ಚಳ್ಳಕೆರೆ: ನಗರದ ಶಿಕ್ಷಕರ ಸಂಘ ಬೆಸ್ಕಾಂ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಎನ್ಪಿಎಸ್ ನೌಕರರು ಓಪಿಎಸ್ ಹಕ್ಕೊತ್ತಾಯದ ಚಿಂತನ ಮಂಥನ ಸಭೆಯನ್ನು ಹಮ್ಮಿಕೊಂಡಿದ್ದರು ಇದರ ಅಂಗವಾಗಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಓಪಿಎಸ್ ಜಾರಿಗೊಳಿಸುವಂತೆ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಸರ್ಕಾರವನ್ನು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಎನ್ಪಿಎಸ್ ನೌಕರ ಸಂಘದ ತಾಲೂಕು ಅಧ್ಯಕ್ಷ ಹೆಚ್ ಓ ರಾಜಣ್ಣ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಚುನಾವಣಾ ಪೂರ್ವದಲ್ಲಿ ಎಲ್ಲಾ ಇಲಾಖೆಗಳ ಎನ್ಪಿಎಸ್ ನೌಕರರನ್ನು ಓಪಿಎಸ್ ಅಡಿಯಲ್ಲಿ ತಂದು ನ್ಯಾಯ ದೊರಕಿಸಿಕೊಡುವ ಭರವಸೆ ನೀಡಿ ಮತ ಗಿಟ್ಟಿಸಿಕೊಂಡು ಅಧಿಕಾರಕ್ಕೆ ಬಂದಿದೆ ಅಧಿಕಾರಕ್ಕೆ ಬಂದು 8 ತಿಂಗಳು ಕಳೆದರು ಇದುವರೆಗೂ ಆ ವಿಚಾರವಾಗಿ ಯಾವೊಬ್ಬ ಸಚಿವರು ಶಾಸಕರು ಮಾತನಾಡುತ್ತಿಲ್ಲ ಇದರಿಂದಾಗಿ ನೌಕರರಿಗೆ ಅತಂತ್ರ ಸ್ಥಿತಿ ಉಂಟಾಗಿದ್ದು ತಮ್ಮ ಜೀವನ ನಿರ್ವಹಣೆ ಕಷ್ಟಕರವಾಗುತ್ತಿದೆ ಸರ್ಕಾರ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ನುಡಿದಂತೆ ನಡೆದ ಸರ್ಕಾರ ಎಂಬ ಖ್ಯಾತಿ ಪಡೆದಿದೆ ಹಾಗಾಗಿ ನಮ್ಮ ನೌಕರರಿಗೂ ಸಹ ಓ ಪಿ ಎಸ್ ಜಾರಿಗೊಳಿಸಿ ಕೊಟ್ಟ ಮಾತನ್ನು ಮುಖ್ಯಮಂತ್ರಿಗಳು ಉಳಿಸಿಕೊಳ್ಳುತ್ತಾರೆ ಎಂಬ ಭರವಸೆ ಇದೆ ಈಗಾಗಲೇ ಒಪಿಎಸ್ ಜಾರಿ ಗೊಳಿಸಲು ಸರ್ಕಾರ ಒಂದು ಹಂತದವರೆಗೂ ಮುಂದೆ ಹೋಗಿದ್ದು ಶೀಘ್ರದಲ್ಲಿ ಅಂತಿಮ ನಿರ್ಧಾರ ಕೈಗೊಂಡು ಎಲ್ಲ ನೌಕರರ ಹಿತವನ್ನು ಕಾಪಾಡುತ್ತದೆ ಎಂಬ ಭರವಸೆ ಇದೆ ಕೂಡಲೇ ಸರ್ಕಾರ ತಮ್ಮ ನಿಲುವನ್ನು ತಿಳಿಸಬೇಕು ಇಲ್ಲದಿದ್ದರೆ ನೌಕರರು ಪ್ರತಿಭಟನೆ ಹಾದಿ ತುಳಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಸರ್ಕಾರಿ ಅನುದಾನಿತ ಶಾಲೆಗಳ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸುರೇಶ್ ಮಹಾಂತಣ್ಣ ಬೆಸ್ಕಾಂ ರುದ್ರಮನಿ ಸುರೇಶ್ ಬಾಬು ಪ್ರಸನ್ನ ಸಿಟಿ ವೀರೇಶ್ ಜಿಟಿ ವೀರಭದ್ರ ಸ್ವಾಮಿ ಈರಣ್ಣ ರಾಮೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.
0 Comments