ಉತ್ಸವ ಬೀದಿಯಲ್ಲಿ ರಥ ಚಲಿಸುವಾಗ ಮಹಿಳೆಯರು ದಾರಿಗೆ ನೀರು ಹಾಕಿ ಸ್ವಚ್ಛಗೊಳಿಸಿದರು. ಶ್ರೀ ಗುರುತಿರುದ್ರಸ್ವಾಮಿಯ ಸಣ್ಣ ಕಾರ್ತಿಕೋತ್ಸವ ಸಂಭ್ರಮದಿಂದ ಜರುಗಿತು..

by | 15/12/23 | ಸುದ್ದಿ

.
ನಾಯಕನಹಟ್ಟಿ:: ಶ್ರೀ ಗುರುತಿಸಿರುದ್ರ ಸ್ವಾಮಿಯ ಸಣ್ಣ ಕಾರ್ತಿಕೋತ್ಸವ ಶುಕ್ರವಾರ ನೂರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು.


ಸುಮಾರು 30 ಅಡಿ ಮರದಿಂದ ನಿರ್ಮಿಸಿದ ರಥದ ಮೇಲ್ಭಾಗದಲ್ಲಿ ಕಮಾನಿನಾಕಾರದ ರಥ ಪ್ರಮುಖ ಆಕರ್ಷಣೆಯಾಗಿತ್ತು.
ನಾನಾ ಬಣ್ಣದ ಬಟ್ಟೆ ಹಾಗೂ ಬಾವುಟಗಳಿಂದ ರಥವನ್ನು ಅಲಂಕರಿಸಲಾಯಿತು.
ಉತ್ಸವ ಮೂರ್ತಿಯನ್ನು ದೇವಾಲಯದಿಂದ ತಂದು ರಥದಲ್ಲಿ ಪ್ರತಿಷ್ಠಾಪಿಸಲಾಯಿತು ಮಹಾಮಂಗಳಾರತಿ ನಂತರ ಉತ್ಸವ ಆರಂಭಗೊಂಡಿತು. ಚಿನ್ನದ ಕಿರೀಟ ಚಿನ್ನದ ಆಭರಣಗಳು ಮಲ್ಲಿಗೆ ಕನಕಾಂಬರ ಸೇವಂತಿ ಚೆಂಡು ಹೂವು ಸೇರಿದಂತೆ ನಾನ ಹೂಗಳಿಂದ ಉತ್ಸವ ಮೂರ್ತಿಯ ಅಲಂಕರಿಸಲಾಗಿತ್ತು.

ರಥಕ್ಕೆ ಅಳವಡಿಸಿದ್ದ ಬೃಹತ್ ಹೂವಿನ ಹಾರಗಳು ಗಮನ ಸೆಳೆದವು ಉತ್ಸವ ಬೀದಿಯಲ್ಲಿ ರಥ ಚಲಿಸುವಾಗ ಮಹಿಳೆಯರು ದಾರಿಗೆ ನೀರು ಹಾಕಿ ಸ್ವಚ್ಛಗೊಳಿಸಿ ಕಾಯಿ ಹಣ್ಣು ಹರಕೆ ಸಮರ್ಪಿಸಿದರು.
ಭಕ್ತರು ರಥ ಹೇಳಿದು ಹರಕೆ ಸಲ್ಲಿಸಿದರು ದೇವಾಲಯದ ಅಲಂಕೃತ ಪಟ್ಟದ ಬಸವಣ್ಣನನ್ನು ಬೆಳ್ಳಿಯ ಕಾಲು ಕಡಗ ಅಣೆಪಟ್ಟಿಗಳಿಂದ ಅಲಂಕರಿಸಲಾಗಿತ್ತು ಸಾಂಪ್ರದಾಯಿಕ ಮಂಗಳವಾದ್ಯಗಳು ಉತ್ಸವದಲ್ಲಿದ್ದವು.


ಇದೇ ಸಂದರ್ಭದಲ್ಲಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಎಚ್ ಗಂಗಾಧರಪ್ಪ, ಎಸ್ ಸತೀಶ್, ಎಂ ವೈ ಟಿ ಸ್ವಾಮಿ, ಮಾಜಿ ಪಟ್ಟಣ ಪಂಚಾಯತಿ ಅಧ್ಯಕ್ಷ ಎನ್ ಮಹಾಂತಣ್ಣ, ಮುತ್ತು ಪಟ್ಟಣದ ಪಟ್ಟಣ ಪಂಚಾಯತಿ ಸದಸ್ಯರು ಹಾಗೂ ಪಟ್ಟಣದ ದಳವಾಯಿ ರುದ್ರಮುನಿ, ಸುನಿಲ್ ಕುಮಾರ್, ಮತ್ತು ಪಟ್ಟಣದ ಸಮಸ್ತ ಭಕ್ತಾದಿಗಳು ನಾಯಕನಹಟ್ಟಿ ಹೋಬಳಿಯ ವಿವಿಧ ಹಳ್ಳಿಗಳ ಗ್ರಾಮಸ್ಥರು ಭಕ್ತಾದಿಗಳು ಉಪಸ್ಥಿತರಿದ್ದರು

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page