ಕನ್ನಡನಾಡುನುಡಿ ರಕ್ಷಣೆಗಾಗಿ ಪ್ರಾಣತ್ಯಾಗಕ್ಕೂ ಸಿದ್ಧ ಕರವೇ ತಾಲ್ಲೂಕುಅಧ್ಯಕ್ಷರಾದ ಕೃಷ್ಣಪೂಜಾರಿ ಹೇಳಿಕೆ

by | 17/11/23 | ಸಾಂಸ್ಕೃತಿಕ


ಹಿರಿಯೂರು :
ರಾಜ್ಯದಲ್ಲಿ ಕನ್ನಡ ಭಾಷೆ ನೆಲ, ಜಲದ ವಿಷಯ ಬಂದಾಗ ಕನ್ನಡನಾಡುನುಡಿ ರಕ್ಷಣೆಗಾಗಿ ಪ್ರಾಣ ತ್ಯಾಗಕ್ಕೂ ಕರ್ನಾಟಕ ರಕ್ಷಣಾ ವೇದಿಕೆ ಸದಾ ಸಿದ್ದವಾಗಿರುತ್ತದೆ ಎಂಬುದಾಗಿ ಕರವೇ ಪ್ರವೀಣ್ ಶೆಟ್ಟಿ ಬಣದ ತಾಲೂಕು ಅಧ್ಯಕ್ಷ ಕೃಷ್ಣ ಪೂಜಾರಿ ಹೇಳಿದರು.
ತಾಲ್ಲೂಕಿನ ಕಸ್ತೂರಿರಂಗಪ್ಪನಹಳ್ಳಿ ಗೇಟ್ ಬಳಿ ಇರುವ ಗಾರ್ಮೆಂಟ್ ಮುಂಭಾಗದಲ್ಲಿ ಕರವೇ ಆಟೋ ಚಾಲಕರು ಹಾಗೂ ಮಾಲೀಕರು ಏರ್ಪಡಿಸಲಾಗಿದ್ದ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕರ್ನಾಟಕ ರಾಜ್ಯದ ನೆಲ-ಜಲ ಉಳಿವಿಗೆ ಹಾಗೂ ರಕ್ಷಣೆಗಾಗಿ ನಮ್ಮ ಸಂಘಟನೆಯು ಹಿಂದಿನಿಂದಲೂ ಹೋರಾಟ ಮಾಡಿಕೊಂಡು ಬಂದಿದ್ದೇವೆ. ರಾಜ್ಯದ ಯಾವ ಮೂಲೆಯಲ್ಲಿ ಕನ್ನಡಿಗರಿಗೆ ಯಾವುದೇ ರೀತಿಯ ಅನ್ಯಾಯವಾದರೂ ಸಹ ನಮ್ಮ ಕರವೇ ವತಿಯಿಂದ ಖಂಡಿಸಿ ಹೋರಾಟಕ್ಕಿಳಿದಿದ್ದೇವೆ ಎಂದರಲ್ಲದೆ,
ಇದೀಗ ತಾಲೂಕಿನಲ್ಲಿಯೂ ಕರವೇ ಸಂಘಟನೆಯನ್ನು ಅತ್ಯಂತ ಬಲಿಷ್ಠವಾಗಿ ಕಟ್ಟಲು ನಾವೆಲ್ಲಾ ಪಣತೊಟ್ಟಿದ್ದು ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡಲಾಗುವುದು. ಈ ನಿಟ್ಟಿನಲ್ಲಿ ಕನ್ನಡತಾಯಿ ಭುವನೇಶ್ವರಿಯ ತೇರು ಹೀಗೆಯೇ ನಿರಂತರವಾಗಿ ಎಲ್ಲರ ಮನೆ ಮನದಲ್ಲೂ ಸಾಗುತ್ತಲಿರಲಿ ಎಂಬುದಾಗಿ ಅವರು ಹೇಳಿದರು.
ಕನ್ನಡ ಭುವನೇಶ್ವರಿ ಮಾತೆಗೆ ಪೂಜೆ ನೆರವೇರಿಸಿದ ಬಳಿಕ ಆಟೋ ಮಾಲೀಕರು ರಾಷ್ಟ್ರೀಯ ಹೆದ್ದಾರಿ ಮೂಲಕ ನಗರ ಪ್ರವೇಶಿಸಿ ನಗರದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಸಿದರು. ಕಾರ್ಯಕರ್ತರು ಆಟೋಗಳಲ್ಲಿ, ಕಾರ್ ಗಳಲ್ಲಿ ಬಾವುಟಗಳನ್ನು ಕಟ್ಟಿಕೊಂಡು ಮೆರವಣಿಗೆ ನಡೆಸಿದರು.
ಈ ಸಂದರ್ಭದಲ್ಲಿ ಕರವೇ ಚಾಲಕರ ಮತ್ತು ಮಾಲೀಕರ ಘಟಕದ ಅಧ್ಯಕ್ಷ ರಾಮು, ಗೌರವಾಧ್ಯಕ್ಷ ವಿಶ್ವನಾಥ್,ಉಪಾಧ್ಯಕ್ಷ ರಮೇಶ್, ಕಾರ್ಯದರ್ಶಿ ರಾಮು, ಸದಸ್ಯರಾದ ರಾಜು, ಪಾತಲಿಂಗಪ್ಪ, ಕಿರಣ್,ರಾಜಣ್ಣ, ಮಂಜಣ್ಣ, ಅನಿಲ್, ಶಿವು, ಸಿಕೆ ಕುಮಾರ್, ರಾಘು, ಅಪ್ಪು, ಗೋವಿಂದ, ಬಾಲು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page