ಚಳ್ಳಕೆರೆ ಮೇ 18 ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಪರ ಕಾಲಿಗೆ ಚಕ್ರ ಕಟ್ಟಿಕೊಂಡು ಪ್ರಚಾರ ಮಾಡಿದ ಬೆನ್ನಲ್ಲೆ ಈಗ ಆಗ್ನೇಯ ಶಿಕ್ಷಕರ ಕ್ಷೇತ್ರ ಅಭ್ಯರ್ಥಿ ಡಿ.ಟಿ .ಶ್ರೀನಿವಾಸ್ ಪರ ಶಾಸಕ ಟಿ.ರಘುಮೂರರ್ತಿ ಮತಯಾಚನೆ ಮಾಡಲು ಮುಂದಾಗಿದ್ದಾರೆ.
ಹೌದು ಇದು ಚಳ್ಳಕೆರೆ ನಗರದ ಹೆಚ್ ಪಿಪಿಸಿ ಸರಕಾರಿ ಪ್ರದವಿಪೂರ್ವ ಕಾಲೇಜ್, ಖಾಸಗಿ ಅನುದಾನಿತ ಹಾಗೂ ಅನುದಾನ ರಹಿಸಿ ಶಿಕ್ಷಣ ಸಂಸ್ಥೆಯ ಮುಖ್ಯರ ಹಾಗೂ ಶಿಕ್ಷಕರೊಂದಿಗೆ ಸಭೆ ನಡೆಸಿ ಕಾಂಗ್ರೆಸ್ ಅಭ್ಯರ್ಥಿ ಡಿ,ಟಿ,ಶ್ರೀನಿವಾಸ್ ಮೊದಲ ಪ್ರಾಶಸ್ತ ಮತ ನೀಡುವಂತೆ ಮನನಿ ಮಾಡಿಕೊಂಡಿದ್ದಾರೆ.
ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು ಜಾರಿಯಾಗಲು ಮೇಲ್ಮನವಿಯಲ್ಲಿ ಪಕ್ಷದ ಬಹುಮತ ಇರಬೇಕು,ಶಿಕ್ಷಕರ ಬೇಡಿಕೆಯಂತೆ ಒಪಿಎಸ್ ಜಾರಿ ಮಾಡಲು ಮತ್ತು 7 ನೇ ವೇತನ ಆಯೋಗದ ಸಿದ್ದತೆ ಸರ್ಕಾರದ ಚಿಂತನೆಯಾಗಿದೆ. ಸಮಾಜದ ಸಮಗ್ರ ಬೆಳವಣಿ ಗೆಗೆ ಶಿಕ್ಷಣ ವಲಯ ಅಭಿವೃದ್ದಿಯಾಗಬೇಕಿದೆ.
ಶೈಕ್ಷಣಕ ಕಾರ್ಯಕ್ರಮಗಳಾಗಿ ಬಿಸಿಯೂಟ, ಶೂ ಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ವಿದ್ಯಾರ್ಥಿಗಳ ಶಿಕ್ಷಣ ಪ್ರಗತಿ ಮತ್ತು ದಾಖಲಾತಿ ಹೆಚ್ಚಳ ಆಗುವ ರೀತಿ ಯೋಜನೆಗಳನ್ನು ಜಾರಿ ಮಾಡಿರುವ ಕೀರ್ತಿ ಕಾಂಗ್ರೆಸ್ ಸರಕಾರಕ್ಕೆ ಸಲ್ಲುತ್ತದೆ. ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಪಕ್ಷದ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಬೆಂಬಲಿಸಿ ಮತದಾನ ಮಾಡಬೇಕು ಎಂದು ಮನವಿ ಮಾಡಿಕೊಂಡರು.
ಮಾಜಿ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಮಾತನಾಡಿ, ಎನ್ಪಿಎಸ್ ರದ್ದು ಮಾಡಬೇಕೆಂದು ಫ್ರೀಡಮ್ ಪಾರ್ಕಲ್ಲಿ ಶಿಕ್ಷಕರು ಪ್ರತಿಭಟನೆ ನಡೆಸಿ ಆತ್ಮಹತ್ಯೆಗೂ ಯತ್ನಿಸಿದ್ದರೂ ಕಳೆದ ಬಿಜೆಪಿ ಸರ್ಕಾರದಲ್ಲಿ ನ್ಯಾಯ ಸಿಗಲಿಲ್ಲ. ಎನ್ಪಿಎಸ್ ರದ್ದುಪಡಿಸಲು ಮತ್ತು 7 ನೇ ವೇತನ ಜಾರಿ ಮಾಡಲು 2ನೇ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ದತೆ ಮಾಡಿಕೊಂಡಿದ್ದಾರೆ. ಶಿಕ್ಷಣ ವ್ಯವಸ್ಥೆಯನ್ನು ಸಮಾನವಾಗಿ ಕಾಣಬೇಕಿದೆ. ಕಳೆದ ಬಿಜೆಪಿ ಸರ್ಕಾರ ಮಕ್ಕಳಿಗೆ ಮೊಟ್ಟೆ ನೀಡುವಲ್ಲಿ ಜಾತಿ, ವರ್ಗ ಬೇಧ ಮಾಡಲಾಯಿತು. ಸಾಮಾಜಿಕ ನ್ಯಾಯಬದ್ದತೆಯಲ್ಲಿ ಆಡಳಿತ ಮಾಡುವ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಪಡಿಸಬೇಕು. ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಡಿ.ಟಿ. ಶ್ರೀನಿವಾಸ್ ಸ್ಪರ್ಧಿಸಲು ಅವಕಾಶವಾಗಿದೆ. ಮತದಾನ ಗೆಲ್ಲಿಸಬೇಕು ಎಂದರು.
ಕೆಪಿಸಸಿ ಪ್ರಧಾನ ಕಾರ್ಯದರ್ಶಿ ನರ್ಲಗಗುಂಟೆ ರಾಮಪ್ಪ,ಜಿ.ಪಂ ಮಾಜಿ ಅಧ್ಯಕ್ಷರಾದ ಬಾಲರಾಜ್, ಟಿ. ರವಿಕುಮಾರ್, ಶಶಿಕಲಾ ಸುರೇಶ್ಬಾಬು, ಸದಸ್ಯ ಜಿ.ಟಿ. ಬಾಬುರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ. ವೀರಭದ್ರಯ್ಯ, ಜಿ.ಟಿ. ಶಶಿಧರ, ಶಿಕ್ಷಕರಾದ ಜಿ.ಟಿ. ವೀರಭದ್ರಸ್ವಾಮಿ, ಎಲ್. ರುದ್ರಮುನಿ, ದೊಡ್ಡಯ್ಯ, ಸೂರನಾಯಕ, ಡಿ.ಟಿ. ಶ್ರೀನಿವಾಸನ್, ಗುರುಲಿಂಗಪ್ಪ, ಸಿ.ಟಿ. ವೀರೇಶ್, ಚಿಕ್ಕಣ್ಣ, ಮಾರುತಿ, ಅನ್ವರ್, ಮುಖಂಡರಾದ ಬಿ.ವಿ. ಸಿರಿಯಪ್ಪ, ಬ್ಯಾಂಕ್ ಸೂರಯ್ಯ, ಪ್ರಭುಸ್ವಾಮಿ, ತಿಪ್ಪೇರುದ್ರಪ್ಪ, ಸಿದ್ದಲಿಂಗಪ್ಪ ಇತರರಿದ್ದರು.
0 Comments