ಕರ್ನಾಟಕ ಪ್ರೆಸ್ ಕ್ಲಬ್ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

by | 22/11/23 | ಸುದ್ದಿ

ಹೆಬ್ಬೂರು ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡುವ ಮೂಲಕ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಹೊನ್ನೇನಹಳ್ಳಿ ಗ್ರಾ.ಪಂ. ಅಧ್ಯಕ್ಷ
ಎಸ್.ಎಂ.ಶಿವಣ್ಣ ಹೇಳಿದರು.

ಅವರು ಸಾಲಿಗ್ರಾಮ ತಾಲೂಕಿನ ಹೆಬ್ಸೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ಕೃಷ್ಣರಾಜನಗರ ತಾಲೂಕು ಘಟಕದ ವತಿಯಿಂದ ಆಯೋಜಿಸಿದ್ದ ಸುವರ್ಣ ಕರ್ನಾಟಕ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕನ್ನಡ ನಾಡು, ನುಡಿ, ನೆಲ, ಜಲ ಭಾಷೆಯ ಬಗೆಗಿನ ಕಾರ್ಯಕ್ರಮಗಳನ್ನು ನಾಡಿನೆಲ್ಲೆಡೆ ಸರ್ವರು ಒಟ್ಟಾಗಿ ಸೇರಿ ಆಚರಿಸಬೇಕು. ಅದಕ್ಕಾಗಿ ಪ್ರತಿಯೊಬ್ಬರೂ ಜಾಗೃತರಾಗಬೇಕು ವಿವಿಧ ವಿಷಯಗಳ ಬಗ್ಗೆ ಅರಿವನ್ನು ಪಡೆಯುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದರು.

ಪ್ರತಿ ವರ್ಷವೂ ಕೇವಲ ನವೆಂಬರ್ ತಿಂಗಳಿನಲ್ಲಿ ಮಾತ್ರ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಮಾಡದೆ ಪ್ರತಿನಿತ್ಯ ಆಚರಣೆ ಮಾಡುವ ಮೂಲಕ ನಿತ್ಯೋತ್ಸವವನ್ನಾಗಿ ಆಚರಿಸಬೇಕು. ಆಡಂಬರದಿಂದ ಕೂಡಿರುವ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಬದಲು ಜನಜಾಗೃತಿಯನ್ನು ಉಂಟುಮಾಡುವ ಕಾರ್ಯಕ್ರಮಗಳು, ನಾಡು ನುಡಿ ನೆಲ ಜಲದ ಬಗ್ಗೆ, ಕರುನಾಡು ಕಟ್ಟಿದ ಗಣ್ಯರುಗಳ ಬಗ್ಗೆ ಜನಸಾಮಾನ್ಯರಿಗೆ ತಿಳಿಸುವಂತಹ ಕಾರ್ಯಕ್ರಮಗಳನ್ನು ಏರ್ಪಾಡು ಮಾಡುವ ಮೂಲಕ ಅರ್ಥಗರ್ಭಿತವಾಗಿ ಆಚರಣೆ ಮಾಡುವುದು ಉತ್ತಮವಾದ ಕಾರ್ಯವಾಗಿದೆ ಎಂದರು.
ಈ ನಿಟ್ಟಿನಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ಕೆ.ಆರ್.ನಗರ ತಾಲೂಕು ಘಟಕವು 2023 ನೇ ಸಾಲಿನಲ್ಲಿ ತಾಲೂಕಿನ ಹಲವು ಕಡೆಗಳಲ್ಲಿ ಹತ್ತಾರು ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡುವ ಮೂಲಕ ಜನಮನ್ನಣೆಗೆ ಪಾತ್ರವಾಗಿದೆ. ಸಾಮಾಜಿಕ ಸೇವಾ ಕಾರ್ಯ ಮಾಡುವ ಮನಸುಳ್ಳ ಇತರೆ ಸಂಘಟನೆಗಳಿಗೆ ಈ ಪ್ರೆಸ್ ಕ್ಲಬ್ ನಿಜಕ್ಕೂ ಮಾದರಿಯಾಗಿದೆ ಎಂದು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ್ರೆಸ್ ಕ್ಲಬ್ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಸ್ಪರ್ಧಾಳುಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ವಿವಿಧ ಸ್ಪರ್ಧೆಗಳ ವಿಜೇತರು:

ಕನ್ನಡದ ಗಾದೆ ಬರೆಯುವ ಸ್ಪರ್ಧೆ

ಕೀರ್ತನ – ಪ್ರಥಮ (9ನೇ ತರಗತಿ), ಮೋನಿಕ – ದ್ವಿತೀಯ (8ನೇ ತರಗತಿ), ಸಂಜಯ್ – ತೃತೀಯ (8ನೇ ತರಗತಿ).

ಕವಿಗಳು, ಸಾಹಿತಿಗಳು, ಲೇಖಕರ ಹೆಸರುಗಳ ಬರೆಯುವ ಸ್ಪರ್ಧೆ

ಬಿಂದು – ಪ್ರಥಮ (8ನೇ ತರಗತಿ), ಲಕ್ಷ್ಮಿ- ದ್ವಿತೀಯ (8ನೇ ತರಗತಿ), ಬಿಂದು – ತೃತೀಯ (10ನೇ ತರಗತಿ).

ಪ್ರಬಂಧ ಸ್ಪರ್ಧೆ – ಕನ್ನಡ ಭಾಷಾ ಉಳಿವಿಗೆ ವಿದ್ಯಾರ್ಥಿಗಳ ಪಾತ್ರ

ರಾಮ್ ಪ್ರಸಾದ್ – ಪ್ರಥಮ, ಜೀವನ್ – ದ್ವಿತೀಯ, ಕಾಂಚನ – ತೃತೀಯ (ಮೂವರು ಹತ್ತನೇ ತರಗತಿ ವಿದ್ಯಾರ್ಥಿಗಳು).

ಸಮಾರಂಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯ ಸುನಿಲ್ ಕುಮಾರ್, ಪ್ರಭಾರ ಮುಖ್ಯ ಶಿಕ್ಷಕ ಜಿ.ಎ.ಪ್ರಕಾಶ್, ಕರ್ನಾಟಕ ಪ್ರೆಸ್ ಕ್ಲಬ್ ತಾಲೂಕು ಅಧ್ಯಕ್ಷ
ಕೆ.ಟಿ.ಮೋಹನ್ ಕುಮಾರ್, ಗ್ರಾಮೀಣ ನಿಧಿ ಸೌಹಾರ್ದ ಕೋ ಆಪರೇಟಿವ್ ಲಿಮಿಟೆಡ್ ಅಧ್ಯಕ್ಷ
ಕೆ.ಆರ್.ಶ್ಯಾಮ್ ಸುಂದರ್, ಶಿಕ್ಷಕರುಗಳಾದ
ಎಸ್.ಬಿ.ಮಂಜುನಾಥ, ಎಂ.ಜೆ.ಧರೆಶ್, ಎಸ್.ಮಮತ, ಹೆಚ್.ಎ.ಚೆನ್ನಕೇಶವ ಹಾಗೂ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page