ಚಳ್ಳಕೆರೆ ಜನಧ್ವನಿ ವಾರ್ತೆ ಮಾ 1. ಕಾಂಗ್ರೆಸ್ ಪಕ್ಷದ ಭರವಸೆಗಳ ಗ್ಯಾರೆಂಟಿ ಕಾರ್ಡ್ ವಿತರಣೆ…ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸುವ ಜತೆಗೆ ಕ್ಷೇತ್ರ ಅಭಿವೃದ್ಧಿ ನಗ್ಗೆ ಮತದಾರಲ್ಲಿ ಜಾಗೃತಿ ಮೂಡಿಸುವಂತೆ ಶಾಸಕ ಟಿ.ರಘುಮೂರ್ತಿ ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.
ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಹತ್ತು ವರ್ಷಗಳಲ್ಲಿ ನಡೆದಿರುವ ಅಭಿವೃದ್ದಿ ಕಾಮಗಾರಿಗಳ 2023 ರ ಕ್ಯಾಲೆಂಡರ್ ಹಾಗೂ ಕಾಂಗ್ರೆಸ್ ಪಕ್ಷದ ಹ್ಯಾರೆಂಟಿ ಕಾರ್ಡ್ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ಚುನಾವಣೆ ಸಮೀಪವಾಗುತ್ತಿದ್ದಂತೆಯೇ ಕ್ಷೇತ್ರದಲ್ಲಿ ಬೂತ್ ಮಟ್ಟದಿಂದ ಈಗಿನಿಂದಲೇ ಪಕ್ಷ ಸಂಘಟನೆ ಹಾಗೂ ಕ್ಷೇತ್ರದ ಅಭಿವೃದ್ಧಿ ಹಾಗೂ ಬಿಜೆಪಿ ಪಕ್ಷದ ದುರಾಡಳಿತ ಬಗ್ಗೆ ಮತದಾರರಿಗೆ ಜಾಗೃತಿ ಮೂಡಿಸುವ ಜತೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ತಕ್ಷಣ ಕಾಂಗ್ರೆಸ್ ಪಕ್ಷದ ಭರವಸೆಗಳ ಗ್ಯಾರಂಟಿ ಕಾರ್ಡ್ ವಿತರಣೆ ಮಾಡಿದ್ದಾರೆ.ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಮತದಾರರಿಗೆ ಲಭ್ಯವಾಗುವ
ಯೋಜನೆಗಳಾದ ಗೃಹಲಕ್ಷ್ಮಿ.ಗೃಹಜ್ಯೋತಿ ಯೋಜನೆಗಳು ಗ್ಯಾರೆಂಟಿ ಕಾರ್ಡ್ ಗಳನ್ನು ಪ್ರತಿ ಮನೆಗಳಿಗೆ ಪಕ್ಷ ಬೇದ ಮರೆತು ವಿತರಣೆ ಮಾಡ ಬೇಕು ಹಾಗೂ ಕಾಂಗ್ರೆಸ್ ಪಕ್ಷದ ಜನಪರ ಯೋಜನೆಗಳು,ಬಿಜೆಪಿಯವರ ಜನವಿರೋಧಿ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸುವ ಮೂಲಕ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಕಾರ್ಯಕರ್ತರು ಮುಂದಾಗುವಂತೆ ತಿಳಿಸಿದ್ದಾರೆ.
ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಜನಪ್ರತಿ ನಿಧಿಗಳು .ಕಾರ್ಯಕರ್ತರು ಮನೆ ಮನೆಗೆ ತೆರಳಿ ಗ್ಯಾರಂಟಿ ಕಾರ್ಡ್ ವಿತರಣೆ ಮಾಡಲು ಮುಂದಾಗಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments