ಚಿತ್ರದುರ್ಗ ಅ.03:
ಯುವ ಜನತೆ ಯಶಸ್ವಿ ಉದ್ಯಮಶೀಲರಾಗುವ ಮೂಲಕ ಆರ್ಥಿಕವಾಗಿ ಸಬಲರಾಗಿ, ರಾಷ್ಟ್ರದ ಆರ್ಥಿಕತೆಗೆ ಕೊಡುವಂತಾಗಲಿ ಎಂದು ಸಿಡಾಕ್ ಸಂಸ್ಥೆಯ ಜಂಟಿ ನಿರ್ದೇಶಕ ಆರ್.ಪಿ. ಪಾಟೀಲ್ ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು.
ನಗರದ ವಿಕ್ಟೋರಿ ಉಮೆನ್ಸ್ ವೆಲ್ಫ್ರ್ ಸೋಸೈಟಿಯಲ್ಲಿ ಈಚೆಗೆ ಆಯೋಜಿಸಿದ್ದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ವಿಕ್ಟೋರಿ ಉಮೆನ್ಸ್ ವೆಲ್ಫ್ರ್ ಸೊಸೈಟಿ ಇವರ ಸಂಯುಕ್ತಾಶ್ರಯದಲ್ಲಿ ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ಕಾರ್ಯಕ್ರಮ ಉದ್ಘಾಟಸಿ ಅವರು ಮಾತನಾಡಿದರು.
ಜನಸಂಖ್ಯಾಸ್ಪೋಟ ಹಾಗೂ ಅದರಿಂದುಂಟಾಗುದ ನಿರುದ್ಯೋಗ ಸಮಸ್ಯೆ ನಿವಾರಣೆಗಾಗಿ(ಇಂದಿನ ಯುವಜನತೆಸ್ವಯಂ ಉದ್ಯಮವನ್ನು ಸ್ಥಾಪಿಸಲು) ಸ್ವಯಂ ಉದ್ಯಮ ಸ್ಥಾಪನೆ ಪರಿಹಾರವಾಗಬಹುದೆಂದು ಸರ್ಕಾರ ಈ ತರಹದ ತರಬೇತಿ ಕಾರ್ಯಕ್ರಮಗಳನ್ನು ಪ್ರಾಯೋಜಿಸುತ್ತದೆ. ರಾಜ್ಯದಾದ್ಯಂತ ಉದ್ಯಮಶೀಲತೆ ಅಭಿವೃದ್ಧಿ ಪಡಿಸಲು ಸರ್ಕಾರದಿಂದ ಸ್ಥಾಪಿತವಾಗಿರುವ ಸಿಡಾಕ್ (ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ) ಸಂಸ್ಥೆಯು “ಉದ್ಯಮಶೀಲತೆಯು ಹುಟ್ಟಿನಿಂದ ಮಾತ್ರ ಬರಬೇಕಾಗಿಲ್ಲ, ತರಬೇತಿಯ ಮೂಲಕ ಸಾಮಾನ್ಯ ಜನರಲ್ಲೂ ಉದ್ಯಮಶೀಲತೆಯನ್ನು ಉದ್ದೀಪನೆಗೊಳಿಸಬಹುದು” ಎಂಬ ತತ್ವದೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಇಂದಿನ ಕಾರ್ಯಕ್ರಮದಲ್ಲಿ ಉದ್ಯಮಶೀಲತೆ ಎಂದರೇನು, ಮಹಿಳೆಯರಿಗಾಗಿ ಇರುವ ಉದ್ಯಮಾವಕಾಶಗಳ ಮಾಹಿತಿ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸ್ವಯಂ ಉದ್ಯಮ ಸ್ಥಾಪಿಸಲು ಸಹಕರಿಸುವ ಯೋಜನೆಗಳ ಮಾಹಿತಿ, ಸಮರ್ಪಕ ಮಾಹಿತಿಗಾಗಿ ಸಂಪರ್ಕಿಸಬೇಕಾದ ಇಲಾಖೆಗಳ ಮಾಹಿತಿಯನ್ನು ಪರಿಣಿತ ಅತಿಥಿ ಭೋಧಕ ಓಬಳೇಶ್ ಅವರು ನೀಡಲಿದ್ದಾರೆ. ಈ ತರಬೇತಿಯಲ್ಲಿ ಆಸಕ್ತಿಯಿಂದ ಭಾಗವಹಿಸಿ ಸದುಪಯೋಗ ಪಡಿಸಿಕೊಳ್ಳಿ ಎಂದು ತಿಳಿಸಿದರು.
ಲೀಡ್ ಬ್ಯಾಂಕ್ ವ್ಯವಸ್ಧಾಪಕ ಎಸ್.ತಿಪ್ಪೇಶ್ ಮಾತನಾಡಿ, ಉದ್ಯಮದಾರರಬೇಕೆಂಬ ಹಂಬಲದಿಂದ ತರಬೇತಿ ಪಡೆಯಲು ಆಗಮಿಸಿರುವ ಎಲ್ಲಾ ಶಿಬಿರಾರ್ಥಿಗಳನ್ನು ಅಭಿನಂದಿಸಿದ ಅವರು, ಉದ್ಯಮದಾರರಾಗುವ ಹಂತದಲ್ಲಿ ಎದುರಿಸಬೇಕಾದ ಪ್ರಮುಖ ವಿಚಾರಗಳ ಬಗ್ಗೆ ತಿಳಿಸಿ ಸಲಹೆಗಳನ್ನು ನೀಡಿದರು.
ಬ್ಯಾಂಕಿನಿಂದ ಸಾಲ ಸೌಲಭ್ಯ ಪಡೆಯುವಲ್ಲಿ ಎದುರಿಸಬೇಕಾದ ವಿವಿಧ ಹಂತಗಳ ಬಗ್ಗೆ ಮಾಹಿತಿ ಹಾಗೂ ಸಲಹೆಗಳನ್ನು ನೀಡುವ ಮೂಲಕ ಶಿಬಿರಾರ್ಥಿಗಳನ್ನು ಪ್ರೋತ್ಸಾಹಿಸಿದರು.
ಈ ಸಂದರ್ಭದಲ್ಲಿ ವಿಕ್ಟೋರಿ ಉಮೆನ್ಸ್ ವೆಲ್ಫ್ರ್ ಸೊಸೈಟಿಯ ಅಧ್ಯಕ್ಷ ಅಕ್ತರ್ ಉನ್ನಿಸ, ಸಂಪನ್ಮೂಲ ವ್ಯಕ್ತಿಯಾಗಿ ಓಬಳೇಶ್, ತರಬೇತಿದಾರ ಪಿ. ವಿಜಯ ಕುಮಾರ ಶಿಬಿರಾರ್ಥಿಗಳಾದ ರಾಜೇಶ್ವರಿ, ಮೋಹನ್ ಪಿ ಹೆಡ್ಗೆ, ದೇವಿಕಾ ಸೇರಿದಂತೆ ಇತರರು ಇದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments