ಕಂದಾಯ ಸಚಿವರೇ ರೈತರ ಸಮಸ್ಯೆಗಳಿಗೆ ಸ್ಪಂದಿಸುವರೇ ಇದು ಜನಧ್ವನಿ ಡಿಜಿಟಲ್ ಮೀಡಿಯಾದ ಕಳ ಕಳಿ.

by | 09/10/23 | ಕೃಷಿ, ಬರ ಅಧ್ಯಯನ


ಚಳ್ಳಕೆರೆ ಜನಧ್ವನಿ ವಾರ್ತೆ ಅ.9 ಕಂದಾಯ ಸಚಿವರೇ ನಿಮ್ಮಇಲಾಖೆಯಲ್ಲಿನ ಹತ್ತು ಹಲವು ಸಮಸ್ಯೆಗಳನ್ನೊತ್ತು ಕಂದಾಯ ಇಲಾಖೆ ಕಚೇರಿಗೆ ರೈತರು ವರ್ಷಗಟ್ಟಲೆ ಅಲೆದಾಡಿದರೂ ಸಮಸ್ಯೆಗೆ ಪರಿಹಾರ ಕಾಣದೆ, ಬಡವರು ಕಂಗಾಲಾಗಿದ್ದಾರೆ.
ಚಿತ್ರದುರ್ಗ ಜಿಲ್ಲೆಗೆ ಮಂಗಳವಾರ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಕಂದಾಯ ಸಚಿವರು ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡುವ ಜತೆಗೆ ಪೌತಿ ಖಾತೆ, ಪೋಡಿ ದುರಸ್ತಿ, ಹೊಲಗಳಿಗೆ ಹೋಗುವ ರಸ್ತೆಗಳ ಸಮಸ್ಯೆ ಬಗೆಹರಿಸುವ ಕಡೆ ಗಮನಹರಿಸಬೇಕಿದೆ. ಬಡವರಿಗೆ ಸರ್ಕಾರದಿಂದ ವಿತರಿಸಿದ ಬಗರ್ ಹುಕುಂ ಸಾಗುವಳಿ ಭೂಮಿ ಮಂಜುರಾತಿ ಮಾಡಿ ಸುಮಾರು 50 ವರ್ಷಗಳು ಕಳೆದರೂ ರೈತರ ಹೆಸರಿಗೆ ಪಹಣಿ ಬಂದರೂ ಪೋಡಿ ದುರಸ್ತಿಯಾಗದೆ ಬಹುಮಾಲೀಕತ್ವ ಹೊಂದಿರುವುದರಿಂದ ರೈತರು, ಪ್ರತ್ಯೇಕ ಸರ್ವೇ ನಂಬರ್ ಮತ್ತು ಪಹಣಿ ನೀಡದಿರುವುದು ಬೆಳೆವಿಮೆ, ಬೆಳೆ ಪರಿಹಾರ, ಸೇರಿದಂತೆ ಸರ್ಕಾರದ ಸೌಲಭ್ಯಗಳಿಂದಲೂ ವಂಚಿತರಾಗಿದ್ದಾರೆ.
ಪೌತಿ ಖಾತೆಗಾಗಿ ಹೈರಾಣು. ಸರಕಾರಿ ಸೌಲಭ್ಯಗಳಿಂದ ವಂಚನೆ.
ತಾತ-ಮುತ್ತಾತರಹೆಸರಿಗಿದ್ದು, ಅವರು ಮೃತಪಟ್ಟು ಸುಮಾರು 60 ವರ್ಷಗಳು ಕಳೆದರೂ ಅವರ ಕುಟುಂಬಸ್ಥರ ಹೆಸರಿಗೆ ಪೌತಿ ಖಾತೆಯಾಗಿದೆ. ಆಸ್ತಿ ಹಂಚಿಕೆ ವಿಚಾರದಲ್ಲಿ ಕುಟುಂಬಸ್ಥರು ಹೊಡೆದಾಡಿ, ಕಡಿದಾಡಿಕೊಂಡು ಪೋಲಿಸ್ ಠಾಣೆ ಹಾಗೂ ನ್ಯಾಯಾಲಯದ ಮೊರೆ ಹೋಗಿ ಕುಟುಂಬದಲ್ಲಿ ನಮ್ಮದಿ ಕಳೆದುಕೊಂಡು ಜೀವನ ಸಾಗಿಸುತ್ತಿದ್ದಾರೆ.

ರೈತರ ಜಮೀನುಗಳಿಗೆ ಹೋಗುವ ದಾರಿಯ ಪ್ರಕರಣಗಳು ಕೂಡ ಹೆಚ್ಚಾಗಿ ದಾರಿ ಬಿಡಿಸುವಂತೆ ತಾಲೂಕುಕಚೇರಿ ಅಲೆದಾಡಿ ಕೊನೆಗೆ ನ್ಯಾಯಾಲಯದ ಮೆಟ್ಟಿಲೇರಿರುವ ಉದಾಹರಣೆಗಳು ಸಾಕಷ್ಟಿವೆ. ಸರ್ಕಾರ ಮಂಜೂರಾತಿ ಹಕ್ಕುಪತ್ರ ನೀಡಿರುವದಾಖಲೆ ಪಜೀತಿ ತಾತಾ ಮುತ್ತಾತರ ಹೆಸರಿನಲ್ಲಿರುವ ಜಮೀನು ಕುಟುಂಬಸ್ಥರ ಹೆಸರಿಗೆ ಮಾಡಿಸಿಕೊಳ್ಳಲು ವಂಶವೃಕ್ಷ, ಆಧಾರ್, ಮರಣ ಪ್ರಮಾಣಪತ್ರ ಸೇರಿದಂತೆ ಇತರೆ ದಾಖಲೆ ಕೇಳುತ್ತಿದ್ದು, ಸುಮಾರು 50 ವರ್ಷಗಳ ಹಿಂದೆ ಜನನ- ಮರಣ ಬರೆಸುವುದಾಗಲಿ, ಆಧಾರ್ ನೋಂದಣಿಯಾಗಲಿ ಇರಲಿಲ್ಲ. ಅನಕ್ಷರಸ್ಥರ ಕಾಲವಾಗಿತ್ತು. ಸುಮಾರು 50 ರಿಂದ 80 ವರ್ಷಗಳಿಂದ ಮೃತಪಟ್ಟ ನಮ್ಮ ತಾತ್ತರ ಹೆಸರಿಗಿರುವ ಜಮೀನು ಹೆಸರಿಗೆ ಮಾಡಿಸಿಕೊಳ್ಳಲು ಅಧಿಕಾರಿಗಳು ಕೇಳುವ ದಾಖಲೆಗಳು ಲಭ್ಯವಿಲ್ಲದ ಕಾರಣ ಪವತಿ ಖಾತೆ ಮಾಡಿಸಲು ತಾಲೂಕು ಕಚೇರಿಗೆ
ಅಲೆದರೂ ಯಾವುದೇ ಪ್ರಯೋಜನವಾಗಿಲ್ಲ. ಸರ್ಕಾರಿ ನಿಮಯ ಸಡಿಲಗೊಳಿಸಿ ಷೋಡಿ ದುರಸ್ತಿ, ಪೌತಿ ಖಾತೆ ಆಂದೋಲನ ಮೂಲಕ
ಅಧಿಕಾರಿಗಳು ಗ್ರಾಮ ಮಹಜರ್, ಸ್ಥಳ ಪರಿಶೀಲನೆ ನಡೆಸಿ ದುರಸ್ತಿಗೆ ಪರಿಹಾರ ದೊರಕಿಸುವಂತೆ ರೈತರು ಕಂದಾಯ ಸಚಿವರಲ್ಲಿ ಮನವಿ ಮಾಡಿದ್ದಾರೆ.
ಜಮೀನುಗಳು ರೈತರ ಸ್ವಾಧೀನದಲ್ಲಿರುವ ಭೂಮಿ ಅಳತೆ ಮಾಡಿ ನಕ್ಷೆ ತಯಾರಿಸಿ ಪ್ರತ್ಯೇಕ ಪಹಣಿ ನಂಬರ್ ಕೊಟ್ಟು ಅಧಿಕೃತ ಮಾಡಿಕೊಡಲು ಪೋಡಿ ದುರಸ್ತಿ ಮಾಡಬೇಕು ಎಂದು ರೈತರ ಒತ್ತಾಯ.
ಈಗಲಾದರೂ ಕಂದಾಯ ಸಚಿವರು ರೈತರ ಸಮಸ್ಯೆಗೆ ಸ್ಪಂದಿಸುವರೇ ಕಾದು ನೋಡ ಬೇಕಿದೆ.
.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page