ಹಿರಿಯೂರು :
ನಗರದಲ್ಲಿ ಬಿಸಿಲು-ಮಳೆ ಯಾವುದನ್ನೂ ಲೆಕ್ಕಿಸದೇ ದುಡಿಯುತ್ತಿರುವ ಶ್ರಮಿಕ ರಸ್ತೆಬದಿ ವ್ಯಾಪಾರಿಗಳಿಗೆ ತರಕಾರಿ ವ್ಯಾಪಾರ ಮಾಡುವ ಸಂದರ್ಭದಲ್ಲಿ ಬಿಸಿಲು ಮಳೆ ಗಾಳಿಯಿಂದ ರಕ್ಷಿಸಿಕೊಳ್ಳಲು ಅನುಕೂಲವಾಗುವಂತೆ ವ್ಯಾಪಾರಿಗಳಿಗೆ ಛತ್ರಿಗಳನ್ನು ವಿತರಿಸಲಾಗುತ್ತಿದೆ ಎಂಬುದಾಗಿ ಇನ್ಹರ್ ವ್ಹೀಲ್ ಕ್ಲಬ್ ಅಧ್ಯಕ್ಷರಾದ ಶ್ರೀಮತಿ ಲಕ್ಷ್ಮೀ ರಾಜೇಶ್ ಹೇಳಿದರು.
ನಗರದ ರಸ್ತೆಬದಿ ತರಕಾರಿ ವ್ಯಾಪಾರ ಮಾಡುವ ವ್ಯಾಪಾರಸ್ಥರಿಗೆ ಇನ್ಹರ್ ವ್ಹೀಲ್ ಕ್ಲಬ್ ವತಿಯಿಂದ ಛತ್ರಿಗಳನ್ನು ವಿತರಿಸಿ, ನಂತರ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಇನ್ಹರ್ ವ್ಹೀಲ್ ಕ್ಲಬ್ ಅಧ್ಯಕ್ಷರಾದ ಶ್ರೀಮತಿ ಲಕ್ಷ್ಮೀ ರಾಜೇಶ್, ಶ್ರೀಮತಿ ಸೌಮ್ಯ ಪ್ರಶಾಂತ್, ಸ್ವರ್ಣಾರೆಡ್ಡಿ, ಹರಿತ ಸೇರಿದಂತೆ ನಗರದ ರಸ್ತೆಬದಿ ವ್ಯಾಪಾರಸ್ಥರು ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments