ಹಿರಿಯೂರು :
ತಾಲೂಕಿನಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಉತ್ತಮಪಡಿಸಲು “ಅಂತರ ಶಾಲಾ ಶೈಕ್ಷಣಿಕ ಸ್ಪರ್ಧೆ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮವನ್ನು ತಾಲೂಕಿನಾದ್ಯಂತ ಎಲ್ಲ ಪ್ರೌಢಶಾಲೆಗಳಲ್ಲೂ ಡಿಸೆಂಬರ್ 29ರಂದು ಏಕಕಾಲಕ್ಕೆ ನಡೆಸಲಾಗುವುದು ಎಂಬುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿ ಎಂ ತಿಪ್ಪೇಸ್ವಾಮಿ ತಿಳಿಸಿದ್ದಾರೆ.
ಈ ಕಾರ್ಯಕ್ರಮವನ್ನು ಮೂರು ನಾಲ್ಕು ಶಾಲೆಗಳನ್ನು ಒಗ್ಗೂಡಿಸಿ ಒಂದು ಶಾಲೆಯಲ್ಲಿ 10ನೇ ತರಗತಿಯ ಪಠ್ಯ ವಿಷಯಕ್ಕೆ ಸಂಬಂಧಿಸಿದಂತೆ, ಫಲಿತಾಂಶವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಹಲವಾರು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ವಿವಿಧ ಶಾಲೆಗಳ ತಂಡಗಳ ನಡುವೆ ರಸಪ್ರಶ್ನೆ ಕಾರ್ಯಕ್ರಮ, ಪಠ್ಯ ವಿಷಯಕ್ಕೆ ಸಂಬಂಧಿಸಿದ ಆಶುಭಾಷಣ ಸ್ಪರ್ಧೆ, ವಿಜ್ಞಾನ ಚಿತ್ರ ಬರೆಯುವ ಸ್ಪರ್ಧೆ, ಸಮಾಜ ವಿಜ್ಞಾನದ ನಕ್ಷೆ ಬರೆಯುವ ಸ್ಪರ್ಧೆ, ಪ್ರಬಂಧ ಬರೆಯುವ ಸ್ಪರ್ಧೆ ಮುಂತಾದ ಕಾರ್ಯಕ್ರಮಗಳನ್ನು ನಡೆಸಲಾಗುವುದು.
ಈ ಕಾರ್ಯಕ್ರಮಕ್ಕೆ ಜಿಲ್ಲಾ ಹಂತದಿಂದ ಉಪನಿರ್ದೇಶಕರ ಕಚೇರಿ, ಡಯಟ್ ಮತ್ತು ಶಿಕ್ಷಕರ ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯದ ಅಧಿಕಾರಿಗಳನ್ನು ಭಾಗವಹಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮನವಿ ಮಾಡಿದ್ದಾರೆ.
ಕಾರ್ಯಕ್ರಮವನ್ನು ವೀಕ್ಷಿಸಲು ಶಾಲೆ ವತಿಯಿಂದ ಸ್ಥಳೀಯ ಶಾಲಾ ವಿದ್ಯಾರ್ಥಿಗಳ ಪೋಷಕರನ್ನು ಆಹ್ವಾನಿಸಿದ್ದು, ಅಂತಿಮವಾಗಿ ವಿಜೇತ ತಂಡಕ್ಕೆ ಸೂಕ್ತ ಬಹುಮಾನಗಳನ್ನು ಕಾರ್ಯಕ್ರಮ ಆಯೋಜಿಸಿದ ಶಾಲೆ ವತಿಯಿಂದ ನೀಡಲಾಗುವುದು.
ಇಂಥ ಕಾರ್ಯಕ್ರಮಗಳನ್ನು ನಡೆಸುವುದರಿಂದ ಶೈಕ್ಷಣಿಕ ಪ್ರಗತಿಗೆ ಆರೋಗ್ಯಕರ ಸ್ಪರ್ಧೆ ಉಂಟಾಗಿ ಕಲಿಕೆ ಉತ್ತಮಗೊಳ್ಳುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ ಎಂ ತಿಪ್ಪೇಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.
ಈ ಕಾರ್ಯಕ್ರಮದ ನೋಡಲ್ ಅಧಿಕಾರಿ ಶಿಕ್ಷಣ ಸಂಯೋಜಕರಾದ ಹರೀಶ್ ಹಾಗೂ ತಾಲೂಕ ಹಂತದ ಎಲ್ಲ ಮೇಲ್ವಿಚಾರಣಾ ಸಿಬ್ಬಂದಿಯನ್ನು ಮಾರ್ಗದರ್ಶಕರನ್ನಾಗಿ ನಿಯೋಜಿಸಲಾಗಿದೆ ಎಂಬುದಾಗಿ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments