ಎರಡನೇ ದಿನಕ್ಕೆ ಕಾಲಿಟ್ಟು ಗಂಜಿಗುಂಟೆ ಗ್ರಾಮಸ್ಥರ ಪ್ರತಿಭಟನೆ- ಪಿಡಿಒ ಪ್ರತಿಭಟನಾಕರರನ್ನು ಮನವೊಲಿಸಿದರೂ ಜಗ್ಗದ ಪ್ರತಿಭಟನಾಕಾರರು.

by | 26/03/24 | ಪ್ರತಿಭಟನೆ

ಚಳ್ಳಕೆರೆ ಜನಧ್ವನಿ ಮಾ.26.ಚಳ್ಳಕೆರೆ :ತಾಲೂಕಿನ ಸೋಮಗುದ್ದು ಗ್ರಾಮಪಂಚಾಯಿತಿ ವ್ಯಾಪ್ತಿಯ ಗಂಜಿಗುಂಟೆ ಗ್ರಾಮದಲ್ಲಿ ನಿವೇಶಕ್ಕಾಗಿ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದೆ.
ಪ್ರತಿಭಟನಾ ಸ್ಥಳಕ್ಕೆ ಗ್ರಾಪಂ ಪಿಡಿಒ ಗೌತಮಿ ದೌಢಾಯಿಸಿ ಪ್ರತಿಭಟನಾ ಕರಾರರನ್ನು ಮನವೊಲಿಸಲು ಮುಂದಾದರೂ ವಿಫಲವಾಗಿದ್ದು ಪಿಡಿಒ ಗೌತಮಿಗೆ ಮುತ್ತಿಗೆ ಹಾಕಿ ಗಂಜಿಗುಂಟೆ ಸರ್ಕಾರಿ ಗೋಮಾಳವನ್ನು ಪ್ರಭಾವಿಗಳು ಅಕ್ರಮಿಸಿಕೊಂಡಿರುವುದನ್ನು ತೆರವು ಮಾಡಿಸಿ, ನಿವೇಶನಗಳಿಲ್ಲದ ಬಡಜನರಿಗೆ ಗೋಮಾಳದಲ್ಲಿ ಖಾಲಿ ನಿವೇಶನ ನೀಡಬೇಕೆಂದು ಗ್ರಾಮದ ಮಹಿಳೆಯರು ಗ್ರಾಮದ ರಸ್ತೆಗೆ ಮುಳ್ಳಿನ ಕಳ್ಳೆ ಅಡ್ಡಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ.


ಪಿಡಿಒ ಗೌತಮಿ ಮಾತನಾಡಿ ಈಗ ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ ನಾಯಕಟ್ಟಿ ಜಾತ್ರೆ ಇರುವುದರಿಂದ ಇನ್ನು ಎರಡು ದಿನ ಅಧಿಕಾರಿಗಳುಜಾತ್ರೆ ಚುನಾವಣೆ ಕರ್ತವ್ಯದಲ್ಲಿ ನಿರತರಾಗಿದ್ದು ಅಧಿಕಾರಿಗಳ ಗಮನ ಸೆಳೆದ ನಂತರ ಅವರ ಆದೇಶವನ್ನು ಪಾಲನೆ ಮಾಡಲಾಗುದು ಅಲ್ಲಿಯವರೆಗೆ ಪ್ರತಿಭಟನೆ ಹಿಂಪಡೆಯುವಂತೆ ಮನವೊಲಿಸಿದರೂ ಸಹ ನಮಗೆ ನ್ಯಾಯ ದೊರೆಯುವ ತನಕ ಪ್ರತಿಭಟನೆ ಮಾಡುವುದಾಗಿ ತಿಳಿಸಿದ್ದಾರೆ.
ಗಂಜಿಗುಂಟೆ ಗ್ರಾಮದ ಸರ್ಕಾರಿ ಗೋಮಾಳವನ್ನು ಒಂದೇ ಸಮಾಜದವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಬೇಲಿ ಹಾಕಿಕೊಂಡಿದ್ದಾರೆ, ಉಳಿದ ಸಮಾಜದಲ್ಲಿ ನಿವೇಶಗಳಿಲ್ಲದ ಬಡಜನರು ಇದ್ದಾರೆ, ಇವರು ಎಲ್ಲಿಗೆ ಹೋಗಬೇಕು. ನಿವೇಶನ ಇದ್ದವರೆ ಸರ್ಕಾರಿ ಗೋಮಾಳವನ್ನು ಒತ್ತುವರಿ ಮಾಡಿಕೊಂಡಿದ್ದಾರೆ, ಸ್ಥಳಕ್ಕೆ ತಹಶೀಲ್ದಾರ್ ಭೇಟಿ ಒತ್ತುವರಿ ಮಾಡಿಕೊಂಡಿರುವ ಗೋಮಾಳವನ್ನು ತೆರವು ಮಾಡಿಸಿ, ನಿವೇಶನದ ಇಲ್ಲದ ಬಡಜನರಿಗೆ ಗೋಮಾಳದಲ್ಲಿ ಖಾಲಿ ನಿವೇಶನ ನೀಡಬೇಕು ಎಂದು ಗ್ರಾಮಸ್ಥರಾದ ರಂಗಸ್ವಾಮಿ, ರಮೇಶ್, ಕೆಂಚಮ್ಮ, ಕಮಲಮ್ಮ,ಹರೀಶ್ ಸೇರಿದಂತೆ ಮುಂತಾದವರು ಒತ್ತಾಯ ಮಾಡಿದ್ದಾರೆ.
ಗಂಜಿಗುಂಟೆ ಗ್ರಾಮದ ಪಕ್ಕದಲ್ಲಿ ಸುಮಾರು ಐದು ಎಕರೆ ಸರ್ಕಾರಿ ಗೋಮಾಳವಿದೆ, ಈ ಜಾಗದಲ್ಲಿ 20 ಕ್ಕೂ ಹೆಚ್ಚು ಫಲಾನುಭವಿಗಳಿಗೆ ಸರ್ಕಾರ ಖಾಲಿ‌ನಿವೇಶನದ ಹಕ್ಕು ಪತ್ರ ನೀಡಿತ್ತು, ಅವರು ಮನೆಗಳು ಕಟ್ಟಿಕೊಂಡಿದ್ದಾರೆ, ಅದಕ್ಕೆ ನಮ್ಮದು ಯಾವುದೇ ಅಡ್ಡಿಯಿಲ್ಲದೆ, ಆದರೆ ಗ್ರಾಮದಲ್ಲಿ ಎರಡೆರಡು ಮನೆಯಿದ್ದರು, ಗೋಮಾಳವನ್ನು ಅಕ್ರಮಿಸಿಕೊಂಡರೆ ನಿವೇಶನವಿಲ್ಲದವರು ಎಲ್ಲಿಗೆ ಹೋಗಬೇಕು, ಜಾನುವಾರುಗಳು ಮೇಯಲು, ಮಕ್ಕಳು ಆಟವಾಡಲು ಜಾಗವಿಲ್ಲದಂತೆ ಪ್ರಭಾವಿಗಳು ಸರ್ಕಾರಿ ಗೋಮಾಳದಲ್ಲಿ ಗುಡಿಸಲು, ಕುರಿದೊಡ್ಡಿ, ಮೇವಿನ ಬಣಿವೆಗಳು ಹಾಕಿಕೊಂಡು ಒಬ್ಬರು ಒಂದು-ಒಂದು ಎಕರೆ ಅಕ್ರಮಿಸಿಕೊಂಡಿದ್ದಾರೆ. ಇದರಿಂದ ಮುಂದಿನ ದಿನಗಳಲ್ಲಿ ಸರ್ಕಾರಿ ಜಾಗವಿಲ್ಲದೆ ಸಾರ್ವಜನಿಕ ಕಾರ್ಯಕ್ರಮಗಳಿಗೆ ತುಂಬ ತೊಂದರೆಯಾಗುತ್ತದೆ. ಆದ್ದರಿಂದ ಗೋಮಾಳ ಒತ್ತುವರಿ ತೆರವು ಮಾಡಿಸಬೇಕು ಎಂದು ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page