ಚಿತ್ರದುರ್ಗ :
ಕಲ್ಬುರ್ಗಿಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪ್ರತಿಮೆಗೆ ಅವಮಾನ ಮಾಡಿರುವ ಕಿಡಿಗೇಡಿಗಳನ್ನು ಈ ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕು ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ರವರ 250 ಅಡಿ ಕಂಚಿನ ಪ್ರತಿಮೆಯನ್ನು ರಾಜ್ಯದಲ್ಲಿ ಅನಾವರಣ ಮಾಡಲು ಅನುಮತಿ ನೀಡಬೇಕು ಎಂಬುದಾಗಿ ಕರ್ನಾಟಕ ಭೀಮ್ ಸೇನೆಯ ರಾಜ್ಯ ಕಾರ್ಯದರ್ಶಿಗಳಾದ ವಿ.ಶಿವಕುಮಾರ್ ಒತ್ತಾಯಿಸಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕರ್ನಾಟಕ ಭೀಮ್ ಸೇನೆಯ ರಾಜ್ಯಾಧ್ಯಕ್ಷರಾದ ಶ್ರೀಶಂಕರರಾಮಲಿಂಗಯ್ಯರವರ ಆದೇಶದ ಮೇರೆಗೆ ಕರ್ನಾಟಕ ಭೀಮ್ ಸೇನೆ ರಾಜ್ಯ ಸಮಿತಿ, ಜಿಲ್ಲಾ ಸಮಿತಿ ಮತ್ತು ತಾಲ್ಲೂಕು ಸಮಿತಿಯ ವತಿಯಿಂದ ಕಲ್ಬುರ್ಗಿಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಅವಮಾನ ಮಾಡಿರುವ ಕಿಡಿಗೇಡಿಗಳನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿ, ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಿ, ನಂತರ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಭೀಮ್ ಸೇನೆಯ ರಾಜ್ಯ ಕಾರ್ಯದರ್ಶಿಗಳಾದ ವಿ.ಶಿವಕುಮಾರ್, ಜಿಲ್ಲಾ ಅಧ್ಯಕ್ಷರಾದ ಮಸ್ಕಲ್ ಮಟ್ಟಿ ರಮೇಶ್, ಜಿಲ್ಲಾ ಉಸ್ತುವಾರಿ ಅಧ್ಯಕ್ಷರಾದ ರೇವಣ್ಣಸಿದ್ದಪ್ಪ, ಜಿಲ್ಲಾ ಉಪಾಧ್ಯಕ್ಷರಾದ ಲಿಂಗರಾಜ್, ಹಿರಿಯ ಮುಖಂಡರಾದ ವೃಷಬೇಂದ್ರ ಬಾಬು, ಜಿಲ್ಲಾ ಕಾರ್ಯದರ್ಶಿಗಳಾದ ದೇವರಾಜ್ ಹೊಳಲ್ಕೆರೆ, ತಾಲ್ಲೂಕು ಅಧ್ಯಕ್ಷರಾದ ತಿಪ್ಪೇಶ್, ಹಿರಿಯೂರು ತಾಲ್ಲೂಕು ಕಾರ್ಯಾಧ್ಯಕ್ಷರಾದ ತಿಮ್ಮಯ್ಯ ಬಗ್ಗನಾಡು. ಯುವ ಘಟಕದ ಅಧ್ಯಕ್ಷರಾದ ಮಹೇಶ್ ಪಟ್ರಹಳ್ಳಿ , ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಮಹಮ್ಮದ್ ಖಾಸಿಂ, ಉಪಾಧ್ಯಕ್ಷರಾದ ಅಬ್ದುಲ್, ನಗರ ಘಟಕದ ಅಧ್ಯಕ್ಷರಾದ ರಘು, ಡಿ.ಕೆ.ಅಬೀಬ್, ಮಂಜುನಾಥ್ ಸೇರಿದಂತೆ ಅನೇಕರು ಉಪಸ್ಥಿಜತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments