ಚಳ್ಳಕೆರೆ ಸೆ.29.ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ರೈತ ಹಾಗೂ ಕನ್ನಡ ಪರ ಸಂಘಟನೆಗಳು ಶುಕ್ತವಾರ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ನಗರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಎಂದಿನಂತೆ ಪ್ರತಿ ಶುಕ್ರವಾರ ವಾರದ ರಜೆ ಅಂಗಡಿಗಳನ್ನು ಮುಚ್ಚಿರುವುದು ಬಿಟ್ಟರೆ ಉಳಿದ ಅಂಗಡಿಗಳು ಎಂದಿನಂತೆ ವ್ಯಾಪಾರ ವಹಿವಾಟು ನಡೆಯುತ್ತಿದ್ದವು. ಕರ್ನಾಟಕ ಬಂದ್ ಎಂದು ಘೋಷಣೆ ಮಾಡಿದ್ದರು ಜನರು ನಗರಕ್ಕೆ ಬರುವವರ ಸಂಖ್ಯೆ ಕಡಿಮೆಯಾಗಿತ್ತು ಎಂದಿನಂತೆ ಸಾರಿಗೆ ಹಾಗೂ ಖಾಸಗಿ ಬಸ್ ಗಳ ಸಂಚಾರ ಇದ್ದರೂ ಪ್ರಯಾಣಿಕರ ಕೊರೆಯಿಂದ ಸಾರಿಗೆ ಬಸ್ ಗಳು ಖಾಲಿ ಖಾಲಿ ಸಂಚರಿಸಿದರೆ ಖಾಸಗಿ ಬಸ್ ಗಳು ಪ್ರಯಾಣಿಕರಿಗಾಗಿ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದವು.
ರಾಷ್ಟ್ರೀಯ ಹೆದ್ದಾರಿ ವಾಹನ ದಟ್ಟಣೆಯಿಂದ ಸಂಚರಿಸುವ ರಸ್ತೆ ಕೆಲವೆ ವಾಹನಗಳ ಸಂಚಾರದಿಂದ ರಸ್ತೆ ಬಿಕೋ ಎನ್ನುತ್ತಿತ್ತು.
ಉಳಿದಂತೆ ಶಾಲಾ- ಕಾಲೇಜುಗಳು, ಬ್ಯಾಂಕ್ಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು.
ನಗರದ ಬಹುತೇಕ ಹೋಟೆಲ್, ದಿನಸಿ ಅಂಗಡಿ-ತರಕಾರಿ ಅಂಗಡಿ, ಬ್ಯಾಂಕ್, ಪೆಟ್ರೋಲ್ ಪಂಪ್ ಹಾಗೂ ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು. ನಗರದಲ್ಲಿಯಾವುದೇ ಅಹಿತರ ಘಟನೆಗಳು ನಡೆಯದಂತೆ ಮುನ್ನಚ್ವರಿಯಾಗಿ ,144 ಸೆಕ್ಷನ್ ಜಾರಿಗೊಳಿಸಲಾಗಿತ್ತು ಪೋಲಿಸ್ ಬಿಗಿ ಬಂದೊಬಸ್ತು ವ್ಯವಸ್ಥೆ ಕಲ್ಪಿಸಲಾಗಿತ್ತು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments