ಎಲ್ಲರೂ ಒಗ್ಗಟ್ಟಾಗಿ ಪರಿಸರವನ್ನು ಉಳಿಸಿದರೆ ಮಾತ್ರ ಭವಿಷ್ಯದಲ್ಲಿ ಉತ್ತಮ ಗಾಳಿ, ಮಳೆ ಮತ್ತು ಪ್ರಕೃತಿಯ ಲಾಭವನ್ನು ಪಡೆಯಬಹುದು ಎಂದು ಪ್ರಾಚಾರ್ಯ ಎಂರವೀಶ್.

by | 30/09/23 | ಪರಿಸರ


ಚಳ್ಳಕೆರೆ ಸೆ.30.ಹಸಿರಿನಿಂದ ಕಂಗೊಳಿಸುವ ಶಾಲೆಯ ವಾತಾವರಣವು ಕಲಿಕೆಗೆ ಮತ್ತು ಸಾಧನೆಗೆ ಹೆಚ್ಚು ಪ್ರೇರಣೆ ನೀಡುತ್ತದೆ. ಎಲ್ಲರೂ ಒಗ್ಗಟ್ಟಾಗಿ ಪರಿಸರವನ್ನು ಉಳಿಸಿದರೆ ಮಾತ್ರ ಭವಿಷ್ಯದಲ್ಲಿ ಉತ್ತಮ ಗಾಳಿ, ಮಳೆ ಮತ್ತು ಪ್ರಕೃತಿಯ ಲಾಭವನ್ನು ಪಡೆಯಬಹುದು ಎಂದು ಪ್ರಾಚಾರ್ಯ ಎಂರವೀಶ್ ಕಿವಿಮಾತು ಹೇಳಿದರು.
ನಗರದ ಸೋಮಗುದ್ದು ರಸ್ತೆಯ ಸರಕಾರಿ ಪಿ.ಯು.ಕಾಲೇಜಿನ ಆವರಣದಲ್ಲಿ ಅರಣ್ಯ ಇಲಾಖೆ ಹಾಗೂ ಕಾಲೇಜು ಸಂಯುಕ್ತಾಶ್ರಯದಲ್ಲು ಆಯೋಜಿಸಿದ್ದ ಸಸ್ಯ ಶ್ಯಾಮಲ ಕಾರ್ಯಕ್ರಮದಲ್ಲಿ ಗಿಡ ನೆಡುವ ಮೂಲಕ ಮಾತನಾಡಿದರು.


ಮಾನವರ ದುರಾಸೆಗೆ ಮಿತಿ ಇಲ್ಲದಂತಾಗಿದ್ದು ತಮ್ಮ ಸ್ವಾರ್ಥಕ್ಕಾಗಿ ಗಿಡ ಮರಗಳನ್ನು ಕಡಿದು ಕಾಡನ್ನು ನಾಶಪಡಿಸಿ ಬರದ ನಾಡನ್ನಾಗಿ ಪರಿವರ್ತನೆ ಮಾಡುತ್ತಿದ್ದಾರೆ.


ಹಸಿರೇ ಉಸಿರು ಎಂಬ ಮಾತು ಕೇವಲ ತಮ್ಮ ತುಟಿಗಳಲ್ಲಿ ಪರಿಸರ ದಿನಾಚರಣೆ ಸಸ್ಯ ಶಾಮಲಾದಂತಹ ಕಾರ್ಯಕ್ರಮಗಳಲ್ಲಿ ಹರಿದಾಡುತ್ತದೆ ಆದರೆ ಅದನ್ನು ಜಾರಿಗೊಳಿಸುವ ಮನಸ್ಸನ್ನು ಯಾರು ಮಾಡುವುದಿಲ್ಲ ಇಂದಿನ ವಿದ್ಯಾರ್ಥಿಗಳು ತಮ್ಮ ಕಾಲೇಜು ಹಾಗೂ ಮನೆಗಳ ಸುತ್ತಮುತ್ತ ಒಂದೊಂದು ಗಿಡ ನೆಟ್ಟು ಅದನ್ನು ಪೋಷಿಸಿದರೆ ಸಾವಿರ ಜನಕ್ಕೆ ನೆರಳು ನೀಡಿ ಉತ್ತಮ ವಾತಾವರಣ ನಿರ್ಮಾಣವಾಗಲು ಕಾರಣವಾಗುತ್ತದೆ ಕಾಲೇಜಿನ ಆವರಣದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯ ಮೂಲಕ 50ಕ್ಕೂ ಹೆಚ್ಚು ಸಸಿ ನೆಡೆಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ವಿದ್ಯಾರ್ಥಿಗಳಿಗೆ ಅವುಗಳನ್ನು ದತ್ತು ನೀಡಿವ ಮೂಲಕ ಪೋಷಿಸುವ ಜವಾಬ್ದಾರಿ ನೀಡಲಾಗುವುದು ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ಹಿರಿಯ ಉಪನ್ಯಾಸಕರಾದ ಹಬೀಬ್, ಪುಷ್ಪಲತ ಜಿ ಟಿ,  ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿಗಳಾದ ಶಾಂತಕುಮಾರಿ ಬಿ,  ಕೆ ವಿ ಚಂದ್ರಶೇಖರ್, ರವಿಕುಮಾರ್ ಎಸ್, ಜಗದೀಶ್, ಪುಟ್ಟರಂಗಪ್ಪ, ಜಾನಕಿ, ಈರಣ್ಣ, ಮಹಂತೇಶ್, ರಾಜಶೇಖರ್, ಡಿ ಕೆ ಚಂದ್ರಶೇಖರ್,  ತಿಪ್ಪೇಸ್ವಾಮಿ, ನಾಗರಾಜ್ ಬೆಳಗಟ್ಟೆ, ಮಂಜುನಾಥ್, ಲೋಕೇಶ್, ಮಲ್ಲೇಶ್ , ಈಶ್ವರಪ್ಪ ಹಾಗೂ ಎನ್ ಎಸ್ ಎಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page