ಕಂದಾಯ ಇಲಾಖೆಯಲ್ಲಿ ಹಲವು ಹುದ್ದೆಗಳು ಖಾಲಿ- ಸಿಬ್ಬಂದಿಗಳು.ಗ್ರಾಮಲೆಕ್ಕಾಧಿಕಾರಿಗಳು ಹೈರಾಣು.

by | 21/12/23 | ಜನಧ್ವನಿ


ಚಳ್ಳಕೆರೆ ಜನಧ್ವನಿ ವಾರ್ತೆ ಡಿ.21 ಸರಕಾರಿ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ಇಲಾಖೆಯ ಅಧಿಕಾರಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸಬೇಕೆಂದು ಸೂಚನೆ ನೀಡುವ ಸರಕಾರ ಅದಕ್ಕೆ ಪೂರಕವಾಗಿ ಸಿಬ್ಬಂದಿಗಳನ್ನು ನೇಮಕ ಮಾಡಲು ವಿಫಲವಾಗಿದ್ದು ಕಂದಾಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಗ್ರಾಮಲೆಕ್ಕಾಧಿಕಾರಿಗಳು ಮಾನಸಿಕ ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುವ ಪರಿಸ್ಥಿತಿ ಅನಿವಾರ್ಯವಾಗಿದೆ.
ಹೌದು ಇದು ಚಳ್ಳಕೆರೆ ತಾಲೂಕು ಅತಿ ಹೆಚ್ಚು ಭೌಗೋಳಿಕ ಪ್ರದೇಶ ಹಾಗೂ ಅತಿ ಹೆಚ್ಚು ದೊಡ್ಡ ತಾಲೂಕು ಎಂಬ ಹೆಗ್ಗಳಿಕೆಗೆ ಪಾತ್ರವಾಗಿ ನಾಲ್ಕು ಹೋಬಳಿ ಕೇಂದ್ರಗಳನ್ನು ಹೊಂದಿದ್ದು ಕ್ಷೇತ್ರ ವಿಂಗಡಯ ನಂತರ ತಾಲೂಕಿನಲ್ಲಿ ಇಬ್ಬರು ಶಾಸಕರು ಆಡಳಿತ ನಡೆಸುತ್ತಿದ್ದಾರೆ.
ತಾಲೂಕು ಕಚೇರಿಯಲ್ಲಿ 122 ಮಂಜುರಾತಿ ಹುದ್ದೆಗಳಲ್ಲಿ 95 ಹುದ್ದೆಗಳು ಕರ್ತವ್ಯ ನಿರ್ವಹಿಸಿದರೆ, 27 ಹುದ್ದೆಗಳು ಖಾಲಿಯಾಗಿದ್ದು ಒಬ್ಬ ಒಬ್ಬ ಸಿಬ್ಬಂದಿ ಎರಡು ಮೂರು ಶಾಖೆಗಳನ್ನು ಒತ್ತಡದ ನಡುವೆ ಕರ್ತವ್ಯ ನಿರ್ವಹಿಸುವಂತಾಗಿದೆ.
ತಾಲೂಕಿನ 67 ಫಿರ್ಕಾಗಳಿದ್ದು ತಾಲಾ ಒಬ್ಬರಂತೆ 67 ಗ್ರಾಮಲೆಕ್ಕಾಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕಿದೆ ಆದರೆ ನಿವೃತ್ತಿ, ವರ್ಗಾಣೆ ನಂತರ 17 ಗ್ರಾಮಲೆಕ್ಕಾಧಿಕಾರಿಗಳು ಹುದ್ದೆಗಳು ಖಾಲಿ ಇದ್ದು ಒಬ್ಬ ಗ್ರಾಮಲೆಕ್ಕಾಧಿಕಾರಿ ಎರಡರಿಂದ ಮೂರು ಫಿರ್ಕಾಗಳ ಹೊಣೆ ಹೊತ್ತು ಒತ್ತಡಗಳ ನಡುವೆ ರ್ಕವ್ಯ ನಿರ್ವಹಿಸುತ್ತಿದ್ದ ಸರಕಾರದ ಯೋಜನೆಗಳನ್ನು ಜರಿಗೆ ತಲುಪಿಸಲುವಲ್ಲಿ ಸರಕಾರದ ಹಾಗೂ ಮೇಲಾಧಿಕಾರಿಗಳ ಒತ್ತಡಕ್ಕೆ ಮಣಿದು ಕಂದಾಯ ಇಲಾಖೆಯಲ್ಲಿ ಹುಸಿರು ಗಟ್ಟಿಸುವ ವಾತಾವರಣದಲ್ಲಿ ಕರ್ತವ್ಯ ನಿರ್ವಹಿಸುವುದು ಅನಿವಾರ್ಯವಾಗಿದೆ.
ನಗರದ ತಾಲೂಕು ಕಚೇರಿಯ ಗ್ರೇಡ್-2 ತಹಶೀಲ್ದಾರ್ ಸಂಧ್ಯ ಹೆರಿಗೆ ರಜೆ ಮೇಲೆ ಹೋಗಿ ನಂತರ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಸಹಾಯಕ ನಿರ್ಧೆಶಕರಾಗಿ ಬಳ್ಳಾರಿಗೆ ವರ್ಗಾವಣೆಯಾಗಿದ್ದಾರೆ ಸುಮಾರು ಒಂದು ವರ್ಷದಿಂದ ಖಾಲಿ ಇರುವ ಗ್ರೇಡ್ -2 ತಹಶೀಲ್ದಾರ್ ಹುದ್ದೆ ಖಾಲಿ ಇರುವುದರಿಂದ ಆಧಾಯ ಜಾತಿ, ಪ್ರಮಾಣ ಪತ್ರ ಸಾಮಾಜಿಕ ಭದ್ರಾತ ಪಿಂಚಿಣಿ, ಸಕಾಲ , ಪಡಶಾಲೆ, ರೈತರ ಜಮೀನಿನ ಭೂ ದಾಖಲೆ (ಅಭಿಲೇಖಾಯ) ಪ್ರಕೃತಿ ವಿಕೋಪ,ಸೇರಿದಂತೆ ಗ್ರೇಡ್-2 ತಹಶೀಲ್ದಾರ್ ಹೊಣೆಯನ್ನು ತಹಶೀಲ್ದಾರ್ ಹೆಗಲ ಮೇಲೆ ಬಿದ್ದಿರುವುದರಿಂದ ಕಚೆರಿ ಬಿಟ್ಟು ಪೀಲ್ಡ್ ಹೋಗಲು ಸಾಧ್ಯವಾಗದಂತಾಗಿದೆ.
ಪ್ರಕೃತಿ ವಿಕೋಪ ಬೆಳೆ ನಷ್ಟ, ಮನೆಗಳು ಬಿದ್ದಾಗ, ಪವತಿ ಖಾತಿ, ಜಾತಿ ಆಧಾಯ ಪ್ರಮಾಣ ಪತ್ರ, ಪಿಂಚಣಿ ಯೋಜನೆ, ಪಹಣಿ ಚುನಾವಣೆ ಸಂದರ್ಭದಲ್ಲಿ ಮತದಾರ ಪಟ್ಟಿ ಪರಿಷ್ಕರಣೆ, ಸೇರಿಂದ ಸರಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು ಇರುವ ಸಿಬ್ಬಂದಿ ಹಾಗೂ ಗ್ರಾಮಲೆಕ್ಕಾಧಿಕಾರಿಗಳು ಸರಕಾರದ ಆದೇಶಗಳ ಅನ್ವಯ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಕರ್ತವ್ಯದ ಒತ್ತಡಗಳಿಗೆ ಸಿಲುಕಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ ಚುನಾವಣೆಯ ಶಾಖೆಯ ಪ್ರ.ದ.ಸಹಾಯಕೊರೊಬ್ಬರು ಕಚೇರಿಯಲ್ಲಿನ ಕೆಲಸದ ಒತ್ತಡ ಹಾಗೂ ಅಪಮಾನ ತಾಳಲಾರದೆ ಡೆತ್ ನೋಟ್ ಬರೆದು ನೇಣಿಗೆ ಶರಣಾಗಿದ್ದಾನೆ.
ಖಾಲಿ ಇರುವ ಫಿರ್ಕಾಗಳು
ಚಳ್ಳಕೆರೆ ತಾಲೂಕು ಕಚೇರಿಯಲ್ಲಿ ಗ್ರೇಡ್-2 ತಹಶೀಲ್ದಾರ್, ರಾಜಸ್ವ ನಿರೀಕ್ಷರು-1. ಪ್ರಥಮ ದರ್ಜೆ ಸಹಾಯಕ 1, ದ್ವಿತೀಯ ದರ್ಜೆ ಸಹಾಯಕ 2, ಬೆರಳಚ್ಚುಗಾರ 1,ವಾಹನ ಚಾಲಕ 1, ಡಿ ಗ್ರೂಪ್ ನೌರರು-2, ಆರ್ ಆರ್ ಅಡೆಂಡರ್ 1, ಗ್ರಾಮ ಆಡಳಿತ ಅಧಿಕಾರಿ 17 ಒಟ್ಟು 122 ಮಂಜುರಾತಿ ಹುದೆಗಳಲ್ಲಿ 27 ಹುದ್ದೆಗಳು ಖಾಲಿ ಇವೆ.
ಗ್ರಾಮಲೆಕ್ಕಾಧಿಕಾರಿಗಳ ಹುದ್ದೆ ಖಾಲಿ.
ನಾಡ ಕಚೇರಿ ತಳಕು, ಭೂಮಿ ಕೇಂದ್ರ, ಆರ್.ಆರ್. ಗ್ರಾಮಲೆಕ್ಕಾಧಿಕಾರಿ, ಗೊರ‍್ಲಕಟ್ಟೆ, ಟಿ.ಎನ್.ಕೋಟೆ, ಬೆಳೆಗೆರೆ, ಗಂಜಿಗುಂಟೆ, ಕರೀಕೆರೆ, ಕೊರ‍್ಲಕುಂಟೆ,ದೊಡ್ಡಬೀರನಹಳ್ಳಿ, ನೇರಲಗುಂಟೆ, ದೊಣೆಹಳ್ಳಿ, ಅಬ್ಬೇನಹಳ್ಳಿ, ನೆಲಗೇತನಹಟ್ಟಿ, ಚನ್ನಮ್ಮನಾಗತಿಹಳ್ಳಿ, ಗೋಪನಹಳ್ಳಿ ಹೀಗೆ 17 ಗ್ರಾಮಲೆಕ್ಕಾಧಿಕಾರಿಗಳ ಹುದ್ದೆಗಳು ಖಾಲಿಯಾಗಿರುವುದು ಬೆಳೆಕಿಗೆ ಬಂದಿದೆ.
ಗ್ರಾಮೀಣ ಭಾಗದ ರೈತರು ಹಲವು ಸೌಲಭ್ಯಗಳನ್ನು ಪಡೆಯಲು ತಾಲೂಕು ಕಚೇರಿಗೆದ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಭೂಮಿ ಕೇಂದ್ರದಲ್ಲಿ ರೈತರು ಪಹಣಿ, ಮ್ಯುಟೇಷನ್ ಸೇರಿದಂತೆ ಹಲವು ಸೌಲಭ್ಯಗಳು ಸಕಾಲಕ್ಕೆ ದೊರೆಯದೆ ಅಲೆದಾಡುವ ಪರಿಸ್ಥತಿ ನಿರ್ಮಾಣವಾಗಿದೆ. ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಗಳನ್ನು ಕಂದಾಯ ಇಲಾಖೆಯಲ್ಲಿ ರೈತರಿಗೆ ಸುಲಭವಾಗಿ ಪಡೆಯಲು ಹಾಗೂ ಗ್ರಾಮಲೆಕ್ಕಾಧಿಗಳು ರೈತರಿಗೆ ತಲುಪಿಸಲು ವಿಳಂಭವಾಗುತ್ತಿದ್ದು ಈಗಲಾದರು ಸರಕಾರ ಜನಸಂಖ್ಯೆಗನುಗುಣವಾಗಿ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದೇ ಕಾದು ನೋಡ ಬೇಕಿದೆ.
.

Latest News >>

ಕರ್ನಾಟಕ ಭೀಮಸೇನೆಯ ರಾಜ್ಯಾಧ್ಯಕ್ಷ ಶಂಕರ್ ರಾಮ ಲಿಂಗಯ್ಯನವರ ಆದೇಶದ ಮೇರೆಗೆ ಜಿಲ್ಲಾಪದಾಧಿಕಾರಿಗಳ ಹಾಗೂ ಕಾರ್ಯಕಾರಣಿ ಸಭೆಯ ಉದ್ಘಾಟನೆ ಕಾರ್ಯಕ್ರಮ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಕರ್ನಾಟಕ ಭೀಮ ಸೇನೆ ಸಂಘಟನೆಯನ್ನು ಬಲಪಡಿಸುವ ಮೂಲಕ ಬಡವರಿಗೆ, ನೊಂದವರಿಗೆ, ಶೋಷಿತರಿಗೆ, ಸಮಾಜದ...

ಚಿತ್ರದುರ್ಗ ನಗರದ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಜಿಲ್ಲಾ ನ್ಯಾಯಾಧೀಶರ ಅನಿರೀಕ್ಷಿತ ಭೇಟಿ ಅಂಗನವಾಡಿ ಕೇಂದ್ರದ ಕಟ್ಟಡ, ನಿರ್ವಹಣೆ ಬಗ್ಗೆ ತೀವ್ರ ಅಸಮಾಧಾನ

ಚಿತ್ರದುರ್ಗ ಜುಲೈ24: ಚಿತ್ರದುರ್ಗ ನಗರ ವ್ಯಾಪ್ತಿಯ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೊಣ...

ಕೆಎಂಆರ್‌ಸಿ ನಿಧಿಯಡಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಗಣಿ ಪ್ರದೇಶದಲ್ಲಿ ಕ್ಷಯರೋಗ ಪತ್ತೆ ಆಂದೋಲನಕ್ಕೆ ಸೂಚನೆ -ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ ಜುಲೈ23: ಕೆಎಂಇಆರ್‌ಸಿ(ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ) ನಿಧಿಯಡಿ ಜಿಲ್ಲೆಯ ಗಣಿ ಬಾಧಿತ ಪ್ರದೇಶದಲ್ಲಿನ ಆರೋಗ್ಯ...

ರೈತರು ಕೃಷಿಯನ್ನ ವ್ಯವಹಾರಿಕವಾಗಿ ಮಾಡಿ ಹೆಚ್ಚಿನ ಆದಾಯ,ಲಾಭಗಳಿಸುವ ನಿಟ್ಟಿನಲ್ಲಿ ಮುನ್ನಡೆಯಬೇಕು ಆಡಳಿತ ಮಂಡಳಿ ಸದಸ್ಯರಾದ ಡಾಪಿ.ಕೆ.ಬಸವರಾಜ್

ಹಿರಿಯೂರು: ರೈತರು ಕೃಷಿಯನ್ನು ವ್ಯವಹಾರಿಕವಾಗಿ ಮಾಡಿ ಹೆಚ್ಚಿನ ಆದಾಯ ಹಾಗೂ ಲಾಭಗಳಿಸುವ ನಿಟ್ಟಿನಲ್ಲಿ ಮುನ್ನಡೆಯಬೇಕು ಎಂಬುದಾಗಿ ಕೆಳದಿ...

ದಕ್ಷಿಣಕಾಶಿ ಖ್ಯಾತಿಯ ಹಿರಿಯೂರಿನ ಮೂಲಸೌಕರ್ಯ ಅಭಿವೃದ್ಧಿಗೆ ವೇಗವನ್ನು ನೀಡಲು ಸ್ಮಾರ್ಟ್ ಸಿಟಿ ಸ್ಪರ್ಷ ನೀಡಲಾಗುವುದು:ಉಸ್ತುವಾರಿಸಚಿವರಾದ ಡಿ.ಸುಧಾಕರ್

ಹಿರಿಯೂರು: ದಕ್ಷಿಣಕಾಶಿ ಖ್ಯಾತಿಯ ಹಿರಿಯೂರಿನ ಮೂಲ ಸೌಕರ್ಯ ಅಭಿವೃದ್ಧಿಗೆ ವೇಗವನ್ನು ನೀಡುವ ಉದ್ದೇಶದಿಂದ ಸ್ಮಾರ್ಟ್ ಸಿಟಿ ಸ್ಪರ್ಷ...

ಜಿಲ್ಲಾ ಮಟ್ಟದ ಸಮನ್ವಯ ಮತ್ತು ಮೇಲ್ವಿಚಾರಣೆ ಸಮಿತಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ರೈತ ಉತ್ಪಾದಕ ಸಂಸ್ಥೆಗಳ ಪ್ರಮಾಣ ಹೆಚ್ಚಿಸಿ

ಚಿತ್ರದುರ್ಗ ಜುಲೈ.23: ಜಿಲ್ಲೆಯಲ್ಲಿ ರೈತ ಉತ್ಪಾದಕ ಸಂಸ್ಥೆಗಳ ಪ್ರಮಾಣ ಹೆಚ್ಚಳಕ್ಕೆ ವಿವಿಧ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು...

ಜುಲೈ 27 ಕ್ಕೆ ಬಯಲುಸೀಮೆ ಮಲೆನಾಡು ಕರಾವಳಿ ಕುಂಚಿಟಿಗರ ಏಕೀಕರಣ ಪ್ರವಾಸ

ಹಿರಿಯೂರಯ ಜು.22 ದಕ್ಷಿಣ ಭಾರತದಲ್ಲಿ ಕುಂಚಿಟಿಗರ ಏಕೀಕರಣ ಮತ್ತು ಧೃವೀಕರಣ ಹೋರಾಟದ ಮುಂದುವರಿದ ಭಾಗವಾಗಿ ಬಯಲುಸೀಮೆ ಮಲೆನಾಡು ಕರಾವಳಿ...

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ಬಾಲ ಗರ್ಭಿಣಿ ಪ್ರಕರಣ : ಎಂ.ಎಲ್.ಸಿ ಹಾಗೂ ಎಫ್.ಐ.ಆರ್ ಕೈಗೊಳ್ಳಲು ಸೂಚನೆ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ

ಚಿತ್ರದುರ್ಗ ಜು 22: ಆಸ್ಪತ್ರೆಗಳಲ್ಲಿ ಬಾಲ ಗರ್ಭಿಣಿ ಪ್ರಕರಣ ಪತ್ರೆಯಾದ ತಕ್ಷಣವೇ ಎಂ.ಎಲ್.ಸಿ (ಮೆಡಿಕೋ ಲೀಗಲ್ ಕೇಸ್) ಮಾಡಿ ಎಫ್.ಐ.ಆರ್....

ತಾಲ್ಲೂಕಿನ ಹಾಲಮಾದೇನಹಳ್ಳಿಯಲ್ಲಿ ವಿದ್ಯುತ್ಅವಗಡ ದುರಸ್ತಿವೇಳೆ ಲೈನ್ ಮ್ಯಾನ್ ಶ್ರೀಶೈಲಾ ಸ್ಥಿತಿಗಂಭೀರ

ಹಿರಿಯೂರು: ತಾಲ್ಲೂಕಿನ ಹಾಲಮಾದೇನಹಳ್ಳಿಯಲ್ಲಿ ವಿದ್ಯುತ್ ದುರಸ್ತಿವೇಳೆ ವಿದ್ಯುತ್ ಪ್ರವಹಿಸಿ ಬೆಸ್ಕಾಂ ಇಲಾಖೆಯ ಶ್ರೀಶೈಲ ಎನ್ನುವ ಲೈನ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page