ಐದು ವರ್ಷಗಳ ನಂತರ ನಿರಂತರ ಜ್ಯೋತಿ ಸಂಪರ್ಕ ಭಾಗ್ಯ ಕಂಡ ಗ್ರಾಮಸ್ಥರು. ಜನಧ್ವನಿ ವರದಿ ಎಫೆಕ್ಟ್.

by | 07/09/23 | ಇಂಪ್ಯಾಕ್ಟ್

ಜನಧ್ವನಿ ಡಿಜಿಟಲ್ ಮೀಡಿಯಾ ವರದಿ ಫಲಶೃತಿ.
‌‌‌‌ ‌ ‌‌‌‌ ಚಳ್ಳಕೆರೆ ಸೆ.7 ಐದು ವರ್ಷಗಳು ಕಳೆದರೂ ನಿಂತಲ್ಲೇ ನಿಂತ ನಿರಂತರಜ್ಯೋತಿ ಯೋಜನೆ ವಂಚಿತ ಓಬಯ್ಯನಟ್ಟಿ ಎಂಬ ತಲೆಬರಹದಡಿಯಲ್ಲಿ ಸೆ.1 ರಂದು ವರದಿ ಬೆಳಕು‌ಚೆಲ್ಲಿದ ಬೆನ್ನಲ್ಲೆ ಬೆಸ್ಕಾಂ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ವಿದ್ಯುತ್ ಪರಿವರ್ತಕ್ಕೆ ಹಬ್ಬಿದ ಬಳ್ಳಿ ಗಿಡಗೆಂಟೆಗಳನ್ನು ತೆರವುಗೊಳಿಸಿ ನಿರಂತರ ಜ್ಯೋತಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದಾರೆ.
ಚಳ್ಳಕೆರೆ ತಾಲೂಕಿನ ತಿಮ್ಮಪ್ಪಯ್ಯನಹಳ್ಳಿ ಗ್ರಾಪಂ ವ್ಯಾಪ್ತಿಯ
ಓಬಯ್ಯನಹಟ್ಟಿ ಸಮೀಪದ ಮ್ಯಾಕಮಲ್ಲಯ್ಯನ ತೋಟದ ಬಳಿರುವ ಸುಮಾರು 25 ಮನೆಯವರು ಸುಮಾರು 5 ವರ್ಷಗಳಿಂದು ನಿರಂತರ ಜ್ಯೋತಿ ವಿದ್ಯತ್ ಸೌಲಭ್ಯದಿಂದ ವಂಚಿತರಾಗಿದ್ದಾರು. ಜನಧ್ವನಿ ಮೀಡಿಯಾ ಐದು ವರ್ಷಗಳಿಂದ ನಿಂತಲ್ಲೇ ನಿಂತಿದ್ದು, ಪ್ರಗತಿ ಕಾಣದೆ ಗ್ರಾಮೀಣ ಜನರು ನಿರಂತರ ಜ್ಯೋತಿಯಿಂದ ವಂಚನೆಯಾಗಿದ್ದಾರೆ.
. ಹೆಸರಿಗಷ್ಟೇ ನಿರಂತರ ಜ್ಯೋತಿ ಐದು ವರ್ಷಗಳಿಂದ ಕರೆಂಟೇ ಇಲ್ಲ!
ನಿರಂತರ ಜ್ಯೋತಿ ಯೋಜನೆಯಡಿ ಕುಡಿಯುವ ನೀರು ಹಾಗೂ ವಸತಿ ಮನೆಗಳಿಗೆ ಗ್ರಾಮೀಣ ಭಾಗದ ಜನವಸತಿ ಪ್ರದೇಶದ ಪ್ರತಿ ಹಳ್ಳಿಗಳಿಗೂ ದಿನದ 24 ತಾಸು ವಿದ್ಯುತ್ ಸರಬರಾಜು ಉದ್ದೇಶವಿರುವ ‘ನಿರಂತರ ಜ್ಯೋತಿ’ ಯೋಜನೆಯಿಂದ ವಿದ್ಯುತ್ ಪರಿವರ್ತಕ .ಕಂಬ. ಲೈನ್ ಎಳೆದು ಸುಮಾರು ಐದು ವರ್ಷಗಳು ಕಳೆದರೂ ವಿದ್ಯುತ್ ಸಂಪರ್ಕ ನೀಡದೆ ಇರುವುದರಿಂದ ನಿರಂತರ ಜ್ಯೋತಿ ಯಿಂದ ವಂಚಿತರಾಗಿದ್ದಾರೆ ಎಂದು ವರದಿ ಬೆಳಕು ಚೆಲ್ಲಿದ ಬೆನ್ನಲ್ಲೇ ಬೆಸ್ಕಾಂ ಅಧಿಕಾರಿಗಳು ನಿರಂತರ ಜ್ಯೊತಿ ವಿದ್ಯುತ್ ಸಂಪರ್ಕ ಕಲ್ಲಿಸಿದ್ದಾರೆ ಗ್ರಾಮಸ್ಥರು ಬೆಸ್ಕಾಂ ಇಲಾಖೆ ಹಾಗೂ ಜನಧ್ವನಿ ಮೀಡಿಯಾ ಗೆ ಅಭಿನಂದನೆ ಸಲ್ಲಿಸಿದ್ದಾರೆ. ಗ್ರಾಮಸ್ಥರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page