ಉತ್ತಮ ಫಲಿತಾಂಶಕ್ಕಾಗಿ ಅಂತರಶಾಲಾ ಶೈಕ್ಷಣಿಕ ಸ್ಪರ್ಧೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ.ಎಂ.ತಿಪ್ಪೇಸ್ವಾಮಿ.

by | 28/12/23 | ಶಿಕ್ಷಣ


ಹಿರಿಯೂರು :
ತಾಲೂಕಿನಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಉತ್ತಮಪಡಿಸಲು “ಅಂತರ ಶಾಲಾ ಶೈಕ್ಷಣಿಕ ಸ್ಪರ್ಧೆ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮವನ್ನು ತಾಲೂಕಿನಾದ್ಯಂತ ಎಲ್ಲ ಪ್ರೌಢಶಾಲೆಗಳಲ್ಲೂ ಡಿಸೆಂಬರ್ 29ರಂದು ಏಕಕಾಲಕ್ಕೆ ನಡೆಸಲಾಗುವುದು ಎಂಬುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿ ಎಂ ತಿಪ್ಪೇಸ್ವಾಮಿ ತಿಳಿಸಿದ್ದಾರೆ.
ಈ ಕಾರ್ಯಕ್ರಮವನ್ನು ಮೂರು ನಾಲ್ಕು ಶಾಲೆಗಳನ್ನು ಒಗ್ಗೂಡಿಸಿ ಒಂದು ಶಾಲೆಯಲ್ಲಿ 10ನೇ ತರಗತಿಯ ಪಠ್ಯ ವಿಷಯಕ್ಕೆ ಸಂಬಂಧಿಸಿದಂತೆ, ಫಲಿತಾಂಶವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಹಲವಾರು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ವಿವಿಧ ಶಾಲೆಗಳ ತಂಡಗಳ ನಡುವೆ ರಸಪ್ರಶ್ನೆ ಕಾರ್ಯಕ್ರಮ, ಪಠ್ಯ ವಿಷಯಕ್ಕೆ ಸಂಬಂಧಿಸಿದ ಆಶುಭಾಷಣ ಸ್ಪರ್ಧೆ, ವಿಜ್ಞಾನ ಚಿತ್ರ ಬರೆಯುವ ಸ್ಪರ್ಧೆ, ಸಮಾಜ ವಿಜ್ಞಾನದ ನಕ್ಷೆ ಬರೆಯುವ ಸ್ಪರ್ಧೆ, ಪ್ರಬಂಧ ಬರೆಯುವ ಸ್ಪರ್ಧೆ ಮುಂತಾದ ಕಾರ್ಯಕ್ರಮಗಳನ್ನು ನಡೆಸಲಾಗುವುದು.
ಈ ಕಾರ್ಯಕ್ರಮಕ್ಕೆ ಜಿಲ್ಲಾ ಹಂತದಿಂದ ಉಪನಿರ್ದೇಶಕರ ಕಚೇರಿ, ಡಯಟ್ ಮತ್ತು ಶಿಕ್ಷಕರ ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯದ ಅಧಿಕಾರಿಗಳನ್ನು ಭಾಗವಹಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮನವಿ ಮಾಡಿದ್ದಾರೆ.
ಕಾರ್ಯಕ್ರಮವನ್ನು ವೀಕ್ಷಿಸಲು ಶಾಲೆ ವತಿಯಿಂದ ಸ್ಥಳೀಯ ಶಾಲಾ ವಿದ್ಯಾರ್ಥಿಗಳ ಪೋಷಕರನ್ನು ಆಹ್ವಾನಿಸಿದ್ದು, ಅಂತಿಮವಾಗಿ ವಿಜೇತ ತಂಡಕ್ಕೆ ಸೂಕ್ತ ಬಹುಮಾನಗಳನ್ನು ಕಾರ್ಯಕ್ರಮ ಆಯೋಜಿಸಿದ ಶಾಲೆ ವತಿಯಿಂದ ನೀಡಲಾಗುವುದು.
ಇಂಥ ಕಾರ್ಯಕ್ರಮಗಳನ್ನು ನಡೆಸುವುದರಿಂದ ಶೈಕ್ಷಣಿಕ ಪ್ರಗತಿಗೆ ಆರೋಗ್ಯಕರ ಸ್ಪರ್ಧೆ ಉಂಟಾಗಿ ಕಲಿಕೆ ಉತ್ತಮಗೊಳ್ಳುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ ಎಂ ತಿಪ್ಪೇಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.
ಈ ಕಾರ್ಯಕ್ರಮದ ನೋಡಲ್ ಅಧಿಕಾರಿ ಶಿಕ್ಷಣ ಸಂಯೋಜಕರಾದ ಹರೀಶ್ ಹಾಗೂ ತಾಲೂಕ ಹಂತದ ಎಲ್ಲ ಮೇಲ್ವಿಚಾರಣಾ ಸಿಬ್ಬಂದಿಯನ್ನು ಮಾರ್ಗದರ್ಶಕರನ್ನಾಗಿ ನಿಯೋಜಿಸಲಾಗಿದೆ ಎಂಬುದಾಗಿ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page