ಉದ್ಘಾಟನೆ ಕಾಣದ ವಾಹನ ನಿಲುಗಡೆ ಕಟ್ಟಡ ಎಲ್ಲೆಂದರಲ್ಲೆ ವಾಹನ ನಿಲುಗಡೆ ,ವಾಹನ ಸಂಚಾರಕ್ಕೆ ಕಿರಿಕಿರಿ.

by | 05/11/23 | ಜನಧ್ವನಿ


ಚಳ್ಳಕೆರೆ ಜನಧ್ವನಿ ವಾರ್ತೆ ನ.5 ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಸಾರ್ವಜನಿಕರ ವಾಹನ ನಿಲುಗಡೆ ಕೇಂದ್ರಾಗಿ ಮಾರ್ಪಟ್ಟಿದ್ದು, ಆಸ್ಪತ್ರೆಗೆಬರುವ ರೋಗಿಗಳಿಗೆ ಹಾಗೂ ತುರ್ತು ಚಿಕಿತ್ಸಾ ಘಟಕಕ್ಕೆ ಬರುವ ಅಂಬ್ಯೂಲೆಸ್ಸ್ ವಾಹನಗಳಿಗೆ ಕಿರಿಕಿರಿ ಉಂಟಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.


ಹೌದ ಇದು ಚಳ್ಳಕೆರೆ ನಗರದ ಹೃದಯ ಭಾಗದ ಚಿತ್ರದುರ್ಗ ರಸ್ತೆಯ ಖಾಸಗಿ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಸಾರ್ವಜನಿಕರ ಆಸ್ಪತ್ರೆಗೆ ಪ್ರತಿದಿನ ನೂರಾರು ರೋಗಿಗಳು ಬರುತ್ತಾರೆ. ತುರ್ತು ಚಿಕಿತ್ಸಾ ಘಟಕದ ಮುಂಭಾಗದಲ್ಲೇ ದ್ವಿಚಕ್ರವಾಹನಗಳನ್ನು ಆಸ್ಪತ್ರೆ ಆವರಣದಲ್ಲಿ ನಿಲ್ಲಿಸಿರುವುದರಿಂದ ರೋಗಿಗಳಿಗೆ ಹಾಗೂ 108 ವಾಹನ ಚಾಲಕರಿಗೆ ಕಿರಿಕಿರಿ ಉಂಟಾಗುತ್ತಿದೆ ಎಂಬ ಆರೋಗಪಗಳು ಕೇಳಿ ಬರುತ್ತವೆ.

ಬುದ್ದಿಜೀವಿಗಳು ತಮ್ಮ ದ್ವಿಚಕ್ರವಾಹನಗಳನ್ನು ನಿಲ್ಲಿಸಿ ತಮ್ಮ ತಮ್ಮ ಕೆಲಸ ಕಾರ್ಯಗಳಿಗೆ ತೆರಳುತ್ತಾರೆ.
ಇಲ್ಲಿನ ವಾಹನಗಳ ನಿಲುಗಡೆ ದೃಶ್ಯವನ್ನು ನೋಡಿದರೆ ಸರಕಾರಿ ಆಸ್ಪತ್ರೆಯ ಒಳ ಹಾಗೂ ಹೊರರೋಗಿಗಳಿಂದ ತುಂಬಿದೆ ಎಂಬ ಭಾವನೆ ಬರಬಹುದು ಆದರೆ ಆಸ್ಪತ್ರೆ ಒಳ ಪ್ರವೇಶ ಮಾಡಿ ನೋಡಿದರೆ ವಾರ್ಡ್ಗಳಲ್ಲಿ ಹಾಸಿಗೆಗಳು ಖಾಲಿ ಖಾಲಿಯಾಗಿರುವುದು ಕಣ್ಣಿಗೆ ಕಾಣುತ್ತದೆ. ಹಾಗದರೆ ಆಸ್ಪತ್ರೆ ಆವರಣದಲ್ಲಿ ನಿಂತಿರುವ ನೂರಾರು ದ್ವಿಚಕ್ರವಾಹನಗಳು ಏಕೆ ನಿಂತಿವೆ ಎಂಬ ಪ್ರಶ್ನೆ ತಲೆದೂರುತ್ತದೆ, ಇದರ ಸತ್ಯಾಂಶ ಈ ರೀತಿ ಇದೆ ಗ್ರಾಮೀಣ ಪ್ರದೇಶದಿಂದ ಹಾಗೂ ನಗರದಲ್ಲಿನ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ಸರಕಾರಿ ಕಚೇರಿ ಹಾಗೂ ದೈನಂದಿನ ಕೆಲಸಕ್ಕಾಗಿ ಚಿತ್ರದುರ್ಗ, ಬಳ್ಳಾರಿ, ಬೆಂಗಳೂರು , ಹಿರಿಯೂರು ಹೀಗೆ ಹಲವು ಕಡೆ ಪ್ರಾಯಾಣ ಮಾಡುವ ಸಲುವಾಗಿ ವಾಹನಗಳ ಭದ್ರತೆ ಹಾಗೂ ಬಸ್ ನಿಲ್ದಾಣ ಸಮೀವಿರುವ ಪ್ರಯುಕ್ಕ ನೌಕರರು, ವ್ಯಾಪಾರಸ್ಥರು, ಸರಕಾರಿ ಕಚೇರಿಗೆ ಬರುವವರೂ ಸಹ ಆಸ್ಪತ್ರೆ ಆವರಣದಲ್ಲಿ ತಮ್ಮ ದ್ವಿಚಕ್ರವಾಹನಗಳನ್ನು ನಿಲ್ಲಿಸಿ ಹೋಗುತ್ತಾರೆ.
ಈ ವಾಹನ ನಿಲುಗಡೆಯ ಪ್ರದೇಶದಲ್ಲಿ ತುರ್ತು ಚಿಕಿತ್ಸಾ ಘಟಕವಿರುವುದರಿಂದ ಪ್ರತಿದಿನ ಹೆರಿಗೆ, ವಿಷಜಂತು, ಸುಟ್ಟಗಾಯಾಳು, ಅಪಘಾತ ಸಂಭವಿಸಿದ ರೋಗಿಗಳನ್ನು ಕರೆತರುವ 108 ಹಾಗೂ ಅಂಬ್ಯೂಲೆಸ್ಸ್ಗಳವಾಹನ ಚಾಲಕರು ದ್ವಿಚಕ್ರವಾಹನಗಳ ನಿಲುಗಡೆಯನ್ನು ಚಾಲನೆಗೆ ಹರಸಹಾಸ ಪಡುವಂತಾಗಿದೆ. ಆಸ್ಪತ್ರೆಯ ವಾಚ್ ಮ್ಯಾನ್ಗಳು ದ್ವಿಚಕ್ರವಾಹನಗಳ ನಿಲುಗಡೆ ತಡೆಯಲು ಹೋದಂತ ಸಂದರ್ಭದಲ್ಲಿ ಇವರ ಮೇಲೆ ಹಲ್ಲೆ ನಡೆದು ಠಾಣೆ ಮೆಟ್ಟಿಲೇರಿದ ಪ್ರಕರಣಗಳಿವೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಇನ್ನು ಮುಂದೆಯಾದರೂ ಸಂಬಂಧ ಪಟ್ಟ ಇಲಾಖೆಯವರು ಆಸ್ಪತ್ರೆ ಆವರಣದಲ್ಲಿ ದ್ವಿಚಕ್ರವಾಹನಗಳ ನಿಲುಗಡೆ ನಿಷೇದಕ್ಕೆ ಕ್ರಮ ಜರುಗಿಸುವರೇ ಕಾದು ನೋಡ ಬೇಕಿದೆ.
ವಾಹನ ನಿಲುಗಡೆ ಕಟ್ಟಡಕ್ಕೆ ಬೀಗ..
ನಗರಸಭೆವತಿಯಿಂದ ನಿರ್ಮಿಸಿ ವಾಹ ನಿಲುಗಡೆ ಕಟ್ಟಡಕ್ಕೆ ಬೀಗ ಜಡಿದಿರುವುದು
ನಗರದ ಖಾಸಗಿ ಬಸ್ ನಿಲ್ದಾಣದ ನೆಲ ಮಹಡಿಯಲ್ಲಿ ನಗರಸಭೆವತಿಯಿಂದ ಸಾರ್ವಜನಿಕ ತೆರಿಗೆ ಹಣದಲ್ಲಿ ನೂರಾರು ವಾಹನಗಳ ನಿಲುಗಡೆ ಸುಸಜ್ಜಿತ ಪಾರ್ಕಿಂಗ್ ಸ್ಥಳ
ನಗರದ ಖಾಸಗಿ ಬಸ್ ನಿಲ್ದಾಣದ ನೆಲ ಮಹಡಿಯಲ್ಲಿ ನಗರಸಭೆವತಿಯಿಂದ ಸಾರ್ವಜನಿಕ ತೆರಿಗೆ ಹಣದಲ್ಲಿ ನೂರಾರು ವಾಹನಗಳ ನಿಲುಗಡೆ ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆ ಮಾಡಿ ಸುಮಾರು ಎರಡು ವರ್ಷ ಕಳೆದರೂ ಉದ್ಘಾಟನೆ ಭಾಗ್ಯ ಕಾಣದೆ ಇರುವುದರಿಂದ ವಾಹನ ಸವಾವರು ತಮ್ಮ ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸುವುದು ಅನಿವಾರ್ಯವಾಗಿದ್ದು ಸುದ್ದಜ್ಜಿನ ವಾಹನ ನಿಲುಗಡೆ ಸ್ಥಳವಿದ್ದರೂ ಇಲ್ಲದಂತಾಗಿದೆ.
ವಾಹನ ನಿಲುಗಡೆ ಸ್ಥಳವಿಲ್ಲದೆ ನೆಹರು ವೃತ್ತ, ಸಾರಿಗೆ ಬಸ್ ನಿಲ್ದಾಣ, ಖಾಸಗಿ ಬಸ್ ನಿಲ್ದಾಣದ ಎಸ್ ಆರ್ ಕಾಂಪ್ಲೆಕ್ ಮುಂಭಾಗ, ತಾಲೂಕು ಕಚೇರಿ ಆವರಣ, ತಾಲೂಕು ಪಂಚಾಯತ್. ಲೋಕೋಪಯೋಗಿ ಇಲಾಖೆ ಹಾಗೂ ನಗರದ ಮುಖ್ಯ ರಸ್ತೆಬದಿ ಎಲ್ಲೆಂದರೆಲ್ಲಿ ದ್ವಚಕ್ರವಾಹನಗಳ ನಿಲುಗಡೆಯಿಂದ ನಗರದಲ್ಲಿ ದ್ವಿಚಕ್ರವಾಹನ ಕಳ್ಳರ ಹಾವಳಿ ಹೆಚ್ಚಾಗಿದ್ದು ಬೈಕ್ ಮಾಲಿಕರನ್ನು ಆತಂಕ್ಕೆ ದೂಡಿದೆ ಇದರಿಂದ ಪೊಲೀಸ್ ಇಲಾಖೆಗೂ ತಲೆ ಬಿಸಿಯಾಗಿದೆ.
ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ವಾಹನ ನಿಲುಡೆಗೆ ಕಟ್ಟಡ ಉದ್ಘಾಟನೆ ಭಾಗ್ಯ ಕಲ್ಪಿಸಿ ಎಲ್ಲೆಂದರಲ್ಲಿ ನಿಲ್ಲುವ ವಾಹಗಳಿಗೆ ಕಡಿವಾಣ ಹಾಕುವರೇ ಕಾದು ನೋಡ ಬೇಕಿದೆ.

ಚಿತ್ರದುರ್ಗ ರಸ್ರೆಯ ಲೋಕೋಪಯೋಗಿ ಇಲಾಖೆ ಮುಂಭಾಗದ ಮುಖ್ಯರಸ್ತೆಯ ಬದಿಯಲ್ಲಿ ನಿಲುಗಡೆಯಾಗಿರುವ ದ್ವಿಚಕ್ರವಾಹನಗಳು

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page