ಒಂದೇ ಗ್ರಾಮ ಪಂಚಾಯತಿಗೆ ಇಬ್ಬರು ಪಿಡಿಒ; ಹಾಜರಾತಿಗೆ ಇಬ್ಬರು ಸಹಿ.

by | 04/02/24 | ತನಿಖಾ ವರದಿ


ಚಳ್ಳಕೆರೆ ಫೆ.4 ಗ್ರಾಮ ಪಂಚಾಯಿತಿ ಮೂಲ ಪಿಡಿಒಗೆ ಸದಸ್ಯರು ವಿರೋಧ ಮಾಡುವುದರಿಂದ ಪ್ರಭಾರ ಪಿಡಿಒ ಕರ್ತವ್ಯ ಬಿಡದೆ ಇರುವುದರಿಂದ ಇಬ್ಬರು ಪಿಡಿಒಗಳು ಹಾಜರಾತಿಗೆ ಸಹಿ ಹಾಕಲಾಗುತ್ತಿದೆ. ಇದು ಜಿಲ್ಲಾಹಾಗೂ ತಾಲೂಕು ಮಟ್ಟದ ಅಧಿಕಾರಿಗಳಲ್ಲಿ ಇಂತಹ ಪ್ರಕರಗಳನ್ನು ನೋಡಿದ್ದೇವೆ ಕೇಳಿದ್ದೇವೆ ಈಗ ಗ್ರಾಮಪಂಚಾಯಿತಿಗೂ ಹಬ್ಬಿರುವುದು ವಿಪರ್ಯಾಸವಾಗಿದೆ. ಹೌದು ಇದು ಚಳ್ಳಕೆರೆ ತಾಲೂಕಿನ ಆಂದ್ರಗಡಿಭಾಗಕ್ಕೆ ಹೊಂದಿಕೊಂಡ ಸಿದ್ದೇಶ್ವರನ ದುರ್ಗ ಗ್ರಾಮಪಂಚಾಯಿತಿ ಪಿ.ಡಿ.ಒ ಮಾಲತೇಶ್ ಮೂಲ ಸ್ಥಾನವಾಗಿದ್ದು ಕರ್ತವ್ಯಕ್ಕೆ ಹಾಜರಿಯಾಗುವಂತೆ ಪಿಡಿಒ ಮಾಲತೇಶ್ ಗೆ ಆದೇಶ ನೀಡಲಾಗಿದೆ ಎನ್ನಲಾಗಿದೆ. ಗೌರಸಮುದ್ರ ಗ್ರಾಪಂ ಪಿ ಡಿ ಒ ಹನುಮಂತರಾಗೆ ಹೆಚ್ಚುವರಿಯಾಗಿ ಸಿದ್ದೇಶ್ವರನದುರ್ಗ ಗ್ರಾಪಂ ನೀಡಲಾಗಿತ್ತು .ಈಗ ಮೂಲ ಪಿಡಿಒ ಮಾಲತೇಶ್ ಕರ್ತವ್ಯಕ್ಕೆ ಹಾಜರಿಯಾದರೂ ಚಾರ್ಜ್ ನೀಡದೆ ಇರುವುದರಿಂದ ಗ್ರಾಪಂ ಕಚೇರುಗೆ ಹಾಜರಿಯಾಗಿ ಸಿಬ್ಬಂದಿ ಹಾಜರಾತಿ ಪುಸ್ತಕಕ್ಕೆ ಸಹಿಹಾಕಿ ಕಚೇರಿಯಲ್ಲಿ ಕುಳಿತು ಕೊಂಡು ಮರಳಿ ಬರುತ್ತಾರೆ ಎನ್ನಲಾಗಿದೆ.
ಮೂಲ ಪಿಡಿಒ ಮಾಲತೇಶ್ ಇವರು ಸದಸ್ಯರಿಗೆ ಹೊಂದಾಣಿಕೆ ಹಾಗೂ ಸ್ಪಂದಿಸುತ್ತಿಲ್ಲ ಎಂಬ ಕಾರಣ ಸದಸ್ಯರು ಬೇಡ ಎನ್ನಲಾಗಿದೆ ಮೂಲ ಸ್ಥಾನ‌ ಸಿದ್ದೇಶ್ವರನದುರ್ಗ ವಾಗಿರುವುದರಿಂದ ಮೂಲ‌ಸ್ಥಾನಕ್ಕೆ ಕರ್ತವ್ಯಕ್ಕೆ ಹಾಜರಾಗುವಂತೆ ಮೇಲಾಧಿಕಾರಿಗಳ ಆದೇಶದ ಮೇರೆಗೆ ಗ್ರಾಪಂ ಕಚೇರಿಗೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಕರ್ತವ್ಯಕ್ಕೆ ಹಾಜರಿಯಾಗಿ ಸುಮಾರು 20 ದಿನ ಕಳೆದರೂ ಪ್ರಭಾರ ಪಿಡಿಒ ಹ‌ನುಮಂತರಾಜ್ ಚಾರ್ಜು ಕೊಡದ ಕಾರಣ ಇಬ್ಬರು ಪಿಡಿಒಗಳು ಕರ್ತವ್ಯ ನಿರ್ವಹಿಸುತ್ತಿದ್ದು ಸಿಬ್ಬಂದಿಗಳ ಹಾಜರಾತಿ ಪುಸ್ತಕದಲ್ಲಿ ಸಹಿಹಾಕುತ್ತಿದ್ದಾರೆ ಎನ್ನಲಾಗಿದೆ. ಮೂಲ ಪಿಡಿಒ ಮಾಲತೇಶ್ ಲೆಕ್ಕಕ್ಕುಂಟು ಕರ್ತವ್ಯಕ್ಕಿಲ್ಲ ಎಂಬಂತಾಗಿದೆ. *ಹಳ್ಳಿ ರಾಜಕೀಯಕ್ಕೆ ಪಿಡಿಒಗಳು ಮೌನ*
ಬಹತೇಕ ಗ್ರಾಮಪಂಚಾಯಿಗಳಲ್ಲಿ ಪಿಡಿಒ ಬೇಡ. ಬೇಕು ಎಂಬ ಸದಸ್ಯರ ಬಣಗಳಿಗೆ ಸಿಲುಕಿ ಒತ್ತಡದಲ್ಲಿ ಕರ್ತವ್ಯ ನಿರ್ವಹಿಸಿದರೆ ಇನ್ನು ಕೆಲವು ಪಿಡಿಗಳಿಗೆ ಸ್ಥಳ ತೋರಿಸದೇ ಇರುವುದು ಹಾಗೂ ಕಾರ್ಯದರ್ಶಿಗಳಿಗೆ ಎರಡು ಪಂಚಾಯಿಗಳಿಗೆ ಪಿಡಿಒ ಸ್ಥಾನ ನೀಡಲಾಗಿದೆ ಮೂಲ ಪಿಡಿಒಗಳಿಗೆ ಸ್ಥಾನ ಸಿಗದೆ ತಾಲೂಕು ಪಂಚಾಯತ್ ಕಚೇರಿಗೆ ಅಲೆದಾಡುತ್ತಿರುವ ದೃಶ್ಯ ಕಾಣ ಬಹುದು. ಪ್ರಮುಖವಾಗಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿಗಳಲ್ಲಿ ನಡೆಯುತ್ತಿರುವ ಅಕ್ರಮಗಳು, 15 ನೇ ಹಣಕಾಸು.ವರ್ಗ-1 ಪ್ರಕೃತಿ ವಿಕೋಪ ಯೋಜನೆ. ಸೇರಿದಂತೆ ಕಾನೂನು ಬಾಹಿರ ಕೆಲಸ ನಿರ್ವಹಿಸಲು ಜನಪ್ರತಿನಿಧಿಗಳಿಂದ ಒತ್ತಡ ಮತ್ತು ನಿಗಧಿತ ಕಪ್ಪಕಾಣಿಕೆಗಳಿಗಾಗಿ ನಡೆಸುತ್ತಿರುವ ಸಭೆಗಳಿಂದಾಗಿ ಪಿ.ಡಿ.ಓ ಗಳು ಬೇಸತ್ತಿದ್ದಾರೆ.

ಪಿ.ಡಿ.ಓ ಗಳು ನೇಮಕಾತಿಯಾದ ಮೇಲೆ ಅಭಿವೃದ್ದಿ ಕುಂಠಿತವಾಗಿದೆ ಎಂದು ಅರೋಪಿಸುವ ಉನ್ನತ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ವ್ಯವಸ್ಥೆಯಲ್ಲಿರುವ ಭ್ರಷ್ಟಾಚಾರದ ಜೊತೆಗೆ ಹೊಂದಿಕೊಂಡು ಹೋಗದಿದ್ದರೆ ಪಿ ಡಿ ಒ ಬೇಡ ಸರಿಯಿಲ್ಲ. ಎಂದು ತಪ್ಪು ಮಾಡಿಸಿ ಮೇಲಾಧಿಕಾರಿಗಳಿಗೆ ದೂರು ನೀಡಿ ಅಮಾನತು ಮಾಡಿಸುತ್ತಾರೆ .
ಕಮೀಷನ್ ವ್ಯವಹಾರ, ತುಂಡು ಗುತ್ತಿಗೆ ಕಾಮಗಾರಿಗಳನ್ನು ಮತ್ತು ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿಗಳನ್ನು ಕಾನೂನು ಬಾಹಿರವಾಗಿ ಜನಪ್ರತಿನಿಧಿಗಳು ನಿರ್ವಹಿಸುತ್ತಿರುವುದು ಮತ್ತು ಗ್ರಾಮ ಠಾಣಾ ಅಸ್ತಿಗಳ ಖಾತೆ ವಿಚಾರವಾಗಿ ಕಾನೂನಿನಲ್ಲಿರುವ ಗೂಂದಲಗಳು ಭ್ರಷ್ಟಚಾರದ ಮೂಲಗಳಾಗಿದ್ದು, ಈ ವಿಚಾರದಲ್ಲಿ ಯಾರ ಮೇಲು ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದು ಅಸಾಧ್ಯವಾಗಿದೆ. ಪ್ರಾಮಾಣಿಕ ಮತ್ತು ದಕ್ಷ ಅಧಿಕಾರಿಗಳನ್ನು ದೇವರೆ ಕಾಪಾಡಬೇಕಾಗಿದೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page