ಚಳ್ಳಕೆರೆ ಜನಧ್ವನಿವಾರ್ತೆ ಫೆ.;25
ನಾನು ನಿಮ್ಮ ಬಳಿ ಈಗಾ ಓಟು ಕೇಳಲು ಬಂದಿಲ್ಲ ನಿಮ್ಮ ಗ್ರಾಮದಲ್ಲಿನ ಸಮಸ್ಯೆಗಳನ್ನು ಕೇಳಲು ಬಂದಿದ್ದೇನೆ ನಾನು ಚುನಾವಣೆಗೂ ಮುನ್ನ ಜನರ ಸಮಸ್ಯೆಗಳನ್ನು ಹಾಲಿಸಿ ಪಟ್ಟಿ ಮಾಡುವ ಮೂಲಕ ಬಗೆಹರಿಸಿದ್ದೇನೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ತಾಲೂಕಿನ ನನ್ನಿವಾಳ ಗ್ರಾಪಂ ವ್ಯಾಪ್ತಿಯ ಬುಡಕಟ್ಟು ಸಂಸ್ಕೃತಿಯ ಹಟ್ಟಿಗಳಿಗೆ ಹಾಗೂ ತಾಲೂಕಿನ ವಿವಿಧ ಗ್ರಾಮಗಳಿಗೆ ಪ್ರವಾಸ ಕೈಗೊಂಡು ಕಾರ್ಯಕರ್ತರ ಸಭೆ , ಕುಂದು ಕೊರತೆಗಳ ಸಭೆ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಜಾಹಿರಾತು.
ಪ್ರತಿ ಗ್ರಾಪಂ ವ್ಯಾಪ್ತಿಯಲ್ಲೂ ಕಾಂಗ್ರೆಸ್ ಕಾರ್ಯಕರ್ತರ ವಾಟ್ಸ್ ಆಪ್ ಗ್ರೂಪ್ ರಚನೆ ಮಾಡಿ ಗ್ರಾಮದಲ್ಲಿನ ಸಮಸ್ಯೆಗಳ ಬಗೆಹರಿಸಲಾಗುವುದು. ನಾನು ಕಳೆದ ಹತ್ತು ವರ್ಷಗಳ ಹಿಂದೆ ಚುನಾವಣೆಗೆ ಸ್ಪರ್ಧಿಸುವ ಮುನ್ನ ಕ್ಷೇತ್ರದಲ್ಲಿ ಸಂಚರಿಸಿ ಜನಸಂಪರ್ಕ ಸಭೆಗಳನ್ನು ಮಾಡುವ ಮೂಲಕ ಕ್ಷೇತ್ರದಲ್ಲಿ ಅಗತ್ಯ ಮೂಲ ಭೂತ ಸೌಲಭ್ಯಗಳನ್ನು ಪಟ್ಟಿ ಮಾಡುವ ಮೂಲಕ ರಸ್ತೆ, ಚರಂಡಿ, ಶಿಕ್ಷಣ,ಸಾರಿಗೆ, ನಿರುದ್ಯೋಗ, ಕುಡಿಯುವ ನೀರು, ವೇದಾವತಿ ನದಿಗೆ ಬ್ಯಾರೇಜ್ , ಬ್ರಿಡ್ಜ್ ಕಂ ಬ್ಯಾರೇಜ್ ,ನದಿಗೆ ನೀರು ಹರಿಸುವುದು, ಕೆರೆಗಳ ಅಭಿವೃದ್ಧಿ, ಸರಕಾರಿ ಶಾಲಾ ಕಾಲೇಜ್ ಅಭಿವೃದ್ದಿ ಸೇರಿದಂತೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಸಿದ್ದರಾಮಯ್ಯ ಮುಖ್ಯ ಮಂತ್ರಿ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅನುದಾನ ಬಿಡುಗಡೆ ಗೊಳಿಸಿದ್ದರು ಜತೆಗೆ ಸಂಸದ, ವಿಧಾನಪರಿಷತ್ ಸದಸ್ಯರ ಸಹಾಕಾರದಿಂದ ಕ್ಷೇತ್ರದ ಅಭಿವೃದ್ಧಿ ಮಾಡಲಾಗಿದೆ.
ಬಿಜೆಪಿ ಪಕ್ಷದ ದುರಾಡಳಿತ, ಕಾಂಗ್ರೆಸ್ ಪಕ್ಷದ ಮಹತ್ತರ ಯೋಜನೆಗಳನ್ನು ಮತದಾರರ ಮನೆ ಮನೆಗೆ ತಲುಪಿಸುವ ಮೂಲಕ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಮೂಲ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಕಾರ್ಯಕರ್ತರು ಶ್ರಮಿಸ ಬೇಕು .
ಮೋದಿಯವರು ಮಾತೆತ್ತಿದರೆ ಅಚ್ಛೇ ದಿನ್ ಆಯೇಗ ಎಂದು ಹೇಳುತ್ತಾರೆ. ಆದರೆ, ಇಂದು ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ಅಗತ್ಯವಸ್ತುಗಳ ಬೆಲೆ ಏರಿಕೆಯಿಂದ ಏನನ್ನೂ ಕೊಂಡುಕೊಳ್ಳಲು ಆಗದೆ ಜನರು ಬದುಕಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದರು.
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರ, ಶಿಕ್ಷಣ, ಉದ್ಯೋಗ ಸೇರಿದಂತೆ ಯಾವುದೇ ಹೊಸ ಕಾರ್ಯಕ್ರಮಗಳನ್ನು ರೂಪಿಸಿಲ್ಲ. ದೇಶದಲ್ಲಿ ರೈತರು ಒಂದು ವರ್ಷದಿಂದ ಹೋರಾಟ ಮಾಡುತ್ತಿದ್ದಾರೆ. ಅವರ ಸಮಸ್ಯೆಗಳನ್ನು ಬಗೆಹರಿಸದೆ ಬಂಡವಾಳಶಾಹಿಗಳ ಪರವಾಗಿ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ. ರೈತರ ಹೋರಾಟಗಳಿಗೆ ಕಾಂಗ್ರೆಸ್ ಎಂದಿಗೂ ಜೊತೆಯಗಿ ನಿಲ್ಲಲಿದೆ ಎಂದು ಘೋಷಿಸಿದರು.
ಪಡಿತರ 7 ರಿಂದ 10 ಕೆ.ಜಿ ವಿತರಣೆ ಜಾಹಿರಾತು.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣವೇ ಪ್ರತಿ ತಿಂಗಳು, ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ಉಚಿತ!
ಬೆಲೆಯೇರಿಕೆಯಿಂದ ಸಂಕಷ್ಟದಲ್ಲಿರುವ, ನಿರುದ್ಯೋಗದಿಂದ ಬಳಲುತ್ತಿರುವ ಬಡ ಹಾಗೂ ಶ್ರಮಿಕ ವರ್ಗದ ಜನರಿಗಾಗಿ, ಸಮಾಜದಲ್ಲಿ ಸಮಾನತೆ ಸ್ಥಾಪಿಸಲು, ಪ್ರತಿಯೊಬ್ಬರಿಗೂ ಬದುಕುವ ಸಮಾನ ಅವಕಾಶವನ್ನು ಒದಗಿಸಲು, ನಾಡಿನ ಪ್ರತಿಯೋಬ್ಬರಿಗೂ ಹಸಿವು-ಮುಕ್ತ ಗೌರವಯುವ ಜೀವನಕ್ಕೆ ಅವಕಾಶ ನೀಡಲು ಕಾಂಗ್ರೆಸ್ ಪಕ್ಷದ ಐತಿಹಾಸಿಕ ನಿರ್ಣಯ!
ಜನಸಾಮಾನ್ಯರ ಮೇಲೆ ಯಾವುದೇ ಹೆಚ್ಚಿನ ತೆರಿಗೆ ಹೊರೆ ಆಗದಂತೆ, ಈ ಅನ್ನಭಾಗ್ಯ ಯೋಜನೆಯನ್ನು ಮತ್ತೊಮ್ಮೆ ಜಾರಿಗೆ ತರಲು ಕಾಂಗ್ರೆಸ್ ಪಣ ತೊಟ್ಟಿದೆ.
ಗ್ಯಾರೆಂಟ್ ಕಾರ್ಡ್ ವಿತರಣೆ.
ಪ್ರತಿ ಕುಟುಂಬದ ಒಬ್ಬ ಮಹಿಳಾ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ ಗೃಹಲಕ್ಷ್ಮಿ ಬಾಂಡ್ ಹಾಗೂ 200 ಯೂನಿಟ್ ಉಚಿತ ವಿದ್ಯುತ್ ಕಾರ್ಯಕ್ರಮವನ್ನು ಕೆ.ಪಿ.ಸಿ.ಸಿ. ಅಧ್ಯಕ್ಷರ ಆದೇಶದ ಮೇರೆಗೆ ಪ್ರತಿ ಮನೆಗೆ ಈ ಯೋಜನೆಗಳನ್ನು ತಲುಪಿಸುವಂತೆ ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ವೀರಭದ್ರಯ್ಯ, ಶಶಿಧರ್, ಮಾಜಿ ಜಿಪಂಸದಸ್ಯ ಪ್ರಕಾಶ್ ಮೂರ್ತಿ, ಗ್ರಾಪಂ ಸದಸ್ಯ ಅಧ್ಯಕ್ಷ ಉಪಾಧ್ಯಕ್ಷ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
0 Comments