ಕಳ್ಳತನ ಮಾಡುತ್ತಿದ್ದ ಆರೋಪಿಯ ಬಂಧನ, ನಗದು ಮತ್ತು ಬೈಕ್ ವಶ

by | 13/03/23 | ಕ್ರೈಂ, ಸುದ್ದಿ

ಚಳ್ಳಕೆರೆ ಮಾ13
ಚಳ್ಳಕೆರೆ ಪೊಲೀಸರಿಂದ ಕಳ್ಳತನ ಮಾಡುತ್ತಿದ್ದ ಆರೋಪಿಯ ಬಂಧನ, ನಗದು ಮತ್ತು ಬೈಕ್ ವಶ

ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಿನಾಂಕ.೧೦.೦೩.೨೦೨೩ ರಂದು ಮನೆ ಮುಂದೆ
ನಿಲ್ಲಿಸಿದ್ದ ಬೈಕನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ಚಳ್ಳಕೆರೆ ಪೊಲೀಸ್
ಠಾಣೆ ಮೊ.ನಂ.೮೪/೨೦೨೩ ಕಲಂ.೩೭೯ ಐ.ಪಿ.ಸಿ. ಪ್ರಕರಣ ದಾಖಲಾಗಿರುತ್ತದೆ. ದಿನಾಂಕ.೧೧.೦೩.೨೦೨೩
ರಂದು ನಗರದ ಸಂಗೀತ ಮೊಬೈಲ್ ಶಾಪ್‌ನ ಬೀಗ ಮುರಿದು ಕಳ್ಳತನಕ್ಕೆ ಪ್ರಯತ್ನಪಟ್ಟಿರುವ ಬಗ್ಗೆ
ಮೊ.ನಂ.೮೬/೨೦೨೩ ಕಲಂ.೩೮೦,೫೧೧ ಐ.ಪಿ.ಸಿ. ಮತ್ತು ವಿನಾಯಕ ಕಾಂಡಿಮೆAಟ್ಸ್ ಅಂಗಡಿಯ ಬೀಗವನ್ನು
ಮುರಿದು ಅಂಗಡಿಯಲ್ಲಿ ಇಟ್ಟಿದ್ದ ೨೦ ಸಾವಿರ ಹಣವನ್ನು ಕಳ್ಳತನವಾಗಿರುವ ಬಗ್ಗೆ ಮೊ.ನಂ.೮೭/೨೦೨೩
ಕಲಂ.೪೫೭,೩೮೦ ಐ.ಪಿ.ಸಿ. ರೀತ್ಯ ಪ್ರಕರಣಗಳು ದಾಖಲಾಗಿರುತ್ತವೆ.
ಸದರಿ ಪ್ರಕರಣಗಳಲ್ಲಿ ಆರೋಪಿ ಮತ್ತು ಮಾಲನ್ನು ಪತ್ತೆ ಮಾಡಲು ಚಳ್ಳಕೆರೆ ಪೊಲೀಸ್
ಉಪಾಧೀಕ್ಷಕರಾದ ಶ್ರೀ ರಮೇಶ್ ಕುಮಾರ್ ರವರ ನಿರ್ದೇಶನದಲ್ಲಿ ಪೊಲೀಸ್ ನಿರೀಕ್ಷಕರಾದ
ಆರ್.ಎಫ್ ದೇಸಾಯಿ, ಪಿ.ಎಸ್.ಐ ಸತೀಶ್ ನಾಯ್ಕ ಹಾಗೂ ಸಿಬ್ಬಂದಿಗಳಾದ ಹಾಲೇಶ್, ಸತೀಶ್,
ಶ್ರೀಧರ್, ವಸಂತ್ ರವರನ್ನು ಒಳಗೊಂಡ ತಂಡವು ಮಾಹಿತಿಯನ್ನು ಸಂಗ್ರಹಿಸಿ ದಿನಾಂಕ:೧೨.೦೩.೨೦೨೩
ರಂದು ಎಂ.ಓ.ಬಿ ಆಸಾಮಿಯಾದ ನವೀನ ತಂದೆ ಲೇಟ್ ವಿಶ್ವನಾಥ, ಕೂಲಿ ಕೆಲಸ ಚಳ್ಳಕೆರೆ ಟೌನ್
ಈತನನ್ನು ಹಿಡಿದು ವಶಕ್ಕೆ ಪಡೆದುಕೊಂಡು ವಿಚಾರಣೆ ಮಾಡಲಾಗಿ ಸದರಿ ಆಸಾಮಿಯು
ದಿನಾಂಕ:೦೫.೦೩.೨೦೨೩ ರಂದು ರಾತ್ರಿ ಚಳ್ಳಕೆರೆ ನಗರದ ಪಾವಗಡ ರಸ್ತೆ, ೫ನೇ ಕ್ರಾಸ್, ಹಳೇ ಟೌನ್ ನ
ಒಂದು ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ನಂ.ಕೆ.ಎ.೩೫-ವಿ-೭೦೨೩ ನೇ ಪ್ಯಾಷನ್ ಪ್ರೋ ಬೈಕನ್ನು,
ದಿನಾಂಕ:೦೭.೦೩.೨೦೨೩ ರಂದು ರಾತ್ರಿ ಚಳ್ಳಕೆರೆ ಟೌನ್ ಸಂಗೀತ ಮೊಬೈಲ್ ಶಾಪ್ ನಲ್ಲಿ ಕಳ್ಳತನಕ್ಕೆ
ಪ್ರಯತ್ನ ಹಾಗೂ ಚಳ್ಳಕೆರೆ ಟೌನ್ ಬಳ್ಳಾರಿ ರಸ್ತೆಯಲ್ಲಿ ವಿನಾಯಕ ಕಾಂಡಿಮೆAಟ್ಸ್ ಅಂಗಡಿಯ ಬಾಗಿಲು
ಮುರಿದು ಒಳಗೆ ಹೋಗಿ ಅಂಗಡಿ ಡ್ರಾನಲ್ಲಿ ಇದ್ದ ೨೦,೦೦೦/- ರೂ ನಗದು ಹಣವನ್ನು ಕಳ್ಳತನ
ಮಾಡಿರುತ್ತೇನೆ ಎಂದು ಒಪ್ಪಿಕೊಂಡಿದ್ದು, ಆರೋಪಿತನಿಂದ ಕಳ್ಳತನ ಮಾಡಿದ ನಂ.ಕೆ.ಎ.೩೫-ವಿ-೭೦೨೩
ನೇ ಪ್ಯಾಷನ್ ಪ್ರೋ ಬೈಕ್ ಹಾಗೂ ೨೦,೦೦೦/- ರೂ ನಗದು ಹಣವನ್ನು ವಶಕ್ಕೆ ಪಡೆದು
ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕಾಗಿ ಒಪ್ಪಿಸಲಾಗಿರುತ್ತದೆ.
ಸದರಿ ಪತ್ತೆ ಕಾರ್ಯವನ್ನು ಮಾನ್ಯ ಪೊಲೀಸ್ ಅಧೀಕ್ಷಕರು, ಚಿತ್ರದುರ್ಗ ಜಿಲ್ಲೆ ರವರು
ಶ್ಲಾಘಿಸಿರುತ್ತಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page