ಕರ್ನಾಟಕ ಗ್ರಾಮೀಣ ಬ್ಯಾಂಕ್ ರೈತರ ಸಾಲ ವಸೂಲಾತಿಗೆ ನೀಡಿದ ನೋಟಿಸ್ ಸುಟ್ಟು ರೈತ ಸಂಘ ಆಕ್ರೋಶ

by | 27/11/23 | Uncategorized, ಪ್ರತಿಭಟನೆ

ಚಳ್ಳಕೆರೆ: ತಾಲೂಕಿನಲ್ಲಿ ವರುಣ ಕೃಪೆ ತೋರದ ಹಿನ್ನೆಲೆಯಲ್ಲಿ ಬರದ ಛಾಯೆ ಆವರಿಸಿದ್ದು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಇಂತಹ ಪರಿಸ್ಥಿತಿಯಲ್ಲಿ ಗ್ರಾಮೀಣ ಭಾಗದ ಜನರು ಬರಗಾಲಕ್ಕೆ ತುತ್ತಾಗಿ ಕೂಲಿ ಕೆಲಸ ಅರಸಿ ಗುಳೆ ಹೋಗುತ್ತಿದ್ದು ಈ ಮಧ್ಯೆ ಸರ್ಕಾರಿ ಹಾಗೂ ಖಾಸಗಿ ಸ್ವಾಮ್ಯದ ಬ್ಯಾಂಕುಗಳು ರೈತರ ಸಾಲ ವಸೂಲಾತಿಗೆ ವಕೀಲರ ನೋಟಿಸ್ ನೀಡಿ ರೈತರನ್ನು ಹೆದರಿಸಲು ಮುಂದಾಗುತ್ತಿರುವುದು ಖಂಡನೀಯ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.


ನಗರದ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು ತಾಲೂಕಿನ ತಿಮ್ಮಪ್ಪಯ್ಯನ ಕೋಟೆ ಬಾಲಪ್ಪ ಎಂಬ ರೈತರಿಗೆ ತಳಕು ಶಾಖೆ ಕರ್ನಾಟಕ ಗ್ರಾಮೀಣ ಬ್ಯಾಂಕ್ ನವರು ಸಾಲ ವಸೂಲಿಗೆ ನೋಟಿಸ್ ನೀಡಿ ಹೆದರಿಸಿದ್ದಾರೆ ಇಂತಹ ವಸೂಲಿ ಕ್ರಮವನ್ನು ರೈತ ಸಂಘ ಉಗ್ರವಾಗಿ ಖಂಡಿಸುತ್ತದೆ.


ತಾಲೂಕಿನಲ್ಲಿ ಮಳೆ ಬರದೆ ಬರಗಾಲ ಆವರಿಸಿರುವುದು ಇಡೀ ರಾಜ್ಯಕ್ಕೆ ತಿಳಿದ ವಿಚಾರವಾಗಿದೆ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ರೈತರು ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ ಕೂಡಲೇ ಬ್ಯಾಂಕುಗಳು ರೈತರ ಸಾಲ ವಸೂಲಾತಿಯನ್ನು ನಿಲ್ಲಿಸಬೇಕು ಹಾಗೂ ಹೊಸ ಸಾಲ ನೀಡಿ ರೈತರಿಗೆ ಚೈತನ್ಯ ತುಂಬಬೇಕೆಂದು ಜಿಲ್ಲಾಧಿಕಾರಿಗಳು ಲೀಡ್ ಬ್ಯಾಂಕುಗಳ ಮೂಲಕ ಸರ್ಕಾರಿ ಮತ್ತು ಸಹಕಾರಿ ಬ್ಯಾಂಕುಗಳಿಗೆ ಸಾಲವಸೂಲಾತಿ ನಿಲ್ಲಿಸಬೇಕೆಂದು ಕಟ್ಟುನಿಟ್ಟಿನ ಆದೇಶ ನೀಡಬೇಕೆಂದು ಒತ್ತಾಯಿಸಿದರು.

ಕಾಂಗ್ರೆಸ್ ಪಕ್ಷವು ಪಂಚ ರಾಜ್ಯಗಳ ಚುನಾವಣೆ ಪ್ರಣಾಳಿಕೆಗಳಲ್ಲಿ ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಹೇಳುತ್ತಿದ್ದಾರೆ 135 ಸ್ಥಾನಗಳನ್ನು ಪಡೆದು ಕರ್ನಾಟಕದಲ್ಲಿ ಅಧಿಕಾರ ಹಿಡಿದ ಕಾಂಗ್ರೆಸ್ ಪಕ್ಷಕ್ಕೆ ರೈತರ ಸಾಲ ಮನ್ನಾ ಮಾಡಲು ಹಿಂದೇಟು ಹಾಕುತ್ತಿರುವುದು ಯಾವ ನ್ಯಾಯ ಕೂಡಲೇ ರಾಜ್ಯದಲ್ಲಿ ಎಲ್ಲಾ ಬ್ಯಾಂಕುಗಳಲ್ಲಿರುವ ರೈತರ ಸಾಲವನ್ನು ಮನ್ನಾ ಮಾಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಂಡು ಸರಕಾರಕ್ಕೆ ತಕ್ಕ ಪಾಠ ಕಲಿಸಲಾಗುವುದು ಎಂದು ತಿಳಿಸಿದರು.

ಬ್ಯಾಂಕ್ ಅಧಿಕಾರಿಗಳು ಇಬ್ಬಗೆ ನೀತಿ ಅನುಸರಿಸುತ್ತಿದ್ದು ಬಂಡವಾಳ ಶಾಹಿಗಳಿಗೆ ನೀಡಿರುವ ಲಕ್ಷಾಂತರ ಕೋಟಿ ಸಾಲವನ್ನು ವಸೂಲಿ ಮಾಡದೆ ಕೇವಲ ಹತ್ತರಿಂದ ಇಪ್ಪತ್ತು ಸಾವಿರ ಸಾಲ ಪಡೆದ ರೈತರ ಸಾಲವನ್ನು ವಸೂಲಿ ಮಾಡಲು ವಕೀಲರ ಮೂಲಕ ನೋಟಿಸ್ ನೀಡಿ ರೈತರ ಜೀವನದ ಜೊತೆ ಚೆಲ್ಲಾಟವಾಡಲು ಹೊರಟಿದ್ದಾರೆ ಬರಗಾಲ ಬಂದಾಗ ಬ್ಯಾಂಕುಗಳು ರೈತರಿಂದ ಸಾಲ ವಸೂಲಾತಿ ನಿಲ್ಲಿಸಬೇಕೆಂದು ಲೀಡ್ ಬ್ಯಾಂಕಿನ ಆದೇಶವಿದ್ದರೂ ವಸೂಲಿಗೆ ನೋಟಿಸ್ ನೀಡಿ ಕಿರುಕುಳ ಕೊಡುತ್ತಿದ್ದಾರೆ ಇದರಿಂದ ರೈತರು ಆತ್ಮಹತ್ಯೆ ಮಾಡಿಕೊಂಡರೆ ಬ್ಯಾಂಕ್ ಅಧಿಕಾರಿಗಳ ಮೇಲೆ ಕೊಲೆ ಕೇಸು ದಾಖಲಿಸಬೇಕು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೊಡುವ ಪಿಂಚಣಿ ಯೋಜನೆಗಳ ಹಣವನ್ನು ರೈತರಿಗೆ ಕೊಡದೆ ಬ್ಯಾಂಕುಗಳು ಸಾಲಕ್ಕೆ ಜಮಾ ಮಾಡಿಕೊಂಡಲ್ಲಿ ಮತ್ತು ಬ್ಯಾಂಕ್ ಅಧಿಕಾರಿಗಳು ರೈತರೊಂದಿಗೆ ಪತ್ರ ವ್ಯವಹಾರವನ್ನು ಕನ್ನಡ ಭಾಷೆಯಲ್ಲಿ ವಿವರಿಸಬೇಕೆಂದು ಒತ್ತಾಯಿಸಿ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ತಹಶೀಲ್ದಾರ್ ರೆಹಾನ್ ಪಾಷಾ ರೈತರ ಮನವಿ ಸ್ವೀಕರಿಸಿ ಮಾತನಾಡಿ ಚಳ್ಳಕೆರೆ ತಾಲೂಕನ್ನು ಈಗಾಗಲೇ ಸರ್ಕಾರ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿದ್ದು ರೈತರಿಗೆ ನೋಟಿಸ್ ನೀಡಿರುವ ಬ್ಯಾಂಕ್ ಅಧಿಕಾರಿಗಳನ್ನು ಕರೆಸಿ ರೈತರ ಹಾಗೂ ಬ್ಯಾಂಕ್ ಅಧಿಕಾರಿಗಳ ಸಭೆ ನಡೆಸಿ ಸಾಲ ವಸೂಲಾತಿ ಮಾಡದಂತೆ ಆದೇಶ ನೀಡಲಾಗುವುದು ಈ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ತಲುಪಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಚಂದ್ರಶೇಖರ ನಾಯಕ್ ಮಂಜುನಾಥ ಗಂಗಾಧರಪ್ಪ ಚಿತ್ತಪ್ಪ ರಾಜಣ್ಣ ಕೃಷ್ಣಮೂರ್ತಿ ಕನಕಶಿವಮೂರ್ತಿ ಮೇಸ್ತ್ರಿ ಪಾಪಯ್ಯ ಬಾಲಪ್ಪ ಶ್ರೀನಿವಾಸ್ ಬಿವಿ ತಿಪ್ಪೇಸ್ವಾಮಿ ಸೇರಿದಂತೆ ಹಲವು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page