ಎರಡನೇ ಅವಧಿಗೆ ಗ್ರಾ.ಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮೀಸಲಾತಿ ನಿಗಧಿ

by | 15/06/23 | ಜನಧ್ವನಿ


ಚಿತ್ರದುರ್ಗ(ಜನಧ್ವನಿ ವಾರ್ತೆ)ಜೂನ್.15:
ರಾಜ್ಯ ಚುನಾವಣೆ ಆಯೋಗದ ಆದೇಶದಂತೆ 2020ನೇ ಸಾಲಿನಲ್ಲಿ ಆಯ್ಕೆಯಾದ ಗ್ರಾಮ ಪಂಚಾಯಿತಿ ಸದಸ್ಯರಿಗೆ ಎರಡನೇ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮೀಸಲಾತಿಯನ್ನು ನಿಗಧಿಪಡಿಸಲಾಗಿದೆ.
ಚಿತ್ರದುರ್ಗ ತಾಲ್ಲೂಕಿನ 38 ಗ್ರಾಮ ಪಂಚಾಯತಿಗಳ ಪೈಕಿ 13 ಸ್ಥಾನಗಳು ಅನುಸೂಚಿತ ಜಾತಿ, ಇದರಲ್ಲಿ 7 ಮಹಿಳೆ, 10 ಅನುಸೂಚಿತ ಪಂಗಡ, ಇದರಲ್ಲಿ 5 ಮಹಿಳೆ, 15 ಸಾಮಾನ್ಯ ಇದರಲ್ಲಿ 7 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿದೆ.
ಚಳ್ಳಕೆರೆ ತಾಲ್ಲೂಕಿನ 40 ಗ್ರಾಮ ಪಂಚಾಯತಿಗಳ ಪೈಕಿ 11 ಸ್ಥಾನಗಳು ಅನುಸೂಚಿತ ಜಾತಿ, ಇದರಲ್ಲಿ 6 ಮಹಿಳೆ, 14 ಅನುಸೂಚಿತ ಪಂಗಡ ಇದರಲ್ಲಿ 7 ಮಹಿಳೆ, 15 ಸಾಮಾನ್ಯ ಇದರಲ್ಲಿ 7 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿದೆ.
ಮೊಳಕಾಲ್ಮೂರು ತಾಲ್ಲೂಕಿನ 16 ಗ್ರಾಮ ಪಂಚಾಯತಿಗಳ ಪೈಕಿ 4 ಸ್ಥಾನಗಳು ಅನುಸೂಚಿತ ಜಾತಿ, ಇದರಲ್ಲಿ 2 ಮಹಿಳೆ, 8 ಅನುಸೂಚಿತ ಪಂಗಡ ಇದರಲ್ಲಿ 4 ಮಹಿಳೆ, 4 ಸಾಮಾನ್ಯ ಇದರಲ್ಲಿ 2 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿದೆ.
ಹಿರಿಯೂರು ತಾಲ್ಲೂಕಿನ 33 ಗ್ರಾಮ ಪಂಚಾಯತಿಗಳ ಪೈಕಿ 10 ಸ್ಥಾನಗಳು ಅನುಸೂಚಿತ ಜಾತಿ, ಇದರಲ್ಲಿ 5 ಮಹಿಳೆ, 4 ಅನಸೂಚಿತ ಪಂಗಡ ಇದರಲ್ಲಿ 2 ಮಹಿಳೆ, 2 ಹಿಂದುಳಿದ “ಅ” ವರ್ಗಕ್ಕೆ ಇದರಲ್ಲಿ 1 ಮಹಿಳೆ, 17 ಸಾಮಾನ್ಯ ಇದರಲ್ಲಿ 9 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿದೆ.
ಹೊಳಲ್ಕೆರೆ ತಾಲ್ಲೂಕಿನ 29 ಗ್ರಾಮ ಪಂಚಾಯತಿಗಳ ಪೈಕಿ 9 ಅನುಸೂಚಿತ ಜಾತಿ, ಇದರಲ್ಲಿ 5 ಮಹಿಳೆ, 4 ಅನುಸೂಚಿತ ಪಂಗಡ, ಇದರಲ್ಲಿ 2 ಮಹಿಳೆ, 1 ಹಿಂದುಳಿದ “ಅ” ವರ್ಗದ ಮಹಿಳೆ, 15 ಸಾಮಾನ್ಯ ಇದರಲ್ಲಿ 7 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ.
ಹೊಸದುರ್ಗ ತಾಲ್ಲೂಕಿನ 33 ಗ್ರಾಮ ಪಂಚಾಯತಿಗಳ ಪೈಕಿ 7 ಅನುಸೂಚಿತ ಜಾತಿ, ಇದರಲ್ಲಿ 4 ಮಹಿಳೆ, 3 ಅನುಸೂಚಿತ ಪಂಗಡ ಇದರಲ್ಲಿ 2 ಮಹಿಳೆ, 5 ಹಿಂದುಳಿದ “ಅ” ವರ್ಗಕ್ಕೆ, ಇದರಲ್ಲಿ 2 ಮಹಿಳೆ, 1 ಹಿಂದುಳಿದ “ಬ” ವರ್ಗದ ಮಹಿಳೆ, 17 ಸಾಮಾನ್ಯ ಇದರಲ್ಲಿ 8 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ.
ಗ್ರಾಮ ಪಂಚಾಯತಿವಾರು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗಿದಿ ಕಾರ್ಯಕ್ರಮವನ್ನು ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ. ಜೂನ್ 19 ರಂದು ಬೆಳಿಗ್ಗೆ 11 ಗಂಟೆಗೆ ಮೊಳಕಾಲ್ಮೂರು ತಾಲ್ಲೂಕಿಗೆ ಸಂಬಂಧಿಸಿದಂತೆ ಮೊಳಕಾಲ್ಮೂರು ಪಟ್ಟಣದ ಗುರುಭವನ, ಚಳ್ಳಕೆರೆ ತಾಲ್ಲೂಕಿಗೆ ಸಂಬಂಧಿಸಿದಂತೆ ಮಧ್ಯಾಹ್ನ 3 ಗಂಟೆಗೆ ಚಳ್ಳಕೆರೆ ನಗರದ ಪಾವಗಡ ರಸ್ತೆಯ ಶ್ರೀ ಗುರು ರಾಘವೇಂದ್ರ ಕಲ್ಯಾಣ ಮಂಟಪ, ಜೂನ್ 20 ರಂದು ಬೆಳಿಗ್ಗೆ 11 ಗಂಟೆಗೆ ಹೊಳಲ್ಕೆರೆ ತಾಲ್ಲೂಕಿಗೆ ಸಂಬಂಧಿಸಿದಂತೆ ಹೊಳಲ್ಕೆರೆ ಪಟ್ಟಣದ ಶಿವಮೊಗ್ಗ ರಸ್ತೆಯ ಕುಕ್ಕಾಡೇಶ್ವರಿ ದೇವಸ್ಥಾನದ ಎದುರಿನ ವಾಲ್ಮೀಕಿ ಸಮುದಾಯ ಭವನದಲ್ಲಿ, ಹೊಸದುರ್ಗ ತಾಲ್ಲೂಕಿಗೆ ಸಂಬಂಧಿಸಿದಂತೆ ಮಧ್ಯಾಹ್ನ 3 ಗಂಟೆಗೆ ಹೊಸದುರ್ಗ ಪಟ್ಟಣದ ಮುಖ್ಯ ರಸ್ತೆಯಲ್ಲಿನ ಗೌಸಿಯಾ ಶಾದಿಮಹಲ್, ಜೂನ್ 21 ರಂದು ಬೆಳಿಗ್ಗೆ 11 ಗಂಟೆಗೆ ಹಿರಿಯೂರು ತಾಲ್ಲೂಕಿಗೆ ಸಂಬಂಧಿಸಿದಂತೆ ಹಿರಿಯೂರು ನಗರದ ಹುಳಿಯಾರು ಮುಖ್ಯ ರಸ್ತೆ ತಹಾ ಕಲ್ಯಾಣ ಮಂಟಪ, ಚಿತ್ರದುರ್ಗ ತಾಲ್ಲೂಕಿಗೆ ಸಂಬಂಧಿಸಿದಂತೆ ಮಧ್ಯಾಹ್ನ 3 ಗಂಟೆಗೆ ಚಿತ್ರದುರ್ಗ ನಗರದ ಮಾಳಪ್ಪನಹಟ್ಟಿ ರಸ್ತೆಯ ಶ್ರೀ ತಿರುಮಲ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಎಲ್ಲಾ ಗ್ರಾಮ ಪಂಚಾಯತಿ ಸದಸ್ಯರು ಕಾರ್ಯಕ್ರಮಕ್ಕೆ ತಪ್ಪದೇ ಹಾಜರಾಗುವಂತೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page