಸಾಧನೆ ಮಾಡಬಹುದು ಎಂಬುದಕ್ಕೆ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ದಿಟ್ಟ ಉದಾಹರಣೆಯಾಗಿದ್ದಾರೆ, ಇದುವರೆಗೂ ಯಾವ ಶಾಸಕರಿಂದಲೂ ಮಾಡಲಾಗದಿರುವ ಅಭಿವೃದ್ಧಿ ಕಾರ್ಯಕ್ರಮಗಳನ್ನು ಇಂದು ಮಹಿಳಾ ಶಾಸಕಿಯಾದ ನಮ್ಮ ಪೂರ್ಣಿಮಾ ಶ್ರೀನಿವಾಸ್ ರವರು ಮಾಡಿ ತೋರಿಸಿದ್ದಾರೆ, ಇಂತಹ ಬದ್ಧತೆ ಇರುವ ಶಾಸಕರು ನಮ್ಮ ಕ್ಷೇತ್ರಕ್ಕೆ ಅಗತ್ಯವಾಗಿದ್ದು, ಇವರಿಗೆ ನಾವೆಲ್ಲರೂ ಬೆಂಬಲ ನೀಡಬೇಕಿದೆ ಎಂಬುದಾಗಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಮಹೇಶ್, ಅಧ್ಯಾಪಕರಾದ ಡಾ.ಡಿ.ಧರಣೇಂದ್ರಯ್ಯ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಆನಂದ ಶ್ರೇಷ್ಠಿ, ಬಿ.ಕೆ.ಕರಿಯಪ್ಪ, ಕಬಡ್ಡಿ ಶ್ರೀನಿವಾಸ್, ಶೋಭಾ, ರಾಮಣ್ಣ, ತಿಪ್ಪೇಸ್ವಾಮಿ ಸೇರಿದಂತೆ ಉಪನ್ಯಾಸಕರು ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments