ಹೊಳಲ್ಕೆರೆ ಜ.20. ಕರ್ತವ್ಯಕ್ಕೆ ಹೋಗುವ ದಾರಿ ಮಧ್ಯೆ ಕಚೇರಿಗೆ ಹೋಗುವ ಮುನ್ನವೇ ರಸ್ತೆ ಅಪಘಾತಕ್ಕೆ ಸಿಲುಕಿ ಅಧಿಕಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಡೆದಿದೆ. ಕೃಷಿ ಇಲಾಖೆಯಲ್ಲಿ (ತಾಂತ್ರಿಕ) ಕಾರ್ಯ ನಿರ್ವಹಿಸುತ್ತಿದ್ದ ವಿಶಾಲ್ ಕುಮಾರ್ (28 ) ಎಂದಿನಂತೆ ಚಿತ್ರದುರ್ಗದಿಂದ ಹೊಳಲ್ಕೆರೆ ಮಾರ್ಗವಾಗಿ ಕರ್ತವ್ಯ ನಿಮಿತ್ತ ಹೋಗುತ್ತಿದ್ದಾಗ ಹೊಳಲ್ಕೆರೆ ಸಮೀಪದ ತಿರುಮಲ ಡಾಬಾ ಬಳಿ ಲಾರಿ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ವಿಶಾಲ್ ಕುಮಾರ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇವರ ಮದುವೆಯ ನಿಶ್ಚಿತಾರ್ಥ ಇತ್ತು ಎಂದು ತಿಳಿದು ಬಂದಿದ್ದು. ಮದುವೆ ಮಾಡಿಕೊಂಡು ಸುಖ ಸಂಸಾರ ನಡೆಸುವ ಕನಸು ಕಾಣುತ್ತಿದ್ದ ಕೃಷಿ ಅಧಿಕಾರಿಯೊಬ್ಬರು ಅಪಘಾತದಲ್ಲಿ ಮೃತಪಟ್ಟ ದುರಂತ ಸಂಭವಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತುಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments