ಕಲೆಯ ಜೊತೆಯಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಸಂಸ್ಕಾರವನ್ನು ಕಲಿಸಿ ನಿಕಟ ಪೂರ್ವ ತಹಶೀಲ್ದಾರ್ ಎನ್ ರಘುಮೂರ್ತಿ.

by | 01/01/24 | ಸುದ್ದಿ

ನಾಯಕನಹಟ್ಟಿ:: ಬೋಸೆದೇವರಹಟ್ಟಿಯಲ್ಲಿ ಬುಡಕಟ್ಟು ಸಂಸ್ಕೃತಿಯ ಧಾರ್ಮಿಕ ಕಾರ್ಯಗಳಿಗೆ ಹೆಸರುವಾಸಿ ಎಂದು ನಿಕಟ ಪೂರ್ವ ತಹಸಿಲ್ದಾರ್ ಎನ್ ರಘುಮೂರ್ತಿ ಹೇಳಿದ್ದಾರೆ.


ಅವರು ಪಟ್ಟಣ ಪಂಚಾಯತಿ ವ್ಯಾಪ್ತಿಯ ಬೋಸೆದೇವರಹಟ್ಟಿ ಗ್ರಾಮದಲ್ಲಿ ಭಾನುವಾರ ರಾತ್ರಿ ಶ್ರೀ ಬೋಸೆ ರಂಗಸ್ವಾಮಿ ಜಾತ್ರೆ ಪ್ರಯುಕ್ತ ಗ್ರಾಮದ ಕಲಾವಿದರು

“ಗರುಡನ ಆರ್ಭಟಕ್ಕೆ ಮರೆಯಾದ ಹಕ್ಕಿ.
ಅರ್ಥಾತ್‌- ಕಣ್ಣೀರಿನಲ್ಲಿ ಕಣ್ಮರೆಯಾದ ಪ್ರೇಯಸಿ”


ಎಂಬ ಸುಂದರ ಸಾಮಾಜಿಕ ನಾಟಕದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ್ದಾರೆ. ಚಿತ್ರದುರ್ಗದ ಪರಂಪರೆಗೆ ಮತ್ತು ಇತಿಹಾಸಕ್ಕೆ ತನ್ನದೇ ಆದ ಮಹತ್ವವನ್ನು ಹೊಂದಿದೆ ಈ ಭಾಗದ ಮ್ಯಾಸ ನಾಯಕರು ತಮ್ಮ ಪೂರ್ವಜರ ಕಾಲದಿಂದಲೂ ಗೋವುಗಳ ರಕ್ಷಣೆ ಗೋವುಗಳನ್ನು ಪೂಜಿಸುವ ಮೂಲಕ ಬುಡಕಟ್ಟು ಸಂಸ್ಕೃತಿಯ ಧಾರ್ಮಿಕ ಕಾರ್ಯಗಳನ್ನು ನಡೆಸುತ್ತಾ ಬಂದಿದ್ದಾರೆ ಅದೇ ರೀತಿ ಈ ದಿನ ಬೋಸೆ ರಂಗಸ್ವಾಮಿ ಜಾತ್ರೋತ್ಸವ ಗ್ರಾಮದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಿದ್ದೀರಾ ಗ್ರಾಮದಲ್ಲಿ ಶಾಂತಿ ಮತ್ತು ಈ ಭಾಗದ ರೈತರಿಗೆ ಉತ್ತಮ ಮಳೆ ಬೆಳೆ ನೀಡಲಿ ಎಂದು ಶುಭ ಹಾರೈಸಿದರು.

ಇದೆ ವೇಳೆ ನೀರಾವರಿ ಹೋರಾಟ ಸಮಿತಿಯ ಹೋಬಳಿ ಅಧ್ಯಕ್ಷ ಜಿ ಬಿ ಮುದಿಯಪ್ಪ ಮಾತನಾಡಿ ಹಳ್ಳಿ ಸೊಗಡಿನ ಕಲೆ ಅಳಿವಿನಂಚಿನಲ್ಲಿದೆ ಅದನ್ನ ಉಳಿಸಿ ಬೆಳೆಸುವಲ್ಲಿ ಯುವ ಪೀಳಿಗೆ ಮುಂದಾಗಬೇಕು ನಮ್ಮ ಗ್ರಾಮ ಕಲೆಯ ತವರೂರು ಎಂದೇ ಖ್ಯಾತಿ ಪಡೆದಿದೆ ಇಂದಿನ ಯುವಕರು ಕಲೆ ಮತ್ತು ಸಂಸ್ಕೃತಿ ಧಾರ್ಮಿಕ ಕಾರ್ಯಗಳನ್ನು ಮಾಡುವ ಮೂಲಕ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡಬೇಕು ಎಂದು ಕಿವಿಮಾತು ಹೇಳಿದರು.

ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಸದಸ್ಯರಾದ ಓಬಯ್ಯ ದಾಸ್, ಶ್ರೀಮತಿ ಬೋಸಮ್ಮ ಮಂಜುನಾಥ್, ಊರಿನ ಮುಖಂಡರಾದ ಬಿ. ಎಲ್. ಗೌಡ, ಬಿ. ಡಿ .ಧನಂಜಯ, ಬಿ ಎಂ ಓಬಣ್ಣ, ಡಿ ಬಿ ಬೋರಯ್ಯ, ನೀರಾವರಿ ಹೋರಾಟ ಸಮಿತಿ ಹೋಬಳಿ ಅಧ್ಯಕ್ಷ ಜಿ ಬಿ ಮುದಿಯಪ್ಪ, ಜಿಲ್ಲಾ ಕೈಗಾರಿಕಾ ಉಪನಿರ್ದೇಶಕ ಕೆ ಬಿ ಮಂಜುನಾಥ್, ಸಿ ಬಿ ಮೋಹನ್ ಚೌಳಕೆರೆ, ಮಲ್ಲಕ್ ಬೋರಯ್ಯ, ಪಿ ಬಿ ತಿಪ್ಪೇಸ್ವಾಮಿ, ಡಾನ್ ಬಾಸ್ಕೋ ಶಾಲೆಯ ಮುಖ್ಯಸ್ಥ ಬೋರ್ ಸ್ವಾಮಿ, ಸೇರಿದಂತೆ ಬೊಸೆದೇವರಹಟ್ಟಿ ಗ್ರಾಮದ ಸಮಸ್ತ ಮುಖಂಡರು ಗ್ರಾಮಸ್ಥರು ಇದ್ದರು

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page