![](https://janadhwani.in/wp-content/uploads/2024/01/Screenshot_20240112_062238.png)
ಚಿತ್ರದುರ್ಗ ಜಿಲ್ಲೆಯ: ಹೊಳಲ್ಕೆರೆಯಲ್ಲಿ ಪುರಸಭೆ ಸದಸ್ಯರು ಹಾಗೂ ಮಾಜಿ ಸಚಿವ ಎಚ್.ಆಂಜನೇಯ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದೆ. ನೀರಿನ ಟ್ಯಾಂಕ್ ವಿಚಾರವಾಗಿ ಈ ಘಟನೆ ನಡೆದಿದ್ದು ಎನ್ನಲಾಗಿದೆ.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪುರಸಭೆ ಸದಸ್ಯರು ಹಾಗೂ ಬೆಂಬಲಿಗರ ನಡುವೆ ಸಿನಿಮಾ ಶೈಲಿಯಲ್ಲಿ ಹೊಡೆದಾಟ ನಡೆದ ಘಟನೆ ನಡೆದಿದೆ. ನೀರಿನ ಟ್ಯಾಂಕ್ ವಿಚಾರವಾಗಿ ಪುರಸಭೆ ಸದಸ್ಯರಾದ ಕೆ.ಸಿ ರಮೇಶ್ ಹಾಗೂ ಸುಧಾ ಬಸವರಾಜ್ ಗುಂಪಿನ ನಡುವೆ ಹೊಡೆದಾಟ ನಡೆದಿದೆ.
ನೀರಿನ ಟ್ಯಾಂಕ್ ವಿಚಾರವಾಗಿ ಪುರಸಭೆ ಸದಸ್ಯರಾದ ಕೆ.ಸಿ ರಮೇಶ್ ಹಾಗೂ ಸುಧಾ ಬಸವರಾಜ್ ಬೆಂಬಲಿಗರು ಪರಪಸ್ಪರ ಕಲ್ಲು ಹಾಗೂ ದೊಣ್ಣೆಗಳಿಂದ ಹೊಡೆದಾಡಿಕೊಂಡಿದ್ದಾರೆ.
ಹೊಳಲ್ಕೆರೆ ಪಟ್ಟಣದಲ್ಲಿ ಎರಡು ಗುಂಪುಗಳ ಮಧ್ಯೆ ಕೆಲ ದಿನಗಳ ಹಿಂದೆ ಘರ್ಷಣೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಗೃಹಮಂಡಳಿ ಲೇಔಟ್ನಲ್ಲಿರುವನೀರಿನ ಟ್ಯಾಂಕ್ ನೆಲಸಮ ಮಾಡುವ ವಿಚಾರವಾಗಿ ಭಿನ್ನಾಭಿಪ್ರಾಯ ಉಂಟಾಗಿ ಎರಡು ತಂಡಗಳ ನಡುವೆ ಗಲಾಟೆ ನಡೆದಿದೆ.
ಹೊಳಲ್ಕೆರೆ ತಹಶೀಲ್ದಾರ್ ಹಾಗೂ ಪುರಸಭೆ ಅಧಿಕಾರಿಗಳ ಎದುರಲ್ಲೇ ಎರಡು ಗುಂಪಿನ ಸದಸ್ಯರು ಹಾಗೂ ಬೆಂಬಲಿಗರ ನಡುವೆ ಘರ್ಷಣೆ ನಡೆದಿದ್ದು, ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿದೆ.
0 Comments