ಐಸಿಎಆರ್‍ನಿಂದ ಮೂರು ದಿನಗಳ ಕೃಷಿ-ಡ್ರೋನ್ ತಂತ್ರಜ್ಞಾನ ಪ್ರಾತ್ಯಕ್ಷಿಕೆ ಕಾರ್ಯಕ್ರಮ

by | 29/02/24 | ಕೃಷಿ

ಬಳ್ಳಾರಿ,ಫೆ.29
ಬಳ್ಳಾರಿಯ ಐಸಿಎಆರ್-ಭಾರತೀಯ ಮಣ್ಣು ಮತ್ತು ನೀರು ಸಂರಕ್ಷಣೆ ಸಂಶೋಧನಾ ಕೇಂದ್ರ ವತಿಯಿಂದ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಸೋಮಲಾಪುರ ಗ್ರಾಮ, ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಮಸಾಗರ ಗ್ರಾಮ ಮತ್ತು ಬಳ್ಳಾರಿ ತಾಲ್ಲೂಕಿನ ಬೆಳಗಲ್ ತಾಂಡಾ ಗ್ರಾಮದಲ್ಲಿ (ಫೆ.26 ರಿಂದ 28 ರವರೆಗೆ) ಮೂರು ದಿನಗಳ ಕೃಷಿ-ಡ್ರೋನ್ ತಂತ್ರಜ್ಞಾನ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಮೊದಲಿಗೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಸೋಮಲಾಪುರ ಗ್ರಾಮದ 20 ಎಕರೆ ಪ್ರದೇಶದಲ್ಲಿ ಬೆಳೆದಿರುವ ತೆಂಗು ಮತ್ತು ಮಾವು ಬೆಳೆಗಳಿಗೆ ಡ್ರೋನ್ ಪ್ರಾತ್ಯಕ್ಷಿಕ ಸಿಂಪಡಣೆಯನ್ನು ಮಾಡಲಾಯಿತು. ಮಹೋಗಾನಿ, ರೆಡ್-ಸ್ಯಾಂಡರ್ಸ್ ಮತ್ತು ಕ್ಯಾಸುರಿನಾ ಮರಗಳನ್ನು ಸಹ ಆ ಪ್ರದೇಶದಲ್ಲಿ ಬೆಳೆಯಲಾಗಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕರಡಿಹಳ್ಳಿಯಲ್ಲಿ 5 ಎಕರೆ ಶೇಂಗಾ ಬೆಳೆಗೆ ಸಿಂಪಡಣೆಯನ್ನು ಮಾಡಲಾಯಿತು.
ಬಳಿಕ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಮಸಾಗರ ಗ್ರಾಮದಲ್ಲಿ 22 ಎಕರೆ ಶೇಂಗಾ ಬೆಳೆಗೆ ಹಾಗೂ 3 ಎಕರೆ ಮೆಕ್ಕೆಜೋಳದ ಬೆಳೆಗೆ ಪ್ರಾತ್ಯಕ್ಷಿಕ ಸಿಂಪಡಣೆಯನ್ನು ಮಾಡಲಾಯಿತು. ನಂತರದಲ್ಲಿ ಬಳ್ಳಾರಿ ತಾಲ್ಲೂಕಿನ ಬೆಳಗಲ್ ತಾಂಡಾ ಗ್ರಾಮದಲ್ಲಿ 6 ಎಕರೆ ಶೇಂಗಾ ಬೆಳೆಗೆ ಮತ್ತು 4 ಎಕರೆ ಕರಿಬೇವಿನ ಬೆಳೆಗೆ ಪ್ರಾತ್ಯಕ್ಷಿಕ ಸಿಂಪಡಣೆಯನ್ನು ಮಾಡಲಾಯಿತು.
ಕಾರ್ಯಕ್ರಮದಲ್ಲಿ ಬಳ್ಳಾರಿಯ ಐಸಿಎಆರ್-ಭಾರತೀಯ ಮಣ್ಣು ಮತ್ತು ನೀರು ಸಂರಕ್ಷಣೆ, ಸಂಶೋಧನಾ ಕೇಂದ್ರದ ಮುಖ್ಯಸ್ಥರಾದ ಡಾ.ಬಿ.ಕೃಷ್ಣ ರಾವ್ ಮಾತನಾಡಿ, ಕೃಷಿ-ಡ್ರೋನ್ ಸಿಂಪಡಣೆಯು ಬೆಳೆಗಳಿಗೆ ರಾಸಾಯನಿಕಗಳನ್ನು ಸಿಂಪಡಿಸಲು ಬೇಕಾಗುವ ಕಾರ್ಮಿಕರನ್ನು ಕಡಿಮೆ ಮಾಡುತ್ತದೆ. ಕೇಂದ್ರೀಕೃತ ರಾಸಾಯನಿಕವನ್ನು ನಿಖರವಾಗಿ ಸಿಂಪಡಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರೈತರು ಹೆಚ್ಚಿನ ಪ್ರದೇಶದಲ್ಲಿ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕೆಂದು ಒತ್ತಾಯಿಸಿದರು.
ಈ ಹಳ್ಳಿಗಳಲ್ಲಿ, ಡ್ರೋನ್ ಬಾಡಿಗೆಗೆ ಪಡೆದು, ಶೇಂಗಾ ಬೆಳೆಗೆ ಸೂಕ್ಷ್ಮ ಪೆÇೀಷಕಾಂಶಗಳನ್ನು ಹೆಚ್ಚಿನ ಪ್ರದೇಶಗಳಲ್ಲಿ ಸಿಂಪಡಿಸಲು ಪ್ರೇರೇಪಿತರಾಗಿದ್ದಾರೆ. ಭಾಗವಹಿಸಿದ ಅನೇಕ ರೈತರು ಡ್ರೋನ್‍ನ ಬೆಲೆಯನ್ನು ಕೇಳಿದರು ಮತ್ತು ಅವರಲ್ಲಿ ಕೆಲವರು ಮುಂಬರುವ ವರ್ಷಗಳಲ್ಲಿ ಡ್ರೋನ್ ಖರೀದಿಸಲು ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಸೋಮಲಾಪುರ, ಕರಡಿಹಳ್ಳಿ, ರಾಮಸಾಗರ, ರಾಂಪುರ, ಬೆಳಗಲ್ ತಾಂಡಾ, ಚೆಳ್ಳಗುರ್ಕಿ, ಚಾಗನೂರು ಗ್ರಾಮಗಳ ಸುಮಾರು ಎಪ್ಪತ್ನಾಲ್ಕು ರೈತರು ಭಾಗವಹಿಸಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page