ಇ-ಸ್ವತ್ತು ಮನೆ ಬಾಗಿಲಿಗೆ ಜನರ ಮೆಚ್ಚಿಗೆ ಗ್ರಾಮಪಂಚಾಯಿತಿ ಬೊಕ್ಕಸಕ್ಕೆ ಹೆಚ್ಚಿನ ತೆರಿಗೆ ವಸೂಲಿ ಜಿಪಂ ನೂತನ ಕಾರ್ಯಕ್ಕೆ ಸದಸ್ಯರ ಸಂತೋಷ

by | 28/12/22 | ಆರ್ಥಿಕ

ಚಿತ್ರದುರ್ಗ ಜನಧ್ವನಿ ವಾರ್ತೆ ಡಿ ೨೮. ಗ್ರಾಮಾಂತರ ಪ್ರದೇಶಗಳಲ್ಲಿ ನಿವೇಶನ, ಖಾಲಿ ಜಾಗ ಹಾಗೂ ಪಾಲು ವಿಭಾಗದ ನಂತರ ಇ- ಸ್ವತ್ತು ಪಡೆಯುವಲ್ಲಿ ಆಗುತ್ತಿರುವ ವಿಳಂಬದಿAದ ಫಲಾನುಭವಿಗಳು ದಿನ ನಿತ್ಯ ಗ್ರಾಪಂ ಕಚೇರಿಗೆ ಅಲೆದಾಟ, ಮತ್ತೊಂದು ಕಡೆ ಕಷ್ಟ ನಷ್ಟಕ್ಕೆ ಪರಭಾರೆ ಮಾಡಲಿಕ್ಕೂ ಆಗದೇ ಜನ ಪರದಾಡುವುದನ್ನು ತಪ್ಪಿಸಲು ಜಿಲ್ಲಾ ಪಂಚಾಯತ್ ವಿನೂತ ಯೋಜನೆ ಜಾರಿಗೊಳಿಸಿದೆ.
ಗ್ರಾಪಂ ಸಿಬ್ಬಂದಿಗಳು ನಿಮ್ಮ ಮನೆ ಬಳಿ ಬಂದಾಗ ಕಂದಾಯ ಪಾವತಿಸಿ ಅಗತ್ಯ ದಾಖಲೆಗಳನ್ನು ನೀಡುವ ಮೂಲಕ ಪ್ರತಿಯೊಬ್ಬರು ಇ-ಸ್ವತ್ತು ಖಾತೆ ಮಾಡಿಸಿಕೊಳ್ಳುವಂತೆ ಜಿಪಂ ಸಿಇಒ ದಿವಾಕರ್ ಹೇಳಿದರು.
ಚಿತ್ರದರ್ಗು ತಾಲೂಕಿನ ಮಠದ ಕುರಬರಹಟ್ಟಿ ಗ್ರಾಪಂ ವ್ಯಾಪ್ತಿಯ ಗುತ್ತಿನಾಡು ಹಾಗೂ ಎಂ.ಆರ್ ಕಾಲೋನಿಯ ಮನೆಗಳಿಗೆ ಭೇಟಿ ನೀಡಿ ಇ-ಸ್ವತ್ ಪ್ರತಿಯನ್ನು ವಿತರರಿಸಿ ಮಾತನಾಡಿದರು.
ಗ್ರಾಮಪಂಯತ್ ಸಿಬ್ಬಂದಿಗಳು ಮನೆ ಮನೆಗಳಿಗೆ ಭೇಟಿ ನೀಡಿ ಆಸ್ತಿ ಮಾಲಿಕರಿಂದ ಕಂದಾಯ ಹಾಗೂ ಅಗತ್ಯ ದಾಖಲೆಗಳನ್ನು ಪಡೆದು ೧೫ ದಿನಗಳ ಒಳಗಾಗಿಇ-ಸ್ವತ್ತು ಪ್ರಮಾಣ ಪತ್ರವನ್ನು ಮನೆ ಬಾಗಿಲಿಗೆ ತಲುಪಿಸ ಬೇಕು ಎಂದು ತಾಕೀತು ಮಾಡಿದರು.
ಗ್ರಾಮ ಪಂಚಾಯ್ತಿಯಲ್ಲಿ ಇ-ಸ್ವತ್ತು ವಿತರಣೆ ಮಾಡುವಾಗ ಅನಾವಶ್ಯಕ ವಿಳಂಬ,ಮದ್ಯವರ್ತಿಗಳ ಹಾವಳಿ ಹಣ ನೀಡಿದರೆ ಮಾತ್ರ ಇ-ಸ್ವತ್ ದೊರೆಯುತ್ತದೆ ಎಂಬ ಸಾಕಷ್ಟು ದೂರುಗಳು ಕೇಳಿ ಬರುತ್ತಿದ್ದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಮಠದ ಕುರುಬರಹಟ್ಟಿ ಗ್ರಾಮಪಂಚಾಯಿತಯನ್ನು ಪ್ರಯೋಗಿಕವಾಗಿ ಮನೆ ಮನೆಗೆ ಇ-ಸ್ವತ್ ವಿತರಣೆಯನ್ನು ಬುಧವಾರ ಮಾಡಲಾಗಿದೆ.
ಇದೇ ರೀತಿ ಜಿಲ್ಲೆಯ ಎಲ್ಲಾ ಗ್ರಾಪಂ ವ್ಯಾಪ್ತಿಯ ಗ್ರಾಮಠಾಣೆ ವ್ಯಾಪ್ತಿಯ ಆಸ್ತಿಗಳನ್ನು ಇ-ಸ್ವತ್ತು ಮಾಡಲಾಗುವುದು ಇ-ಸ್ವತ್ತು ನಿಮ್ಮಮನೆ ಬಾಗಿಲಿಗೆ ಬಂದು ವಿತರಣೆ ಮಾಡುತ್ತಿರುವುದರಿಂದ ಗ್ರಾಮೀಣ ಭಾಗದ ಪ್ರತಿಯೊಬ್ಬರು ಈ ಯೋಜನೆನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ತೆರಿಗೆ ಕಟ್ಟಿ ನಿಮ್ಮ ಗ್ರಾಮದ ಅಭಿವೃದ್ಧಿಗೆ ಸಹಕಾರ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ನಿವಾಸಿಗಳು ಇ-ಸ್ವತ್ತು ಪಡೆಯಲು ಕಷ್ಟವಾಗುತ್ತಿತ್ತು. ಆದರೆ ಮನೆ ಬಾಗಿಲಿಗೆ ಬಂದು ಇ-ಸ್ವತ್ತು ವಿತರಣೆಗೆ ಕ್ರಮ ವಹಿಸಿರುವುದರಿಂದ ತುಂಬಾ ಸಂತೋಷವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿರುತ್ತಾರೆ. ಗ್ರಾಮ ಪಂಚಾಯ್ತಿ ಅಧ್ಯಕ್ಷರು/ಸದಸ್ಯರು ಮಾತನಾಡಿ, ಪಂಚಾಯ್ತಿಗಳಲ್ಲಿ ನಡೆಯುವ ಬ್ರಷ್ಟಾಚಾರ ಹಾಗೂ ವಿಳಂಬ ನೀತಿಯಿಂದ ಜಿಲ್ಲಾ ಪಂಚಾಯ್ತಿಯನ್ನು ನೋಡುವ ದೃಷ್ಟಿಕೋನವೇ ಬದಲಾಗಿದ್ದು, ಈಗ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿರುತ್ತಾರೆ. ೧೫ ದಿನಗಳಲ್ಲಿ ಸುಮಾರು ೪ಲಕ್ಷ ತೆರಿಗೆ ಸಂಗ್ರಹವಾಗಿದ್ದು, ತೆರಿಗೆಯನ್ನು ಜನರು ತಾವೇ ಸ್ವತ: ಬಂದು ಪಾವತಿಸಿರುತ್ತಾರೆ.
ಜಿಪಂ ಉಪಕಾರ್ಯದರ್ಶಿ ಡಾ.ರಂಗನಾಥ್, ಪಿಡಿಒ ಹಾಗೂ ಸಿಬ್ಬಂದಿಗಳು ಇತರರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page