ಕನ್ನಡದ ಕಂಪನ್ನು ವಿಶ್ವಕ್ಕೆ ಸಾರಿದ ವಿಶ್ವಮಾನವ ಕುವೆಂಪು: ಶಾಸಕ ಟಿ ರಘುಮೂರ್ತಿ

by | 29/12/23 | ಸುದ್ದಿ

ಚಳ್ಳಕೆರೆ ಡಿ.29: ಕನ್ನಡ ಭಾಷೆ ಹಾಗೂ ಕನ್ನಡ ನಾಡಿನ ಕಂಪನ್ನು ವಿಶ್ವಕ್ಕೆ ಪಸರಿಸಿದ ವ್ಯಕ್ತಿ ಕುವೆಂಪು ಸಾಹಿತ್ಯ ಕ್ಷೇತ್ರಕ್ಕೆ ಇವರ ಕೊಡುಗೆ ಅಪಾರವಾದದ್ದು ಎಂದು ಶಾಸಕ ಟಿ ರಘುಮೂರ್ತಿ ಅಭಿಪ್ರಾಯ ಪಟ್ಟರು

ರಾಷ್ಟೀಯ ಹಬ್ಬಗಳ ಆಚರಣೆ ಹಾಗೂ ತಾಲ್ಲೂಕು ಆಡಳಿತ ವತಿಯಿಂದ  ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಶ್ವಮಾನವ  ರಾಷ್ಟ್ರ ಕವಿ ಕುವೆಂಪುರವರ 119ನೇ ಜನ್ನ ದಿನಾಚರಣೆ ಕಾರ್ಯಕ್ರಮದಲ್ಲಿ  ಕುವೆಂಪು ರವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮೂಲಕ  ಕಾರ್ಯಕ್ರಮ. ಉದ್ಘಾಟಿಸಿ ಮಾತನಾಡುತ್ತಾ ಕನ್ನಡದ ಸಾಹಿತ್ಯ ಲೋಕಕ್ಕೆ ಹಲವು ಮೊದಲುಗಳನ್ನು ನೀಡಿದ ಕೀರ್ತಿ ಇವರದ್ದು ಮೈಸೂರು ವಿಶ್ವವಿದ್ಯಾಲಯದ ಕುಲಪತಿಗಳಾಗಿ ದಿಕ್ಕನ್ನು ಬದಲಿಸಿ ಹೊಸ ರೂಪ ನೀಡಿದ ಕೀರ್ತಿ ಇವರಿಗೆ ಸಲ್ಲುತ್ತದೆ ಶ್ರೀ ರಾಮಾಯಣ ದರ್ಶನಂ ಎಂಬ ಮಹಾ ಕಾವ್ಯ ರಚಿಸಿ ಮೊದಲ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಹೆಗ್ಗಳಿಕೆ ಇವರದು ಕುವೆಂಪುರವರನ್ನು ಹಲವರು ವಿಶ್ವ ಮಾನವ ಎಂಬ ಹೆಸರಿನಿಂದ ಕರೆದಿದ್ದಾರೆ ಅಲ್ಪಮಾನವನಾಗದಿರು ವಿಶ್ವಮಾನವನಾಗು ಎಂಬ ಸಂದೇಶ ನೀಡಿದಂತ ಮಹಾನ್ ಮಾನವತವಾದಿ ಕುವೆಂಪು ಅವರ ಆದರ್ಶಗಳು ಇಂದಿಗೂ ಪ್ರಸ್ತುತ ಇವರ ಕಾವ್ಯಗಳು ಜಗತ್ತಿಗೆ ದಾರಿದೀಪವಾಗಿವೆ ಎಂದು ಬಣ್ಣಿಸಿದರು.

ಪ್ರಾಸ್ತಾವಿಕವಾಗಿ ಮಾತಾಡಿದ ತಹಶೀಲ್ದಾರ್ ರೆಹಾನ್ ಪಾಷಾ ಕುವೆಂಪುರವರು ಜನರು ತನ್ನ ಜಾತಿಗೆ ಸೀಮಿತವಾಗದೆ ವಿಶ್ವಮಾನವರಾಗಬೇಕು ಎಂದು ಹೇಳಿದವರು ಕುವೆಂಪುರವರ ಗುರುಗಳು ತಾಲೂಕಿನ ತಳುಕಿನ ವೆಂಕಣ್ಣಯ್ಯನವರು ಎಂದು ಹೇಳಿಕೊಳ್ಳುವುದಕ್ಕೆ ನಮಗೆಲ್ಲರಿಗೂ ಹೆಮ್ಮೆಯಾಗುತ್ತದೆ ಎಲ್ಲಾ ಸಾಹಿತ್ಯ ಪ್ರಕಾರಗಳನ್ನು ಕುವೆಂಪುರವರು ಬಲ್ಲವರಾಗಿದ್ದರು ಎಂದರು.

ಕಾಂಗ್ರೆಸ್ ಮುಖಂಡ ಆರ್ ಪ್ರಸನ್ನ ಕುಮಾರ್ ಮಾತನಾಡಿ ಜಾತಿ ಜಯಂತಿ ಗಳಿಗಿಂತ ವಿಶ್ವ ಮಾನವ ಜಯಂತಿ ಮುಖ್ಯವಾಗಬೇಕು ಕುವೆಂಪು ಸಾಹಿತ್ಯ ಕೃಷಿ ಗಣನೆಗೆ ನಿಲುಕದ್ದು ಆಡು ಮುಟ್ಟದ ಸೊಪ್ಪಿಲ್ಲ ಕುವೆಂಪು ಮುಟ್ಟದ ಸಾಹಿತ್ಯ ಪ್ರಕಾರವಿಲ್ಲ ವೈಚಾರಿಕತೆ ವೈಜ್ಞಾನಿಕತೆ ಜನರ ಜೀವನ ಕಟ್ಟುವಂತಹ ಸಾಹಿತ್ಯವನ್ನು ಕಾಣಬಹುದು ಜ್ಞಾನಪೀಠ ಪ್ರಶಸ್ತಿ ರಾಷ್ಟ್ರಕವಿ ಕರ್ನಾಟಕ ರತ್ನ ಈ ಎಲ್ಲಾ ಪ್ರಶಸ್ತಿಗಳನ್ನು ಪಡೆದ ಮೊದಲ ಕವಿ ಕುವೆಂಪುರವರಾಗಿದ್ದಾರೆ ಶಿಕ್ಷಣವೆಂಬುದು ಯಾವುದೇ ಜಾತಿಗೆ ಸೀಮಿತವಾಗಬಾರದು ಎಂಬುದು ಅವರ ದ್ಯೇಯವಾಗಿತ್ತು ಕನ್ನಡದ ನಾಡಗೀತೆ ರೈತ ಗೀತೆಗಳು ಜನರ ಬಾಯಲ್ಲಿ ಇಂದಿಗೂ ಸಹ ಶಾಶ್ವತವಾಗಿ ನಲಿದಾಡುತ್ತಿವೆ ಜನರು ಕುವೆಂಪು ತತ್ವಗಳನ್ನು ಹಾಗೂ ಕೃತಿಗಳನ್ನು ಓದಿ ಅಳವಡಿಸಿಕೊಂಡರೆ ಸಾಮಾಜಿಕವಾಗಿ ಬೆಳೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು

ಕಾರ್ಯಕ್ರಮದಲ್ಲಿ ಕುವೆಂಪುರವರ ಜೀವನ ಚರಿತ್ರೆ ಕುರಿತು ಉಪನ್ಯಾಸಕ ಸಿ ನಾಗರಾಜ್ ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಡಿವೈಎಸ್ಪಿ ಟಿ ವಿ ರಾಜಣ್ಣ ನಿವೃತ್ತ ಪ್ರಾಂಶುಪಾಲ ಸಿರಿಯಣ್ಣ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂಜೆ ರಾಘವೇಂದ್ರ ನಗರಸಭೆ ಸದಸ್ಯ ವೀರಭದ್ರಯ್ಯ ರಮೇಶ್ ಗೌಡ ಟಿ ಮಲ್ಲಿಕಾರ್ಜುನ ರೆಡ್ಡಿಹಳ್ಳಿ ಶಿವಣ್ಣ ಗಿರಿಯಪ್ಪ ಸಿಟಿ ಶ್ರೀನಿವಾಸ್ ಸಿ ನಾಗರಾಜ್ ಬೊಪ್ಪಣ್ಣ ಪ್ರಾಂಶುಪಾಲ ರಂಗಪ್ಪ ಚಿತ್ತಯ್ಯ ಸೇರಿದಂತೆ ರೈತರು ತಾಲ್ಲೂಕು ಮಟ್ಟದ ಅಧಿಕಾರಿಗಳು ಸಿಬ್ಬಂದಿ  ಶ್ರೀನಿವಾಸ್ ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page