ಕಲಬುರಗಿ ನಗರದಲ್ಲಿ ಪ್ರತ್ಯೇಕವಾಗಿ ಎರಡು ಕಡೆ ವೇಶ್ಯಾವಾಟಿಕೆ ದಂದೆಯ ಅಡ್ಡೆಗಳ ಮೇಲೆ ದಾಳಿ ನಡೆಸಿದ ಪೊಲೀಸರು ಮೂವರು ಯುವತಿಯರನ್ನು ರಕ್ಷಣೆ ಮಾಡಿ, ಮೂವರು ಪುರುಷರು ಹಾಗೂ ದಂದೆ ನಡೆಸುತ್ತಿದ್ದ ಇಬ್ಬರು ಮಹಿಳೆಯರನ್ನು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ.
ರಾಘವೇಂದ್ರ ನಗರ ಪೊಲೀಸ ಠಾಣೆ ವ್ಯಾಪ್ತಿಯ ಮಹಾಲಕ್ಷ್ಮೀ ಲೇಔಟ್ ಘನಶಾಮ ಅಪಾರ್ಟಮೆಂಟಿನಲ್ಲಿ ವೇಶ್ಯಾವಾಟಿಕೆ ನಡೆದಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸ್ ರು ದಾಳಿ ನಡೆಸಿದ್ದಾರೆ. ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇಬ್ಬರು ಯುವತಿಯರನ್ನು ರಕ್ಷಣೆ ಮಾಡಿದ್ದು, ಇಬ್ಬರು ಪುರುಷರನ್ನು ವಶಕ್ಕೆ ಪಡೆದ್ದಾರೆ. ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಗೀತಾದೇವಿ ಹೊಸಮನಿ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ನೊಂದಡೆ ಬ್ರಹ್ಮಪೂರ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಯಾಣಿ ಪೆಟ್ರೋಲ್ ಪಂಪ್ ಹತ್ತಿರದ ಶರಣ ನಗರ ಕಾಲೋನಿಯ ಮನೆಯೊಂದರ ಮೇಲೆಯೂ ದಾಳಿ ನಡೆಸಿದ ಪೊಲೀಸ್ ರು ಓರ್ವ ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ಓರ್ವ ಪುರುಷ ಹಾಗೂ ವೇಶ್ಯಾವಾಟಿಕೆ ದಂದೆ ನಡೆಸುತ್ತಿದ್ದ ರೇಣುಕಾ ಸಾಗರ ಎಂಬ ಮಹಿಳೆ ವಿರುದ್ಧ ಮಹಿಳಾ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ವೇಶ್ಯಾವಾಟಿಕೆಯಲ್ಲಿ ತೊಡಗಿದ ಮೂವರು ಯುವತಿಯರನ್ನು ಮಹಿಳಾ ಸಾಂತ್ವಾನ ಕೇಂದ್ರಕ್ಕೆ ಒಪ್ಪಿಸಲಾಗಿದ್ದು, ಮೂವರು ಪುರುಷರು ಮತ್ತು ದಂದೆ ನಡೆಸುತ್ತಿದ್ದ ಗೀತಾದೇವಿ ಹೊಸಮನಿ, ರೇಣುಕಾ ಸಾಗರ ಐವರ ವಿರುದ್ಧ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಜೈಲಿಗೆ ಕಳಿಸಲಾಗಿದೆ.
0 Comments